Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...