Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...