Homeಮುಖಪುಟಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ 'ಕೈ ಟ್ರಬಲ್ ಶೂಟರ್‌ಗಳು'...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

- Advertisement -
- Advertisement -

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ.

ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ, ಗುರುವಾರದಿಂದ (ಫೆ.19) ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ನಂತರ ಪಕ್ಷದ ಪ್ರಧಾನ ಕಚೇರಿಯಾದ ‘ರಾಜೀವ್ ಭವನ’ದಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ಪ್ರಿಯಾಂಕಾ ಗಾಂಧಿ ಜೊತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಅಸ್ಸಾಂಗೆ ತೆರಳಿದ್ದಾರೆ. ಅಸ್ಸಾಂ ಚುನಾವಣೆಗೆ ಡಿ.ಕೆ ಶಿವಕುಮಾರ್ ಅವರನ್ನು ಹಿರಿಯ ವೀಕ್ಷಕರಾಗಿ ನೇಮಿಸಲಾಗಿದೆ. ಡಿಕೆಶಿ ಈಗಾಗಲೇ ಹಲವು ಬಾರಿ ದೆಹಲಿಯಲ್ಲಿ ಅಸ್ಸಾಂ ನಾಯಕರೊಂದಿಗೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಭೆಗಳನ್ನು ನಡೆಸಿದ್ದು, ಪ್ರಸ್ತುತ ಪ್ರಿಯಾಂಕಾ ಗಾಂಧಿಯವರೊಂದಿಗೆ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಜಾರ್ಖಂಡ್‌ನ ಕಾಂಗ್ರೆಸ್‌ ನಾಯಕ ಬಂಧು ತಿರ್ಕಿ ಅವರನ್ನೂ ಸಹ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹಿರಿಯ ವೀಕ್ಷಕ ತಂಡದಲ್ಲಿ ಸೇರಿಸಲಾಗಿದೆ.

ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯ (ಎಪಿಸಿಸಿ) ಅಧ್ಯಕ್ಷ ಗೌರವ್ ಗೊಗೋಯ್ ಮತ್ತು ಅಸ್ಸಾಂ ಕಾಂಗ್ರೆಸ್ ಉಸ್ತುವಾರಿ ಜಿತೇಂದ್ರ ಸಿಂಗ್ ಅವರು ಈ ಹಿರಿಯ ನಾಯಕರೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ.

ಬಿಜೆಪಿಗೆ ಹಾರಲು ಸಿದ್ದರಾದ ಬೋರಾ

ಅಸ್ಸಾಂ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ, ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕ ಭೂಪೇನ್ ಕುಮಾರ್ ಬೋರಾ ಅವರ ರಾಜೀನಾಮೆ ನಿರ್ಧಾರವು ಪಕ್ಷದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಬಿಕ್ಕಟ್ಟಿನ ನಡುವೆಯೇ ಹೈಕಮಾಂಡ್ ಸೂಚನೆಯಂತೆ ಪ್ರಿಯಾಂಕಾ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಅಸ್ಸಾಂಗೆ ಭೇಟಿ ನೀಡುತ್ತಿದ್ದಾರೆ.

ಭೂಪೇನ್ ಬೋರಾ ಅವರು ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಸೌಜನ್ಯದ ನಡವಳಿಕೆ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಬೋರಾ ಅವರ ರಾಜೀನಾಮೆ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸಮಾಧಾನಪಡಿಸಲು ಪ್ರಯತ್ನಿಸಿದರು. ನಂತರ ಬೋರಾ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಫೆಬ್ರವರಿ 17 ರಂದು ಬೋರಾ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಬೋರಾ ಫೆಬ್ರವರಿ 22ರಂದು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್‌ಗೆ ದೊಡ್ಡ ಹೊಡೆತವೆಂದು ಪರಿಗಣಿಸಲಾಗಿದೆ.

ಬೋರಾ ತನ್ನ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವುದಾಗಿ ತಿಳಿಸಿದ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಸಿಎಂ ಶರ್ಮಾ ಬೋರಾ ಫೆ.22ರಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ. ಈ ನಡುವೆ ಕಾಂಗ್ರೆಸ್‌ನ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ಅಸ್ಸಾಂಗೆ ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಚುನಾವಣೆಯ ವೀಕ್ಷಕನಾಗಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ ಜೊತೆ ಅಭ್ಯರ್ಥಿಗಳ ಆಯ್ಕೆ ಮತ್ತು ಪ್ರಚಾರ ತಂತ್ರಗಳ ಕುರಿತು ಚರ್ಚಿಸಲು ಅಸ್ಸಾಂಗೆ ತೆರಳುತ್ತಿರುವುದಾಗಿ ಡಿಕೆಶಿ ಹೇಳಿದ್ದಾರೆ. ಬೋರಾ ಅವರ ಮನವೊಲಿಕೆಯ ಬಗ್ಗೆ ಅವರು ಯಾವುದೇ ಹೇಳಿಕೆ ಕೊಟ್ಟಿಲ್ಲ. ಆದರೂ, ಡಿಕೆಶಿ ಬೋರಾ ಅವರ ಮನವೊಲಿಸುವ ಸಾಧ್ಯತೆ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...