Homeಮುಖಪುಟಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ ನೋಡಬೇಡಿ, ನಿರ್ಲಕ್ಷಿಸಿ - ಸುಪ್ರೀಂ ಕೋರ್ಟ್

ಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ ನೋಡಬೇಡಿ, ನಿರ್ಲಕ್ಷಿಸಿ – ಸುಪ್ರೀಂ ಕೋರ್ಟ್

- Advertisement -
- Advertisement -

ಕಾಂಗ್ರೆಸ್ ಟೂಲ್‌ಕಿಟ್ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಬೇಕೆಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವೇಳೆ ನ್ಯಾಯಾಲಯದಲ್ಲಿ ದಾಖಲಾಗಿರುವ ಕ್ಷುಲ್ಲಕ, ನಿಷ್ಪ್ರಯೋಜಕ ಅರ್ಜಿಗಳ ಬಗ್ಗೆ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

“ರಾಷ್ಟ್ರ ವಿರೋಧಿ ಕೃತ್ಯಗಳ” ಕುರಿತು ಕಾಂಗ್ರೆಸ್ ವಿರುದ್ಧದ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೋಂದಣಿಯನ್ನು ಅಮಾನತುಗೊಳಿಸಬೇಕು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌, ’ಅರ್ಜಿದಾರರಿಗೆ ಕಾಂಗ್ರೆಸ್ ಟೂಲ್‌ಕಿಟ್ ಇಷ್ಟವಾಗದಿದ್ದರೆ, ಅದನ್ನು ನೋಡಬೇಡಿ, ನಿರ್ಲಕ್ಷಿಸಿ. ಇದು ರಾಜಕೀಯ ಪಕ್ಷದ ಯೋಜಿತ ಪ್ರಚಾರ” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಕಾಂಗ್ರೆಸ್ ಟೂಲ್‌ಕಿಟ್ ಪ್ರಕರಣದ ಅರ್ಜಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು, ಇಂತಹ ಕ್ಷುಲ್ಲಕ ಅರ್ಜಿಗಳನ್ನು ಆಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. “ಇಂತಹ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಏನಾದರೂ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ” ಎಂದು  ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರರನ್ನು ಪರ ವಾದಿಸುತ್ತಿದ್ದ ವಕೀಲ ಶಶಾಂಕ್ ಶೇಖರ್ ಜಾ, ಕೊರೊನಾ ವೈರಸ್ ರೂಪಾಂತರದ ರೂಪಕ್ಕೆ “ಇಂಡಿಯನ್ ವೆರಿಯಂಟ್” ಎಂಬ ಪದವನ್ನು ಬಳಸುವುದು ಸಹ ಯೋಜಿತ ಪ್ರಚಾರದ ವಿಷಯವಾಗಿದೆ ಎಂದು ವಾದಿಸಿದರು. ಇದೇ ವೇಳೆ ಸಿಂಗಾಪುರವು, “ಸಿಂಗಾಪುರ್ ರೂಪಾಂತರ” ದಂತಹ ಪದಗಳನ್ನು ಬಳಸಲು ಆಕ್ಷೇಪ ವ್ಯಕ್ತಪಡಿಸಿದೆ ಎಂದು ವಕೀಲ ಶಶಾಂಕ್ ಶೇಖರ್ ಜಾ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಚಂದ್ರಚೂಡ್, “ಭಾರತ ಪ್ರಜಾಪ್ರಭುತ್ವ, ನಿಮಗೆ ಗೊತ್ತಾ..?” ಎಂದು ಕಿಡಿಕಾರಿದ್ದಾರೆ. ’ನ್ಯಾಯಾಲಯವು ಎಂದಾದರೂ ವಿವಿಧ ರೀತಿಯ ರಾಜಕೀಯ ಪ್ರಚಾರವನ್ನು ನಿಯಂತ್ರಿಸಬಹುದೇ’ ಎಂದು ಮರು ಪ್ರಶ್ನೆ ಮಾಡಿದ್ದಾರೆ.

ದ್ವಿಸದಸ್ಯ ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಎಂ.ಆರ್.ಶಾ ಅವರು, ‘ಟೂಲ್‌ಕಿಟ್ ‘ ವಿಷಯದಲ್ಲಿ ಈಗಾಗಲೇ ಕ್ರಿಮಿನಲ್ ತನಿಖೆ ಬಾಕಿ ಉಳಿದಿದೆ. ಆರ್ಟಿಕಲ್ 32 ರ ಅಡಿಯಲ್ಲಿ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಮಾಡಿದ ಬಿಜೆಪಿಯ ಉನ್ನತ ನಾಯಕರ ವಿರುದ್ಧ ಕಾಂಗ್ರೆಸ್ ಪ್ರಕರಣ ದಾಖಲಿಸಿತ್ತು. ಟ್ವಿಟ್ಟರ್ ಕೂಡ ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ‘ಟೂಲ್‌ಕಿಟ್’ ಒಂದು ಕಟ್ಟುಕಥೆ, ತಿರುಚಿದ ಆರೋಪ ಎಂದು ಅನುಮೋದಿಸಿತ್ತು.


ಇದನ್ನೂ ಓದಿ: ‘ಟೂಲ್‌ಕಿಟ್-ಲೆಟರ್‌ಹೆಡ್ ಫೋರ್ಜರಿ ಪ್ರಕರಣ: ಬಿಜೆಪಿಯ ರಮಣಸಿಂಗ್, ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...