Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...