Homeಮುಖಪುಟಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

- Advertisement -
- Advertisement -

ಮುಂಬರುವ ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ದತೆ ಆರಂಭಿಸಿದ್ದು, ಕರ್ನಾಟಕ ತೆಲಂಗಾಣದಂತೆ ಮೊದಲ ಗ್ಯಾರಂಟಿಯನ್ನೂ ಘೋಷಿಸಿದೆ.

ನಿನ್ನೆ(ಫೆ.26) ಅನಂತಪುರದಲ್ಲಿ ನಡೆದ ‘ನ್ಯಾಯ ಸಾಧನ ಸಭೆ’ ಎಂಬ ಬೃಹತ್ ಸಮಾವೇಶದಲ್ಲಿ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ರೂ 5,000 ಧನ ಸಹಾಯ ನೀಡುವ ಮೊದಲ ಗ್ಯಾರಂಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರ ಕೋಟೆಯಾಗಿದ್ದ ಆಂಧ್ರ ಪ್ರದೇಶದಲ್ಲಿ ಪ್ರಸ್ತುತ ಪಕ್ಷ ನೆಲ ಕಚ್ಚಿದೆ. ಅದನ್ನು ಮತ್ತೆ ಬಲಪಡಿಸಲು ಕಾಂಗ್ರೆಸ್ ಪಣ ತೊಟ್ಟಿದ್ದು, ವಿಧಾನಸಭೆ ಚುನಾವಣೆಯ ಚಟುವಟಿಕೆಗಳು ಆರಂಭಗೊಳ್ಳುವ ಮುನ್ನವೇ ಗ್ಯಾರಂಟಿ ಘೋಷಿಸಿ ಬಹಳ ಉತ್ಸಾಹದಲ್ಲಿದೆ.

‘ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಬೆಂಬಲ’ (Indiramma Universal Basic Income support) ಎಂಬ ಹೆಸರಿನಲ್ಲಿ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ 5 ಸಾವಿರ ರೂ. ಜಮೆ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. “ನಮ್ಮ ಗ್ಯಾರಂಟಿ ಮೋದಿಯವರ ಗ್ಯಾರಂಟಿಯಂತಲ್ಲ. ನಾವು ಭರವಸೆ ನೀಡುತ್ತೇವೆ ಮತ್ತು ಅದನ್ನು ಈಡೇರಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

ಸಿಎಂ ಜಗನ್ ಮೋಹನ್ ರೆಡ್ಡಿಯವರ ಸಹೋದರಿ ವೈಎಸ್‌ ಶರ್ಮಿಳಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅನಂತಪುರದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಸಭೆಯನ್ನು ಕಾಂಗ್ರೆಸ್ ಆಯೋಜಿಸಿತ್ತು. ಆಂಧ್ರ ಪ್ರದೇಶದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಾಣಿಕ್ಕಂ ಟ್ಯಾಗೋರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯ ಎನ್‌ವಿ ರಘುವೀರಾ ರೆಡ್ಡಿ ಮತ್ತು ಇತರ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದ ಮಲ್ಲಿಕಾರ್ಜುನ ಖರ್ಗೆ, ಸಮಾಜದ ಎಲ್ಲ ವರ್ಗದ ಜನರನ್ನು ಒಳಗೊಳ್ಳುವ ಅಭಿವೃದ್ಧಿ ಮಾಡುವುದಾಗಿ ಹೇಳಿದರು. “ಪ್ರಧಾನಿ ಮೋದಿ ಯಾವಾಗಲೂ ‘ಯೇ ತು ಮೋದಿ ಕಿ ಗ್ಯಾರಂಟಿ ಹೈ’ ಎಂದು ಹೇಳುತ್ತಾರೆ. ಮೋದಿಯವರ ಗ್ಯಾರಂಟಿ ಎಲ್ಲಿದೆ? ನಿಮ್ಮ ಬ್ಯಾಂಕ್ ಖಾತೆಗೆ 15 ಲಕ್ಷ ಹಣ ಬಂದಿದೆಯಾ? ರೈತರ ಆದಾಯ ದ್ವಿಗುಣಗೊಂಡಿದೆಯಾ? 2 ಕೋಟಿ ಉದ್ಯೋಗ ಒದಗಿಸಿದ್ದಾರಾ?” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರು ಯಾವಾಗಲೂ ನಮ್ಮ ಪಕ್ಷದ ಮೇಲೆ ಯಾಕೆ ದಾಳಿ ಮಾಡುತ್ತಾರೆ? ಅವರು ನಮ್ಮ ಶಾಸಕರು, ಸಂಸದರ ಮೇಲೆ ದಾಳಿ ಮಾಡಿ, ದುರುಪಯೋಗಪಡಿಸಿಕೊಳ್ಳುತ್ತಿರುವುದು ಮತ್ತು ಅವರನ್ನು ಖರೀದಿಸುತ್ತಿರುವುದು ಯಾಕೆ?” ಎಂದು ಖರ್ಗೆ ಕೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನದ ಪ್ರಕಾರ ‘ಪೋಲವರಂ’ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಈ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ನಾಯಕ ಪವನ್ ಕಲ್ಯಾಣ್ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.

“ಆಂಧ್ರಪ್ರದೇಶದಲ್ಲಿ ಬಿಜೆಪಿ ಇದೆ. ಬಿ ಫಾರ್ ಬಾಬು, ಜೆ ಫಾರ್ ಜಗನ್ ಮತ್ತು ಪಿ ಫಾರ್ ಪವನ್, ಅವರು ಮೋದಿ ‘ಜಿ’ಗೆ ಹೆದರಿ ಮತ್ತು ಜನರ ಹಿತವನ್ನು ಗೌರವಿಸದ ಕಾರಣ ಬಿಜೆಪಿಯೊಂದಿಗಿದ್ದಾರೆ” ಎಂದು ಹೇಳಿದರು

2014ರಲ್ಲಿ ಆಂಧ್ರ ಪ್ರದೇಶಕ್ಕೆ ನೀಡಿದ್ದ ಬದ್ಧತೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಪುನರುಚ್ಚರಿಸಿದೆ. ರಾಯಲಸೀಮಾ ಮತ್ತು ಉತ್ತರ ಆಂಧ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗಳನ್ನು ನೀಡುವುದು, ದುಗರಾಜಪಟ್ಟಣಂ ಸಮುದ್ರ ಬಂದರು ನಿರ್ಮಾಣ, ಕಡಪ ಉಕ್ಕಿನ ಸ್ಥಾವರ ಇವುಗಳಲ್ಲಿ ಸೇರಿವೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ತೆಲಂಗಾಣ ನಂತರ ಆಂಧ್ರ ಪ್ರದೇಶವೂ ಕಾಂಗ್ರೆಸ್‌ನತ್ತ ಭರವಸೆಯಿಂದ ನೋಡುತ್ತಿದೆ” ಎಂದಿದ್ದಾರೆ.

ಈ ವರ್ಷದ ಮೇ ತಿಂಗಳಿಗಿಂತ ಮುನ್ನ ಆಂಧ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದೇ ಸಮಯದಲ್ಲಿ ಲೋಕಸಭೆ ಚುನಾವಣೆಯೂ ನಡೆಯಬಹುದು. ಆಂಧ್ರದಲ್ಲಿ ಈ ಬಾರಿ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ನಡೆಯು ನಿರೀಕ್ಷೆಯಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ: ಕರ್ನಾಟಕದಿಂದ ಸ್ಪರ್ಧಿಸುತ್ತಾರಾ ಕೇಂದ್ರ ಸಚಿವರಾದ ಜೈಶಂಕರ್, ಸೀತಾರಾಮನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...