Homeಮುಖಪುಟದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತಲುಪಲು ರೈಲು ದರ ವಿಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ ಎಂದು ಘೋಷಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು “ಟ್ರಂಪ್ ಭೇಟಿಯ ವೇಳೆ ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ 100 ಕೋಟಿ ಖರ್ಚು ಮಾಡಲಾಗಿದೆ. ಅಲ್ಲದೇ ಪಿಎಂ-ಕೇರ್ಸ್ ನಿಧಿಗೆ ರೈಲ್ವೆ ಇಲಾಖೆಯು 151 ಕೋಟಿ ರೂ ಕೊಡುಗೆ ನೀಡಿದೆ. ಇಷ್ಟೆಲ್ಲಾ ಇದ್ದರೂ ಕೇಂದ್ರ ಸರ್ಕಾರವು ಕಾರ್ಮಿಕರಿಂದ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಹಾಗಾಗಿ “ನಮ್ಮ ಆರ್ಥಿಕತೆಯ ಬೆನ್ನೆಲುಬು” ಮತ್ತು “ನಮ್ಮ ರಾಷ್ಟ್ರದ ಬೆಳವಣಿಗೆಯ ರಾಯಭಾರಿಗಳಾದ ಕಾರ್ಮಿಕರ ರೈಲುದರವನ್ನು ಕಾಂಗ್ರೆಸ್‌ ಪಾವತಿಸಲಿದೆ ಎಂದಿದ್ದಾರೆ.

ಇದು ನಮ್ಮ ಸಹಚರರ ಸೇವೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ವಿನಮ್ರ ಕೊಡುಗೆಯಾಗಿದೆ ಮತ್ತು ಅವರೊಂದಿಗೆ ಒಗ್ಗಟ್ಟಿನಿಂದ ಹೆಗಲಿಗೆ ಹೆಗಲಾಗಿ ನಿಲ್ಲುವುದು ನಮ್ಮ ಕರ್ತವ್ಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

“ವಿದೇಶದಲ್ಲಿ ಸಿಲುಕಿರುವ ನಮ್ಮ ನಾಗರಿಕರಿಗೆ ಉಚಿತ ವಿಮಾನ ಪ್ರಯಾಣವನ್ನು ಏರ್ಪಡಿಸುವ ಮೂಲಕ ನಮ್ಮ ಸರ್ಕಾರವು ತನ್ನ ಜವಾಬ್ದಾರಿಯನ್ನು ಮೆರೆದಿದೆ. ಆದರೆ ನಮ್ಮದೇ ರಾಷ್ಟ್ರದಲ್ಲಿರುವ ಕಾರ್ಮಿಕರಿಗೆ ಅದೇ ಸೌಜನ್ಯ ಏಕೆ ತೋರಿಸಲಾಗುವುದಿಲ್ಲ” ಎಂದು ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ 

ಕೇಂದ್ರವು ಲಾಕ್ ಡೌನ್ ಘೋಷಿಸುವ ಮುನ್ನ ಯಾವುದೇ ನೋಟಿಸ್ ನೀಡಿರಲಿಲ್ಲ. ಕೇವಲ ನಾಲ್ಕು ಗಂಟೆ ಸಮಯ ಕೊಟ್ಟು ಲಾಕ್‌ಡೌನ್‌ ಘೋಷಿಸಲಾಯಿತು. ಆದ್ದರಿಂದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಮರಳಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.


“1947ರ ವಿಭಜನೆಯ ನಂತರ, ಭಾರತವು ಇಂತಹ ಬೃಹತ್ ಮಾನವ ವೆಚ್ಚದೊಂದಿಗೆ ಒಂದು ದುರಂತಕ್ಕೆ ಸಾಕ್ಷಿಯಾಯಿತು, ಏಕೆಂದರೆ ಸಾವಿರಾರು ವಲಸೆ ಕಾರ್ಮಿಕರು ಮತ್ತು ಕಾರ್ಮಿಕರು ಆಹಾರವಿಲ್ಲದೆ, ಸಾರಿಗೆಯಿಲ್ಲದೆ, ಔಷಧಿಯಿಲ್ಲದೆ ಕಾಲ್ನಡಿಗೆಯಲ್ಲಿ ನೂರಾರು ಕಿಲೋಮೀಟರ್ ನಡೆದು ಮನೆಗೆ ತೆರಳಬೇಕಾಯಿತು. ಅವರ ಕುಟುಂಬ ಮತ್ತು ಪ್ರೀತಿಪಾತ್ರರಲ್ಲಿಗೆ ಮರಳುವ ಬಯಕೆಯನ್ನು ಹೊರತುಪಡಿಸಿ, ಅವರಲ್ಲಿ ಏನೇನೂ ಉಳಿದಿರಲ್ಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಂದಿಗೂ, ಲಕ್ಷಾಂತರ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡು ನರಳುತ್ತಿದ್ದಾರೆ. ಅವರ ಮನೆ ಮತ್ತು ಕುಟುಂಬಗಳಿಗೆ ಮರಳಲು ಬಯಸಿದರೂ ಅವರ ಬಳಿ ಹಣವಿಲ್ಲ. ಸರ್ಕಾರ ಉಚಿತ ಸಾರಿಗೆ ಒದಗಿಸಿಲ್ಲ. ಬಿಕ್ಕಟ್ಟಿನ ಈ ಸಮಯದಲ್ಲಿ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು ರೈಲು ಟಿಕೆಟ್‌ಗಾಗಿ ಶುಲ್ಕ ವಿಧಿಸುತ್ತಿರುವುದು ಗೊಂದಲದ ಸಂಗತಿಯಾಗಿದೆ ಎಂದಿದ್ದಾರೆ.

“ಆದ್ದರಿಂದ, ಪ್ರತಿ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ ಸಮಿತಿಯು ಪ್ರತಿ ನಿರ್ಗತಿಕ ಕಾರ್ಮಿಕ ಮತ್ತು ವಲಸೆ ಕಾರ್ಮಿಕರ ರೈಲು ಪ್ರಯಾಣದ ವೆಚ್ಚವನ್ನು ಪ್ರತಿ ಪ್ರದೇಶ ಕಾಂಗ್ರೆಸ್ ಸಮಿತಿಯು ಭರಿಸಲಿದೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ಇದೇ ರೀತಿಯಾಗಿ ಕರ್ನಾಟಕದಲ್ಲಿಯೂ ಸಹ ಇಲ್ಲಿನ ಬಿಜೆಪಿ ಸರ್ಕಾರ ರಾಜ್ಯದೊಳಗಿನ ಬಸ್‌ ಸಾರಿಗೆಗೆ ಮೂರು ಪಟ್ಟು ಬಸ್‌ ದರ ವಿಧಿಸಿತ್ತು. ಇದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷವು ಉಚಿತ ಪ್ರಯಾಣ ಒದಗಿಸಿ ಎಂದು ಒಂದು ಕೋಟಿ ರೂ ನೆರವು ಘೋಷಿಸಿತ್ತು. ನಂತರ ಎಚ್ಚೆತ್ತ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...