Homeಮುಖಪುಟಸೋನಿಯಾ ಗಾಂಧಿ ನಿವಾಸದಲ್ಲಿ ಸಿಡ್ಲ್ಯುಸಿ ಸಭೆ: ಶಿವಸೇನೆಗೆ ಬೆಂಬಲ ಸೂಚಿಸುತ್ತಾ ಕಾಂಗ್ರೆಸ್..?

ಸೋನಿಯಾ ಗಾಂಧಿ ನಿವಾಸದಲ್ಲಿ ಸಿಡ್ಲ್ಯುಸಿ ಸಭೆ: ಶಿವಸೇನೆಗೆ ಬೆಂಬಲ ಸೂಚಿಸುತ್ತಾ ಕಾಂಗ್ರೆಸ್..?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ಸರ್ಕಸ್‍ ನಲ್ಲಿ ಕಾಂಗ್ರೆಸ್ ಹಾಗೂ ಎನ್‍ಸಿಪಿ ಮುನ್ನೆಲೆಗೆ ಬಂದಿವೆ. ಶಿವಸೇನೆ ಎರಡೂ ಪಕ್ಷಗಳ ನಾಯಕರ ಮುಂದೆ ಮೈತ್ರಿ ಮನವಿಯನ್ನು ಮುಂದಿಟ್ಟಿದೆ. ಈಗ ರಾಜ್ಯ ರಾಜಕೀಯದ ಚೆಂಡು ಕಾಂಗ್ರೆಸ್ ಮತ್ತು ಎನ್‍ಸಿಪಿ ಕೋಟ್‍ನಲ್ಲಿದೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಿಡಬ್ಲ್ಯುಸಿ ( ಕಾಂಗ್ರೆಸ್ ವರ್ಕಿಂಗ್ ಕಮಿಟಿ) ಸಭೆ ಕರೆದಿದ್ದು, ದೆಹಲಿಯ ಸೋನಿಯಾ ನಿವಾಸದಲ್ಲಿ ಸಭೆ ಆರಂಭಗೊಂಡಿದೆ. ಮಹಾರಾಷ್ಟ್ರ ಕಾಂಗ್ರೆಸ್‍ನ ಕೆಲ ಶಾಸಕರು ಎನ್‍ಸಿಪಿಗೆ ಕಾಂಗ್ರೆಸ್ ಬೆಂಬಲ ನೀಡಬೇಕು. ಎನ್‍ಸಿಪಿ ಅಧಿಕಾರಕ್ಕೆ ಬರುತ್ತದೆಯಾದರೆ ಶಿವಸೇನೆಗೆ ಕಾಂಗ್ರೆಸ್ ಬೆಂಬಲ ಸೂಚಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಆದರೆ ಬಲಪಂಥೀಯ ಸಿದ್ಧಾಂತ ಹೊಂದಿರುವ ಶಿವಸೇನೆಗೆ ಬೆಂಬಲ ಸೂಚಿಸುವುದು ಎಷ್ಟು ಸರಿ ಎಂದು ಸೋನಿಯಾ ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಹುಮತದ ಕೊರತೆಯಿಂದಾಗಿ ಸರ್ಕಾರ ರಚಿಸುವುದಿಲ್ಲ ಎಂದು ಬಿಜೆಪಿ ಹೇಳಿದೆ. ಶಿವಸೇನೆ ಕೂಡ ಬಿಜೆಪಿಯನ್ನು ಬಿಟ್ಟು ಸರ್ಕಾರ ರಚಿಸುವುದಾಗಿ ಹೇಳಿದೆ. ಈಗ ಕಾಂಗ್ರೆಸ್ ಸಭೆಯಲ್ಲಿ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ಸೂಚಿಬೇಕೋ, ಬೇಡವೋ ಎಂನ ಬಗ್ಗೆ ನಿರ್ಧಾರವಾಗಲಿದೆ. ಬಿಜೆಪಿ ಮತ್ತು ಶಿವಸೇನೆ ನಡುವಿನ ಒಡಕಿನಿಂದಾಗಿ, ಕೇಂದ್ರದಲ್ಲಿ ಮಂತ್ರಿಯಾಗಿದ್ದ ಅರವಿಂದ್ ಸಾವಂತ್ ಅವರನ್ನು ಕಿತ್ತು ಹಾಕಲಾಗಿದೆ. ಇನ್ನು ಕಾಂಗ್ರೆಸ್ ಜತೆ ಚರ್ಚಿಸಿದ ನಂತರವೇ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಇನ್ನು ಹಿಂದುತ್ವ ರಾಜಕಾರಣ, ಕಾಂಗ್ರೆಸ್ ವಿರೋಧಿ ಚಟುವಟಿಕೆಯನ್ನು ಬಲಗೊಳಿಸಿರುವ ಬಲಪಂಥೀಯ ಸಿದ್ಧಾಂತ ಹೊಂದಿರುವ ಶಿವಸೇನೆಯನ್ನು ಬೆಂಬಲಿಸುವುದು ಕಾಂಗ್ರೆಸ್‍ಗೆ ಕಷ್ಟಕರವಾಗಲಿದೆ. ಒಂದು ವೇಳೆ ಬೆಂಬಲ ಸೂಚಿಸುವುದಾದರೆ ಕಾಂಗ್ರೆಸ್ ಕೆಲವು ಕಾರ್ಯಕ್ರಮ ಮತ್ತು ನೀತಿಗಳನ್ನು ರಚಿಸಿ, ಒತ್ತಾಯಿಸುವ ಸಾಧ್ಯತೆಯಿದೆ.

ಇನ್ನು ಕಾಂಗ್ರೆಸ್‍ ನಾಯಕ ಅಶೋಕ್ ಚವ್ಹಾಣ್ ಮಾತನಾಡಿ, ಶಿವಸೇನೆಗೆ ಬೆಂಬಲ ನೀಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚನೆಯಾಗಲೆಂದು ಪಕ್ಷ ಬಯಸುತ್ತದೆ. ಯಾವುದೇ ಕಾರಣಕ್ಕೂ ರಾಷ್ಟ್ರಪತಿ ಆಡಳಿತ ಜಾರಿಯಾಗದೇ ಇರಲಿ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...