Homeಮುಖಪುಟಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ...

ಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿದ ರಾಹುಲ್‌

- Advertisement -
- Advertisement -

ಛತ್ತೀಸ್‌ಗಢದ ಕೊರ್ಬಾದಿಂದ ಇಂದು ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದೆ. ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಮಂದಿ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಯಾತ್ರೆ ವೇಳೆ ಮಾತನಾಡಿದ ರಾಹುಲ್‌ ಗಾಂಧಿ ರಾಮಮಂದಿರ ಪ್ರಾಣ ಪ್ರತಿಷ್ಠಾಪಣೆ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳಿಗೆ ಆಹ್ವಾನ ಕಳುಹಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರ್ಬಾದಲ್ಲಿ ಯಾತ್ರೆಯ ವೇಳೆ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಭಾವುಟವನ್ನು ಪ್ರದರ್ಶಿಸಿ ಮೋದಿ-ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪ್ರೀತಿಯಿಂದ ತೆರೆದ ಜೀಪಿನಿಂದ ಇಳಿದು ಬಂದ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಹಸ್ತಲಾಘವ ಮಾಡಿದ್ದಾರೆ.

ಈ ಬಿಜೆಪಿ ಕಾರ್ಯಕರ್ತರನ್ನು ಯಾತ್ರೆಯ ವಿರುದ್ಧ ಪ್ರತಿಭಟಿಸಲು ಕಳುಹಿಸಲಾಗಿದೆ, ಆದರೆ ರಾಹುಲ್ ಗಾಂಧಿ ಅವರು ಪ್ರತಿಭಟನಾಕಾರರನ್ನು ಭೇಟಿಯಾದಾಗ ಅವರ ಮುಖದಲ್ಲಿನ ಸಂತೋಷವನ್ನು ನೋಡಬೇಕಾಗಿದೆ. ಪ್ರೀತಿಯ ಶಕ್ತಿಯನ್ನು ಈ ವಿಡಿಯೋದಲ್ಲಿ ನೋಡಿ ಎಂದು ಭಾರತ್‌ ಜೋಡೋ ನ್ಯಾಯ ಯಾತ್ರೆ ಕುರಿತ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಎರಡು ದಿನಗಳ ವಿರಾಮದ ನಂತರ ಭಾನುವಾರ ಛತ್ತೀಸ್‌ಗಢದ ರಾಯಗಢ ಜಿಲ್ಲೆಯಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ಗಾಂಧಿ ಚೌಕ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ರಾಹುಲ್‌ ಗಾಂಧಿ ಮಾಲಾರ್ಪಣೆ ಮಾಡಿದ್ದು, ನಂತರ ಯಾತ್ರೆಯು ಖಾರ್ಸಿಯಾ ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರಿದಿದೆ.

ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಗಾಂಧಿ ಚೌಕ್‌ನಲ್ಲಿ ಜಮಾಯಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್, ಛತ್ತೀಸ್‌ಗಢ ಕಾಂಗ್ರೆಸ್‌ ಮುಖ್ಯಸ್ಥ ದೀಪಕ್ ಬೈಜ್ ಮತ್ತು ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಅವರು ತೆರೆದ ಜೀಪಿನಲ್ಲಿ ರಾಹುಲ್‌ ಗಾಂಧಿ ಜೊತೆ ಯಾತ್ರೆಯಲ್ಲಿ ಸಾಗಿದ್ದರು.

ಯಾತ್ರೆಯು ಒಡಿಶಾದಿಂದ ಗುರುವಾರ ರಾಯಗಢವನ್ನು ಪ್ರವೇಶಿಸಿತ್ತು ಮತ್ತು ಎರಡು ದಿನಗಳ ವಿರಾಮದ ನಂತರ ಭಾನುವಾರ ಮಧ್ಯಾಹ್ನ ಯಾತ್ರೆ ಪುನರಾರಂಭವಾಗಿದೆ. ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ರಾಯ್‌ಗಢ್ ಜಿಲ್ಲೆಯ ರೆಂಗಾರ್‌ಪಾಲಿ ಚೆಕ್‌ಪೋಸ್ಟ್‌ ಮೂಲಕ ಯಾತ್ರೆ ಛತ್ತೀಸ್‌ಗಢ ಪ್ರವೇಶಿಸಿದೆ. ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಿದ್ದರು.

ನಿನ್ನೆ ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದ್ದರು.

ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ. ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಅವಧಿ ಕಡಿತಕ್ಕೆ ನಿರ್ಧಾರ:

ಉತ್ತರಪ್ರದೇಶದಲ್ಲಿ 10-12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅವಧಿಯನ್ನು ಕಡಿಮೆ ಮಾಡಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಯಾತ್ರೆಯು ಫೆ.26ರವೆರೆಗೆ ಮುಂದುವರಿಯುವ ಬಗ್ಗೆ ಈ ಮೊದಲು ಮಾಹಿತಿಯನ್ನು ನೀಡಲಾಗಿತ್ತು. ಆದರೆ ಫೆಬ್ರವರಿ 22ರಿಂದ ಪ್ರಾರಂಭವಾಗುವ ಯುಪಿ ಬೋರ್ಡ್ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಿಂದ ಫೆಬ್ರವರಿ 21ರವರೆಗೆ ಉತ್ತರಪ್ರದೇಶದಲ್ಲಿ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಅಂಶು ಅವಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿದ್ದಾರೆ. ಈ ಹಿಂದೆ ಕೋವಿಡ್ -19 ಅವಧಿಯಲ್ಲಿ ಜನರ ಬಗ್ಗೆ ಕಾಳಜಿ ವಹಿಸಿ ರಾಹುಲ್ ಗಾಂಧಿ ಬಂಗಾಳದಲ್ಲಿ ತಮ್ಮ ರ್ಯಾಲಿಗಳನ್ನು ರದ್ದುಗೊಳಿಸಿದ್ದರು ಎಂದು ಅವಸ್ಥಿ ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಂದು ವಾರಣಾಸಿ ಮೂಲಕ ರಾಜ್ಯವನ್ನು ಪ್ರವೇಶಿಸಲಿದೆ ಮತ್ತು ಫೆಬ್ರವರಿ 19ರಂದು ಭದೋಹಿ, ಪ್ರಯಾಗರಾಜ್ ಮತ್ತು ಪ್ರತಾಪಗಢ ಮೂಲಕ ಅಮೇಥಿ ತಲುಪಲಿದೆ. ಫೆಬ್ರವರಿ 19ರಂದು ಅಮೇಥಿ ಲೋಕಸಭಾ ಕ್ಷೇತ್ರದ ಗೌರಿಗಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದು, ಮರುದಿನ ಫೆಬ್ರವರಿ 20ರಂದು ಯಾತ್ರೆ ರಾಯ್ ಬರೇಲಿ ಮೂಲಕ ಲಕ್ನೋಗೆ ತೆರಳಲಿದೆ. ಫೆಬ್ರವರಿ 21ರಂದು ಯಾತ್ರೆಯು ಲಕ್ನೋದಿಂದ ಉನ್ನಾವ್ ತಲುಪಲಿದ್ದು, ಉನ್ನಾವೋ ನಗರ ಮತ್ತು ಶುಕ್ಲಗಂಜ್ ಮೂಲಕ ಕಾನ್ಪುರವನ್ನು ಯಾತ್ರೆ ಪ್ರವೇಶಿಸಲಿದೆ. ನಂತರ ಕಾನ್ಪುರ, ಝಾನ್ಸಿ ಮೂಲಕ ಯಾತ್ರೆ ಮಧ್ಯಪ್ರದೇಶ ಪ್ರವೇಶಿಸಲಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...