Homeಮುಖಪುಟಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ ನೋಡಬೇಡಿ, ನಿರ್ಲಕ್ಷಿಸಿ - ಸುಪ್ರೀಂ ಕೋರ್ಟ್

ಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ ನೋಡಬೇಡಿ, ನಿರ್ಲಕ್ಷಿಸಿ – ಸುಪ್ರೀಂ ಕೋರ್ಟ್

- Advertisement -
- Advertisement -

ಕಾಂಗ್ರೆಸ್ ಟೂಲ್‌ಕಿಟ್ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಬೇಕೆಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವೇಳೆ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ಷುಲ್ಲಕ, ನಿಷ್ಪ್ರಯೋಜಕ ಅರ್ಜಿಗಳ ಬಗ್ಗೆ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ರಾಷ್ಟ್ರ ವಿರೋಧಿ ಕೃತ್ಯಗಳ” ಕುರಿತು ಕಾಂಗ್ರೆಸ್ ವಿರುದ್ಧದ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೋಂದಣಿಯನ್ನು ಅಮಾನತುಗೊಳಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ’ಅರ್ಜಿದಾರರಿಗೆ ಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ, ಅದನ್ನು ನೋಡಬೇಡಿ, ನಿರ್ಲಕ್ಷಿಸಿ. ಇದು ರಾಜಕೀಯ ಪಕ್ಷದ ಯೋಜಿತ ಪ್ರಚಾರ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕಾಂಗ್ರೆಸ್ ಟೂಲ್‌ಕಿಟ್ ಪ್ರಕರಣದ ಅರ್ಜಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು, ಇಂತಹ ಕ್ಷುಲ್ಲಕ ಅರ್ಜಿಗಳನ್ನು ಆಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. “ಇಂತಹ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಏನಾದರೂ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ” ಎಂದು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರನ್ನು ಪರ ವಾದಿಸುತ್ತಿದ್ದ ವಕೀಲ ಶಶಾಂಕ್ ಶೇಖರ್ ಜಾ, ಕೊರೊನಾ ವೈರಸ್ ರೂಪಾಂತರದ ರೂಪಕ್ಕೆ “ಇಂಡಿಯನ್ ವೆರಿಯಂಟ್” ಎಂಬ ಪದವನ್ನು ಬಳಸುವುದು ಸಹ ಯೋಜಿತ ಪ್ರಚಾರದ ವಿಷಯವಾಗಿದೆ ಎಂದು ವಾದಿಸಿದರು. ಇದೇ ವೇಳೆ ಸಿಂಗಾಪುರವು, “ಸಿಂಗಾಪುರ್ ರೂಪಾಂತರ” ದಂತಹ ಪದಗಳನ್ನು ಬಳಸಲು ಆಕ್ಷೇಪ ವ್ಯಕ್ತಪಡಿಸಿದೆ ಎಂದು ವಕೀಲ ಶಶಾಂಕ್ ಶೇಖರ್ ಜಾ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಚಂದ್ರಚೂಡ್, “ಭಾರತ ಪ್ರಜಾಪ್ರಭುತ್ವ, ನಿಮಗೆ ಗೊತ್ತಾ..?” ಎಂದು ಕಿಡಿಕಾರಿದ್ದಾರೆ. ’ನ್ಯಾಯಾಲಯವು ಎಂದಾದರೂ ವಿವಿಧ ರೀತಿಯ ರಾಜಕೀಯ ಪ್ರಚಾರವನ್ನು ನಿಯಂತ್ರಿಸಬಹುದೇ’ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ದ್ವಿಸದಸ್ಯ ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಎಂ.ಆರ್.ಶಾ ಅವರು, ‘ಟೂಲ್‌ಕಿಟ್ ‘ ವಿಷಯದಲ್ಲಿ ಈಗಾಗಲೇ ಕ್ರಿಮಿನಲ್ ತನಿಖೆ ಬಾಕಿ ಉಳಿದಿದೆ. ಆರ್ಟಿಕಲ್ 32 ರ ಅಡಿಯಲ್ಲಿ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿತ್ತು. ಟ್ವಿಟ್ಟರ್ ಕೂಡ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್‌ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಅನುಮೋದಿಸಿತ್ತು.


ಇದನ್ನೂ ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...