Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...