Homeಮುಖಪುಟಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ 'ಕೈ ಟ್ರಬಲ್ ಶೂಟರ್‌ಗಳು'...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ.

ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ, ಗುರುವಾರದಿಂದ (ಫೆ.19) ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ನಂತರ ಪಕ್ಷದ ಪ್ರಧಾನ ಕಚೇರಿಯಾದ ‘ರಾಜೀವ್ ಭವನ’ದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಪ್ರಿಯಾಂಕಾ ಗಾಂಧಿ ಜೊತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಅಸ್ಸಾಂಗೆ ತೆರಳಿದ್ದಾರೆ. ಅಸ್ಸಾಂ ಚುನಾವಣೆಗೆ ಡಿ.ಕೆ ಶಿವಕುಮಾರ್ ಅವರನ್ನು ಹಿರಿಯ ವೀಕ್ಷಕರಾಗಿ ನೇಮಿಸಲಾಗಿದೆ. ಡಿಕೆಶಿ ಈಗಾಗಲೇ ಹಲವು ಬಾರಿ ದೆಹಲಿಯಲ್ಲಿ ಅಸ್ಸಾಂ ನಾಯಕರೊಂದಿಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಭೆಗಳನ್ನು ನಡೆಸಿದ್ದು, ಪ್ರಸ್ತುತ ಪ್ರಿಯಾಂಕಾ ಗಾಂಧಿಯವರೊಂದಿಗೆ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಜಾರ್ಖಂಡ್‌ನ ಕಾಂಗ್ರೆಸ್‌ ನಾಯಕ ಬಂಧು ತಿರ್ಕಿ ಅವರನ್ನೂ ಸಹ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ವೀಕ್ಷಕ ತಂಡದಲ್ಲಿ ಸೇರಿಸಲಾಗಿದೆ.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ಅಧ್ಯಕ್ಷ ಗೌರವ್ ಗೊಗೋಯ್ ಮತ್ತು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ಈ ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ.

ಬಿಜೆಪಿಗೆ ಹಾರಲು ಸಿದ್ದರಾದ ಬೋರಾ

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕ ಭೂಪೇನ್ ಕುಮಾರ್ ಬೋರಾ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಬಿಕ್ಕಟ್ಟಿನ ನಡುವೆಯೇ ಹೈಕಮಾಂಡ್ ಸೂಚನೆಯಂತೆ ಪ್ರಿಯಾಂಕಾ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಅಸ್ಸಾಂಗೆ ಭೇಟಿ ನೀಡುತ್ತಿದ್ದಾರೆ.

ಭೂಪೇನ್ ಬೋರಾ ಅವರು ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಸೌಜನ್ಯದ ನಡವಳಿಕೆ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಬೋರಾ ಅವರ ರಾಜೀನಾಮೆ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಬೋರಾ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಫೆಬ್ರವರಿ 17 ರಂದು ಬೋರಾ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಬೋರಾ ಫೆಬ್ರವರಿ 22ರಂದು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್‌ಗೆ ದೊಡ್ಡ ಹೊಡೆತವೆಂದು ಪರಿಗಣಿಸಲಾಗಿದೆ.

ಬೋರಾ ತನ್ನ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವುದಾಗಿ ತಿಳಿಸಿದ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಸಿಎಂ ಶರ್ಮಾ ಬೋರಾ ಫೆ.22ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ಅಸ್ಸಾಂಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಚುನಾವಣೆಯ ವೀಕ್ಷಕನಾಗಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ ಜೊತೆ ಅಭ್ಯರ್ಥಿಗಳ ಆಯ್ಕೆ ಮತ್ತು ಪ್ರಚಾರ ತಂತ್ರಗಳ ಕುರಿತು ಚರ್ಚಿಸಲು ಅಸ್ಸಾಂಗೆ ತೆರಳುತ್ತಿರುವುದಾಗಿ ಡಿಕೆಶಿ ಹೇಳಿದ್ದಾರೆ. ಬೋರಾ ಅವರ ಮನವೊಲಿಕೆಯ ಬಗ್ಗೆ ಅವರು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೂ, ಡಿಕೆಶಿ ಬೋರಾ ಅವರ ಮನವೊಲಿಸುವ ಸಾಧ್ಯತೆ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...