Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...