Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...