Homeಮುಖಪುಟಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಆಂಧ್ರ ವಿಧಾನಸಭೆ ಚುನಾವಣೆ: ಮೊದಲ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

- Advertisement -
- Advertisement -

ಮುಂಬರುವ ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ದತೆ ಆರಂಭಿಸಿದ್ದು, ಕರ್ನಾಟಕ ತೆಲಂಗಾಣದಂತೆ ಮೊದಲ ಗ್ಯಾರಂಟಿಯನ್ನೂ ಘೋಷಿಸಿದೆ.

ನಿನ್ನೆ(ಫೆ.26) ಅನಂತಪುರದಲ್ಲಿ ನಡೆದ ‘ನ್ಯಾಯ ಸಾಧನ ಸಭೆ’ ಎಂಬ ಬೃಹತ್ ಸಮಾವೇಶದಲ್ಲಿ ಪ್ರತಿ ಬಡ ಕುಟುಂಬಕ್ಕೆ ತಿಂಗಳಿಗೆ ರೂ 5,000 ಧನ ಸಹಾಯ ನೀಡುವ ಮೊದಲ ಗ್ಯಾರಂಟಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರ ಕೋಟೆಯಾಗಿದ್ದ ಆಂಧ್ರ ಪ್ರದೇಶದಲ್ಲಿ ಪ್ರಸ್ತುತ ಪಕ್ಷ ನೆಲ ಕಚ್ಚಿದೆ. ಅದನ್ನು ಮತ್ತೆ ಬಲಪಡಿಸಲು ಕಾಂಗ್ರೆಸ್ ಪಣ ತೊಟ್ಟಿದ್ದು, ವಿಧಾನಸಭೆ ಚುನಾವಣೆಯ ಚಟುವಟಿಕೆಗಳು ಆರಂಭಗೊಳ್ಳುವ ಮುನ್ನವೇ ಗ್ಯಾರಂಟಿ ಘೋಷಿಸಿ ಬಹಳ ಉತ್ಸಾಹದಲ್ಲಿದೆ.

‘ಇಂದಿರಮ್ಮ ಸಾರ್ವತ್ರಿಕ ಮೂಲ ಆದಾಯ ಬೆಂಬಲ’ (Indiramma Universal Basic Income support) ಎಂಬ ಹೆಸರಿನಲ್ಲಿ ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ ನೇರವಾಗಿ 5 ಸಾವಿರ ರೂ. ಜಮೆ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. “ನಮ್ಮ ಗ್ಯಾರಂಟಿ ಮೋದಿಯವರ ಗ್ಯಾರಂಟಿಯಂತಲ್ಲ. ನಾವು ಭರವಸೆ ನೀಡುತ್ತೇವೆ ಮತ್ತು ಅದನ್ನು ಈಡೇರಿಸುತ್ತೇವೆ” ಎಂದು ಖರ್ಗೆ ಹೇಳಿದ್ದಾರೆ.

ಸಿಎಂ ಜಗನ್ ಮೋಹನ್ ರೆಡ್ಡಿಯವರ ಸಹೋದರಿ ವೈಎಸ್‌ ಶರ್ಮಿಳಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಅನಂತಪುರದಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಸಭೆಯನ್ನು ಕಾಂಗ್ರೆಸ್ ಆಯೋಜಿಸಿತ್ತು. ಆಂಧ್ರ ಪ್ರದೇಶದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಾಣಿಕ್ಕಂ ಟ್ಯಾಗೋರ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯ ಎನ್‌ವಿ ರಘುವೀರಾ ರೆಡ್ಡಿ ಮತ್ತು ಇತರ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾಂಗ್ರೆಸ್ ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದ ಮಲ್ಲಿಕಾರ್ಜುನ ಖರ್ಗೆ, ಸಮಾಜದ ಎಲ್ಲ ವರ್ಗದ ಜನರನ್ನು ಒಳಗೊಳ್ಳುವ ಅಭಿವೃದ್ಧಿ ಮಾಡುವುದಾಗಿ ಹೇಳಿದರು. “ಪ್ರಧಾನಿ ಮೋದಿ ಯಾವಾಗಲೂ ‘ಯೇ ತು ಮೋದಿ ಕಿ ಗ್ಯಾರಂಟಿ ಹೈ’ ಎಂದು ಹೇಳುತ್ತಾರೆ. ಮೋದಿಯವರ ಗ್ಯಾರಂಟಿ ಎಲ್ಲಿದೆ? ನಿಮ್ಮ ಬ್ಯಾಂಕ್ ಖಾತೆಗೆ 15 ಲಕ್ಷ ಹಣ ಬಂದಿದೆಯಾ? ರೈತರ ಆದಾಯ ದ್ವಿಗುಣಗೊಂಡಿದೆಯಾ? 2 ಕೋಟಿ ಉದ್ಯೋಗ ಒದಗಿಸಿದ್ದಾರಾ?” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರು ಯಾವಾಗಲೂ ನಮ್ಮ ಪಕ್ಷದ ಮೇಲೆ ಯಾಕೆ ದಾಳಿ ಮಾಡುತ್ತಾರೆ? ಅವರು ನಮ್ಮ ಶಾಸಕರು, ಸಂಸದರ ಮೇಲೆ ದಾಳಿ ಮಾಡಿ, ದುರುಪಯೋಗಪಡಿಸಿಕೊಳ್ಳುತ್ತಿರುವುದು ಮತ್ತು ಅವರನ್ನು ಖರೀದಿಸುತ್ತಿರುವುದು ಯಾಕೆ?” ಎಂದು ಖರ್ಗೆ ಕೇಳಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನದ ಪ್ರಕಾರ ‘ಪೋಲವರಂ’ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಈ ಯೋಜನೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ನಾಯಕ ಪವನ್ ಕಲ್ಯಾಣ್ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.

“ಆಂಧ್ರಪ್ರದೇಶದಲ್ಲಿ ಬಿಜೆಪಿ ಇದೆ. ಬಿ ಫಾರ್ ಬಾಬು, ಜೆ ಫಾರ್ ಜಗನ್ ಮತ್ತು ಪಿ ಫಾರ್ ಪವನ್, ಅವರು ಮೋದಿ ‘ಜಿ’ಗೆ ಹೆದರಿ ಮತ್ತು ಜನರ ಹಿತವನ್ನು ಗೌರವಿಸದ ಕಾರಣ ಬಿಜೆಪಿಯೊಂದಿಗಿದ್ದಾರೆ” ಎಂದು ಹೇಳಿದರು

2014ರಲ್ಲಿ ಆಂಧ್ರ ಪ್ರದೇಶಕ್ಕೆ ನೀಡಿದ್ದ ಬದ್ಧತೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಪುನರುಚ್ಚರಿಸಿದೆ. ರಾಯಲಸೀಮಾ ಮತ್ತು ಉತ್ತರ ಆಂಧ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ಗಳನ್ನು ನೀಡುವುದು, ದುಗರಾಜಪಟ್ಟಣಂ ಸಮುದ್ರ ಬಂದರು ನಿರ್ಮಾಣ, ಕಡಪ ಉಕ್ಕಿನ ಸ್ಥಾವರ ಇವುಗಳಲ್ಲಿ ಸೇರಿವೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ತೆಲಂಗಾಣ ನಂತರ ಆಂಧ್ರ ಪ್ರದೇಶವೂ ಕಾಂಗ್ರೆಸ್‌ನತ್ತ ಭರವಸೆಯಿಂದ ನೋಡುತ್ತಿದೆ” ಎಂದಿದ್ದಾರೆ.

ಈ ವರ್ಷದ ಮೇ ತಿಂಗಳಿಗಿಂತ ಮುನ್ನ ಆಂಧ ಪ್ರದೇಶ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದೇ ಸಮಯದಲ್ಲಿ ಲೋಕಸಭೆ ಚುನಾವಣೆಯೂ ನಡೆಯಬಹುದು. ಆಂಧ್ರದಲ್ಲಿ ಈ ಬಾರಿ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ ನಡೆಯು ನಿರೀಕ್ಷೆಯಿದೆ.

ಇದನ್ನೂ ಓದಿ : ಲೋಕಸಭಾ ಚುನಾವಣೆ: ಕರ್ನಾಟಕದಿಂದ ಸ್ಪರ್ಧಿಸುತ್ತಾರಾ ಕೇಂದ್ರ ಸಚಿವರಾದ ಜೈಶಂಕರ್, ಸೀತಾರಾಮನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...