Homeಮುಖಪುಟಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

ಟೂಲ್‌ಕಿಟ್-ಟ್ವೀಟ್ ಪ್ರಕರಣ: ಟ್ವಿಟರ್ ಕಚೇರಿಗೆ ಹೋದ ಪೊಲೀಸರು, ಯಾರೂ ಸಿಗದೆ ವಾಪಸ್

- Advertisement -
- Advertisement -

“ಕಾಂಗ್ರೆಸ್ ಟೂಲ್‌ಕಿಟ್” ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ  ಮಾಡಿದ್ದ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ವಿಟರ್ ಟ್ಯಾಗ್ ಮಾಡಿದ್ದಕ್ಕೆ ವಿವರಣೆ ಪಡೆಯಲು ದೆಹಲಿ ಪೊಲೀಸರು ಸೋಮವಾರ ಸಂಜೆ ದೆಹಲಿಯ ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಆದರೆ, ಕೋವಿಡ್ ಲಾಕ್‌ಡೌನ್ ಕಾರಣದಿಂದ ಎಲ್ಲರೂ ಮನೆಯಿಂದ ಕೆಲಸ ಮಾಡುತ್ತಿರುವ ಕಾರಣಕ್ಕೆ ಟ್ವಿಟರ್ ಕಚೇರಿಯಲ್ಲಿ ಯಾರೂ ಪೊಲೀಸರಿಗೆ ಲಭ್ಯವಾಗಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಟ್ಯಾಗ್ ಮಾಡಿದ್ದು ಪೂರ್ವಗ್ರಹಪೀಡಿತ ಎಂದು ಸರ್ಕಾರ ಆರೋಪಿಸಿತ್ತು. ನಂತರ ಟ್ವಿಟರ್ ಕಚೇರಿಗೆ ವಿವರ ಕೇಳಿ ನೋಟಿಸ್ ನಿಡಿದ್ದ ದೆಹಲಿ ಪೊಲೀಸರು ಸೋಮವಾರ ಸಂಜೆ ಟ್ವಿಟರ್ ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದಾರೆ. ಆದರೆ ಲಾಕ್‌ಡೌನ್ ಕಾರಣ ಕಚೇರಿಯಲ್ಲಿ ಯಾರು ಸಿಕ್ಕಿಲ್ಲ.

ಇದನ್ನೂ ಓದಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ವ ಪಕ್ಷ ಸಮಿತಿ ರಚಿಸಿದ ಸ್ಟಾಲಿನ್‌ ಸರ್ಕಾರ: ದ್ವೇಷ ರಾಜಕಾರಣಕ್ಕೆ ತಾತ್ಕಾಲಿಕ ತೆರೆ

ಸಂಬಿತ್ ಪಾತ್ರಾ ಟ್ವೀಟ್‌ಗೆ “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಟ್ಯಾಗ್ ಹಾಕಿದ್ದಕ್ಕೆ ಕಂಪನಿ ನೀಡಿರುವ ವಿವರಣೆ  ಅಸ್ಪಷ್ಟ ಎಂದು ಹೇಳಿದ್ದ ಪೊಲೀಸರು, ನೋಟಿಸ್ ಅನ್ನು ಖುದ್ದಾಗಿ ಹಸ್ತಾಂತರಿಸಲು ಟ್ವಿಟರ್ ಇಂಡಿಯಾ ಕಚೇರಿಗೆ ಹೋಗಿದ್ದಾಗಿ ತಿಳಿಸಿದ್ದಾರೆ.

ಈ ಕ್ರಮದ ಬಗ್ಗೆ ಬಂದ ಟೀಕೆಗಳನ್ನು ಸಮರ್ಥಿಸಿಕೊಂಡಿರುವ ಸರ್ಕಾರವು, “ಮೂರು ನೋಟಿಸ್ ನೀಡಿದರೂ ಟ್ವಿಟರ್ ಸ್ಪಷ್ಟ ಉತ್ತರ ನೀಡದೇ ಹುಡುಗಾಟ ಆಡುತ್ತ ತಾನೇ ಬಲಿಪಶು ಎಂದು ತೋರಿಸಲು ಪ್ರಯತ್ನಿಸಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರ ಉತ್ತರಗಳು ಬಹಳ ಅಸ್ಪಷ್ಟವಾಗಿರುವುದರಿಂದ, ನೋಟಿಸ್ ನೀಡಲು ಸರಿಯಾದ ವ್ಯಕ್ತಿ ಯಾರು ಎಂದು ಗುರುತಿಸಲು ಈ ಭೇಟಿ ಅಗತ್ಯವಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೇ 18 ರಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಮಾಡಿದ ಟ್ವೀಟ್ ಅನ್ನು ಆಡಳಿತ ಪಕ್ಷದ ಹಲವಾರು ನಾಯಕರು ಹಂಚಿಕೊಂಡಿದ್ದಾರೆ. ಇದರಲ್ಲಿ ’ಕೋವಿಡ್ ನಿರ್ವಹಣೆ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಖ್ಯಾತಿಗೊಳಿಸುವ’ ಉದ್ದೇಶದಿಂದ ಕಾಂಗ್ರೆಸ್ ಟೂಲ್‌ಕಿಟ್ ರಚಿಸಿದೆ ಎಂದು ಆರೋಪಿಸಿದ್ದರು. “ಟೂಲ್‌ಕಿಟ್” ನಕಲಿ ಮತ್ತು ಇದನ್ನು ನಕಲಿ ಲೆಟರ್ ಹೆಡ್ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್ ಟ್ವಿಟ್‌ರ್‌ಗೆ ಪತ್ರ ಬರೆದಿತ್ತು.

ಇದನ್ನೂ ಓದಿ: ಇಸ್ರೇಲ್‌ನ ಬಯೋತ್ಪಾದನೆ ಮುಗಿಯದ ರಕ್ತಚರಿತ್ರೆ: ಬಿ ಶ್ರೀಪಾದ್ ಭಟ್

ಗುರುವಾರ ಸಂಜೆ, ಟ್ವಿಟರ್ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು “ತಿರುಚಿದ ಮಾಧ್ಯಮ” (ಮ್ಯಾನಿಪುಲೆಟೆಡ್ ಮೀಡಿಯಾ) ಎಂದು ಟ್ಯಾಗ್ ಮಾಡಿತ್ತು. ಮರುದಿನ ಸರ್ಕಾರವು, “ಟೂಲ್‌ಕಿಟ್” ಬಗ್ಗೆ ಇನ್ನೂ ತನಿಖೆ ನಡೆಸುತ್ತಿರುವುದರಿಂದ ಟ್ಯಾಗ್ ಅನ್ನು ತೆಗೆದುಹಾಕುವಂತೆ ಟ್ವಿಟರ್‌ಗೆ ಕಠಿಣ ಪತ್ರ ಬರೆದಿತ್ತು. ಸೋಮವಾರ ದೆಹಲಿ ಪೊಲೀಸರ ವಿಶೇಷ ಘಟಕ ಸ್ಪಷ್ಟೀಕರಣ ಕೋರಿ ಟ್ವಿಟರ್‌ಗೆ ನೋಟಿಸ್ ಕಳುಹಿಸಿದೆ.

“ದೆಹಲಿ ಪೊಲೀಸರು ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಸಂಬಿತ್ ಪಾತ್ರಾ ಅವರ ಟ್ವೀಟ್ ಅನ್ನು ’ಮ್ಯಾನಿಪ್ಯುಲೇಟಿವ್’ ಎಂದು ವರ್ಗೀಕರಿಸಿದ ಬಗ್ಗೆ ಟ್ವಿಟರ್‌ನಿಂದ ಸ್ಪಷ್ಟನೆ ಕೋರಲಾಗಿದೆ. ಟ್ವಿಟರ್ ನಮಗೆ ತಿಳಿದಿಲ್ಲದ ಕೆಲವು ಮಾಹಿತಿಯನ್ನು ಹೊಂದಿದೆ, ಅದರ ಆಧಾರದ ಮೇಲೆ ಅವರು ಅದನ್ನು ಈ ರೀತಿ ವರ್ಗೀಕರಿಸಿದ್ದಾರೆ. ಈ ಮಾಹಿತಿಯು ವಿಚಾರಣೆಗೆ ಸಂಬಂಧಿಸಿದೆ. ವಿಚಾರಣೆಯನ್ನು ನಡೆಸುತ್ತಿರುವ ವಿಶೇಷ ಘಟಕವು ಸತ್ಯವನ್ನು ಕಂಡುಹಿಡಿಯಲು ಬಯಸುತ್ತದೆ. ಟ್ಯಾಗ್ ನೀಡಲು ತಾನು ಕಂಡುಕೊಂಡ ಆಧಾರಗಳನ್ನು ಟ್ವಿಟರ್ ಸ್ಪಷ್ಟಪಡಿಸಬೇಕು” ಎಂದು ದೆಹಲಿ ಪೊಲೀಸ್ ವಕ್ತಾರರು ಹೇಳಿದ್ದಾರೆ. ಆದರೆ ಪೊಲೀಸರು ದೂರು ಅಥವಾ ದೂರುದಾರರ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.

ದಾಖಲೆಗಳನ್ನು ಹಂಚಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರುಗಳನ್ನು ದಾಖಲಿಸಿದೆ. ಛತ್ತೀಸಘಡದಲ್ಲಿ ಬಿಜೆಪಿ ನಾಯಕರಾದ ಸಂಬಿತ್ ಪಾತ್ರಾ ಮತ್ತು ರಮಣಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಸಮನ್ಸ್ ನೀಡಲಾಗಿದೆ.


ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...