Homeಮುಖಪುಟದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪಲು ರೈಲು ದರ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ ಎಂದು ಘೋಷಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು “ಟ್ರಂಪ್ ಭೇಟಿಯ ವೇಳೆ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ 100 ಕೋಟಿ ಖರ್ಚು ಮಾಡಲಾಗಿದೆ. ಅಲ್ಲದೇ ಪಿಎಂ-ಕೇರ್ಸ್ ನಿಧಿಗೆ ರೈಲ್ವೆ ಇಲಾಖೆಯು 151 ಕೋಟಿ ರೂ ಕೊಡುಗೆ ನೀಡಿದೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಸರ್ಕಾರವು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಹಾಗಾಗಿ “ನಮ್ಮ ಆರ್ಥಿಕತೆಯ ಬೆನ್ನೆಲುಬು” ಮತ್ತು “ನಮ್ಮ ರಾಷ್ಟ್ರದ ಬೆಳವಣಿಗೆಯ ರಾಯಭಾರಿಗಳಾದ ಕಾರ್ಮಿಕರ ರೈಲುದರವನ್ನು ಕಾಂಗ್ರೆಸ್‌ ಪಾವತಿಸಲಿದೆ ಎಂದಿದ್ದಾರೆ.

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

“ವಿದೇಶದಲ್ಲಿ ಸಿಲುಕಿರುವ ನಮ್ಮ ನಾಗರಿಕರಿಗೆ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸುವ ಮೂಲಕ ನಮ್ಮ ಸರ್ಕಾರವು ತನ್ನ ಜವಾಬ್ದಾರಿಯನ್ನು ಮೆರೆದಿದೆ. ಆದರೆ ನಮ್ಮದೇ ರಾಷ್ಟ್ರದಲ್ಲಿರುವ ಕಾರ್ಮಿಕರಿಗೆ ಅದೇ ಸೌಜನ್ಯ ಏಕೆ ತೋರಿಸಲಾಗುವುದಿಲ್ಲ” ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ 

ಕೇಂದ್ರವು ಲಾಕ್ ಡೌನ್ ಘೋಷಿಸುವ ಮುನ್ನ ಯಾವುದೇ ನೋಟಿಸ್ ನೀಡಿರಲಿಲ್ಲ. ಕೇವಲ ನಾಲ್ಕು ಗಂಟೆ ಸಮಯ ಕೊಟ್ಟು ಲಾಕ್‌ಡೌನ್‌ ಘೋಷಿಸಲಾಯಿತು. ಆದ್ದರಿಂದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಮರಳಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.


“1947ರ ವಿಭಜನೆಯ ನಂತರ, ಭಾರತವು ಇಂತಹ ಬೃಹತ್ ಮಾನವ ವೆಚ್ಚದೊಂದಿಗೆ ಒಂದು ದುರಂತಕ್ಕೆ ಸಾಕ್ಷಿಯಾಯಿತು, ಏಕೆಂದರೆ ಸಾವಿರಾರು ವಲಸೆ ಕಾರ್ಮಿಕರು ಮತ್ತು ಕಾರ್ಮಿಕರು ಆಹಾರವಿಲ್ಲದೆ, ಸಾರಿಗೆಯಿಲ್ಲದೆ, ಔಷಧಿಯಿಲ್ಲದೆ ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ನಡೆದು ಮನೆಗೆ ತೆರಳಬೇಕಾಯಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಲ್ಲಿಗೆ ಮರಳುವ ಬಯಕೆಯನ್ನು ಹೊರತುಪಡಿಸಿ, ಅವರಲ್ಲಿ ಏನೇನೂ ಉಳಿದಿರಲ್ಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂದಿಗೂ, ಲಕ್ಷಾಂತರ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡು ನರಳುತ್ತಿದ್ದಾರೆ. ಅವರ ಮನೆ ಮತ್ತು ಕುಟುಂಬಗಳಿಗೆ ಮರಳಲು ಬಯಸಿದರೂ ಅವರ ಬಳಿ ಹಣವಿಲ್ಲ. ಸರ್ಕಾರ ಉಚಿತ ಸಾರಿಗೆ ಒದಗಿಸಿಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು ರೈಲು ಟಿಕೆಟ್‌ಗಾಗಿ ಶುಲ್ಕ ವಿಧಿಸುತ್ತಿರುವುದು ಗೊಂದಲದ ಸಂಗತಿಯಾಗಿದೆ ಎಂದಿದ್ದಾರೆ.

“ಆದ್ದರಿಂದ, ಪ್ರತಿ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ ಸಮಿತಿಯು ಪ್ರತಿ ನಿರ್ಗತಿಕ ಕಾರ್ಮಿಕ ಮತ್ತು ವಲಸೆ ಕಾರ್ಮಿಕರ ರೈಲು ಪ್ರಯಾಣದ ವೆಚ್ಚವನ್ನು ಪ್ರತಿ ಪ್ರದೇಶ ಕಾಂಗ್ರೆಸ್ ಸಮಿತಿಯು ಭರಿಸಲಿದೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಇದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ಇಲ್ಲಿನ ಬಿಜೆಪಿ ಸರ್ಕಾರ ರಾಜ್ಯದೊಳಗಿನ ಬಸ್‌ ಸಾರಿಗೆಗೆ ಮೂರು ಪಟ್ಟು ಬಸ್‌ ದರ ವಿಧಿಸಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷವು ಉಚಿತ ಪ್ರಯಾಣ ಒದಗಿಸಿ ಎಂದು ಒಂದು ಕೋಟಿ ರೂ ನೆರವು ಘೋಷಿಸಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...