Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...