Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...