Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...