Homeಮುಖಪುಟಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ 'ಕೈ ಟ್ರಬಲ್ ಶೂಟರ್‌ಗಳು'...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ.

ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ, ಗುರುವಾರದಿಂದ (ಫೆ.19) ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ನಂತರ ಪಕ್ಷದ ಪ್ರಧಾನ ಕಚೇರಿಯಾದ ‘ರಾಜೀವ್ ಭವನ’ದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಪ್ರಿಯಾಂಕಾ ಗಾಂಧಿ ಜೊತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಅಸ್ಸಾಂಗೆ ತೆರಳಿದ್ದಾರೆ. ಅಸ್ಸಾಂ ಚುನಾವಣೆಗೆ ಡಿ.ಕೆ ಶಿವಕುಮಾರ್ ಅವರನ್ನು ಹಿರಿಯ ವೀಕ್ಷಕರಾಗಿ ನೇಮಿಸಲಾಗಿದೆ. ಡಿಕೆಶಿ ಈಗಾಗಲೇ ಹಲವು ಬಾರಿ ದೆಹಲಿಯಲ್ಲಿ ಅಸ್ಸಾಂ ನಾಯಕರೊಂದಿಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಭೆಗಳನ್ನು ನಡೆಸಿದ್ದು, ಪ್ರಸ್ತುತ ಪ್ರಿಯಾಂಕಾ ಗಾಂಧಿಯವರೊಂದಿಗೆ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಜಾರ್ಖಂಡ್‌ನ ಕಾಂಗ್ರೆಸ್‌ ನಾಯಕ ಬಂಧು ತಿರ್ಕಿ ಅವರನ್ನೂ ಸಹ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ವೀಕ್ಷಕ ತಂಡದಲ್ಲಿ ಸೇರಿಸಲಾಗಿದೆ.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ಅಧ್ಯಕ್ಷ ಗೌರವ್ ಗೊಗೋಯ್ ಮತ್ತು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ಈ ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ.

ಬಿಜೆಪಿಗೆ ಹಾರಲು ಸಿದ್ದರಾದ ಬೋರಾ

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕ ಭೂಪೇನ್ ಕುಮಾರ್ ಬೋರಾ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಬಿಕ್ಕಟ್ಟಿನ ನಡುವೆಯೇ ಹೈಕಮಾಂಡ್ ಸೂಚನೆಯಂತೆ ಪ್ರಿಯಾಂಕಾ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಅಸ್ಸಾಂಗೆ ಭೇಟಿ ನೀಡುತ್ತಿದ್ದಾರೆ.

ಭೂಪೇನ್ ಬೋರಾ ಅವರು ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಸೌಜನ್ಯದ ನಡವಳಿಕೆ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಬೋರಾ ಅವರ ರಾಜೀನಾಮೆ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಬೋರಾ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಫೆಬ್ರವರಿ 17 ರಂದು ಬೋರಾ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಬೋರಾ ಫೆಬ್ರವರಿ 22ರಂದು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್‌ಗೆ ದೊಡ್ಡ ಹೊಡೆತವೆಂದು ಪರಿಗಣಿಸಲಾಗಿದೆ.

ಬೋರಾ ತನ್ನ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವುದಾಗಿ ತಿಳಿಸಿದ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಸಿಎಂ ಶರ್ಮಾ ಬೋರಾ ಫೆ.22ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ಅಸ್ಸಾಂಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಚುನಾವಣೆಯ ವೀಕ್ಷಕನಾಗಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ ಜೊತೆ ಅಭ್ಯರ್ಥಿಗಳ ಆಯ್ಕೆ ಮತ್ತು ಪ್ರಚಾರ ತಂತ್ರಗಳ ಕುರಿತು ಚರ್ಚಿಸಲು ಅಸ್ಸಾಂಗೆ ತೆರಳುತ್ತಿರುವುದಾಗಿ ಡಿಕೆಶಿ ಹೇಳಿದ್ದಾರೆ. ಬೋರಾ ಅವರ ಮನವೊಲಿಕೆಯ ಬಗ್ಗೆ ಅವರು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೂ, ಡಿಕೆಶಿ ಬೋರಾ ಅವರ ಮನವೊಲಿಸುವ ಸಾಧ್ಯತೆ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...