Homeಮುಖಪುಟಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

- Advertisement -
- Advertisement -

ಮುಂಬರುವ ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ದತೆ ಆರಂಭಿಸಿದ್ದು, ಕರ್ನಾಟಕ ತೆಲಂಗಾಣದಂತೆ ಮೊದಲ ಗ್ಯಾರಂಟಿಯನ್ನೂ ಘೋಷಿಸಿದೆ.

ನಿನ್ನೆ(ಫೆ.26) ಅನಂತಪುರದಲ್ಲಿ ನಡೆದ ‘ನ್ಯಾಯ ಸಾಧನ ಸಭೆ’ ಎಂಬ ಬೃಹತ್ ಸಮಾವೇಶದಲ್ಲಿ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ರೂ 5,000 ಧನ ಸಹಾಯ ನೀಡುವ ಮೊದಲ ಗ್ಯಾರಂಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರ ಕೋಟೆಯಾಗಿದ್ದ ಆಂಧ್ರ ಪ್ರದೇಶದಲ್ಲಿ ಪ್ರಸ್ತುತ ಪಕ್ಷ ನೆಲ ಕಚ್ಚಿದೆ. ಅದನ್ನು ಮತ್ತೆ ಬಲಪಡಿಸಲು ಕಾಂಗ್ರೆಸ್ ಪಣ ತೊಟ್ಟಿದ್ದು, ವಿಧಾನಸಭೆ ಚುನಾವಣೆಯ ಚಟುವಟಿಕೆಗಳು ಆರಂಭಗೊಳ್ಳುವ ಮುನ್ನವೇ ಗ್ಯಾರಂಟಿ ಘೋಷಿಸಿ ಬಹಳ ಉತ್ಸಾಹದಲ್ಲಿದೆ.

‘ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಬೆಂಬಲ’ (Indiramma Universal Basic Income support) ಎಂಬ ಹೆಸರಿನಲ್ಲಿ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ 5 ಸಾವಿರ ರೂ. ಜಮೆ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. “ನಮ್ಮ ಗ್ಯಾರಂಟಿ ಮೋದಿಯವರ ಗ್ಯಾರಂಟಿಯಂತಲ್ಲ. ನಾವು ಭರವಸೆ ನೀಡುತ್ತೇವೆ ಮತ್ತು ಅದನ್ನು ಈಡೇರಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

ಸಿಎಂ ಜಗನ್ ಮೋಹನ್ ರೆಡ್ಡಿಯವರ ಸಹೋದರಿ ವೈಎಸ್‌ ಶರ್ಮಿಳಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅನಂತಪುರದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಸಭೆಯನ್ನು ಕಾಂಗ್ರೆಸ್ ಆಯೋಜಿಸಿತ್ತು. ಆಂಧ್ರ ಪ್ರದೇಶದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಾಣಿಕ್ಕಂ ಟ್ಯಾಗೋರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯ ಎನ್‌ವಿ ರಘುವೀರಾ ರೆಡ್ಡಿ ಮತ್ತು ಇತರ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದ ಮಲ್ಲಿಕಾರ್ಜುನ ಖರ್ಗೆ, ಸಮಾಜದ ಎಲ್ಲ ವರ್ಗದ ಜನರನ್ನು ಒಳಗೊಳ್ಳುವ ಅಭಿವೃದ್ಧಿ ಮಾಡುವುದಾಗಿ ಹೇಳಿದರು. “ಪ್ರಧಾನಿ ಮೋದಿ ಯಾವಾಗಲೂ ‘ಯೇ ತು ಮೋದಿ ಕಿ ಗ್ಯಾರಂಟಿ ಹೈ’ ಎಂದು ಹೇಳುತ್ತಾರೆ. ಮೋದಿಯವರ ಗ್ಯಾರಂಟಿ ಎಲ್ಲಿದೆ? ನಿಮ್ಮ ಬ್ಯಾಂಕ್ ಖಾತೆಗೆ 15 ಲಕ್ಷ ಹಣ ಬಂದಿದೆಯಾ? ರೈತರ ಆದಾಯ ದ್ವಿಗುಣಗೊಂಡಿದೆಯಾ? 2 ಕೋಟಿ ಉದ್ಯೋಗ ಒದಗಿಸಿದ್ದಾರಾ?” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರು ಯಾವಾಗಲೂ ನಮ್ಮ ಪಕ್ಷದ ಮೇಲೆ ಯಾಕೆ ದಾಳಿ ಮಾಡುತ್ತಾರೆ? ಅವರು ನಮ್ಮ ಶಾಸಕರು, ಸಂಸದರ ಮೇಲೆ ದಾಳಿ ಮಾಡಿ, ದುರುಪಯೋಗಪಡಿಸಿಕೊಳ್ಳುತ್ತಿರುವುದು ಮತ್ತು ಅವರನ್ನು ಖರೀದಿಸುತ್ತಿರುವುದು ಯಾಕೆ?” ಎಂದು ಖರ್ಗೆ ಕೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನದ ಪ್ರಕಾರ ‘ಪೋಲವರಂ’ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಈ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ನಾಯಕ ಪವನ್ ಕಲ್ಯಾಣ್ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.

“ಆಂಧ್ರಪ್ರದೇಶದಲ್ಲಿ ಬಿಜೆಪಿ ಇದೆ. ಬಿ ಫಾರ್ ಬಾಬು, ಜೆ ಫಾರ್ ಜಗನ್ ಮತ್ತು ಪಿ ಫಾರ್ ಪವನ್, ಅವರು ಮೋದಿ ‘ಜಿ’ಗೆ ಹೆದರಿ ಮತ್ತು ಜನರ ಹಿತವನ್ನು ಗೌರವಿಸದ ಕಾರಣ ಬಿಜೆಪಿಯೊಂದಿಗಿದ್ದಾರೆ” ಎಂದು ಹೇಳಿದರು

2014ರಲ್ಲಿ ಆಂಧ್ರ ಪ್ರದೇಶಕ್ಕೆ ನೀಡಿದ್ದ ಬದ್ಧತೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಪುನರುಚ್ಚರಿಸಿದೆ. ರಾಯಲಸೀಮಾ ಮತ್ತು ಉತ್ತರ ಆಂಧ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗಳನ್ನು ನೀಡುವುದು, ದುಗರಾಜಪಟ್ಟಣಂ ಸಮುದ್ರ ಬಂದರು ನಿರ್ಮಾಣ, ಕಡಪ ಉಕ್ಕಿನ ಸ್ಥಾವರ ಇವುಗಳಲ್ಲಿ ಸೇರಿವೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ತೆಲಂಗಾಣ ನಂತರ ಆಂಧ್ರ ಪ್ರದೇಶವೂ ಕಾಂಗ್ರೆಸ್‌ನತ್ತ ಭರವಸೆಯಿಂದ ನೋಡುತ್ತಿದೆ” ಎಂದಿದ್ದಾರೆ.

ಈ ವರ್ಷದ ಮೇ ತಿಂಗಳಿಗಿಂತ ಮುನ್ನ ಆಂಧ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದೇ ಸಮಯದಲ್ಲಿ ಲೋಕಸಭೆ ಚುನಾವಣೆಯೂ ನಡೆಯಬಹುದು. ಆಂಧ್ರದಲ್ಲಿ ಈ ಬಾರಿ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ನಡೆಯು ನಿರೀಕ್ಷೆಯಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ: ಕರ್ನಾಟಕದಿಂದ ಸ್ಪರ್ಧಿಸುತ್ತಾರಾ ಕೇಂದ್ರ ಸಚಿವರಾದ ಜೈಶಂಕರ್, ಸೀತಾರಾಮನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...