Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ 'ಮಹಾಲಕ್ಷ್ಮಿ' ಯೋಜನೆ ಸೇರಿ...

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ ‘ಮಹಾಲಕ್ಷ್ಮಿ’ ಯೋಜನೆ ಸೇರಿ ಹಲವು ಗ್ಯಾರೆಂಟಿಗಳ ಘೋಷಣೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ಪಕ್ಷವು ಬುಧವಾರ ಮಹಿಳೆಯರಿಗೆ ಭರ್ಜರಿ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದು, ಬಡ ಕುಟುಂಬದ ಮಹಿಳಾ ಸದಸ್ಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ಗ್ಯಾರೆಂಟಿಗಳಲ್ಲಿ ಸೇರಿದೆ.

ಮಹಾರಾಷ್ಟ್ರದ ಧುಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ನವದೆಹಲಿಯಿಂದಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದಾರೆ. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಗ್ಯಾರೆಂಟಿಗಳಲ್ಲಿ ಸೇರಿದೆ.

ಕಳೆದ 10 ವರ್ಷಗಳ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಏನೂ ಸಿಕ್ಕಿಲ್ಲ, ಬೆಲೆ ಏರಿಕೆ, ನಿರುದ್ಯೋಗ, ಭದ್ರತೆ ಮತ್ತು ಸುರಕ್ಷತೆಯಿಂದಾಗಿ ಅವರ ತೊಂದರೆಗಳು ಹೆಚ್ಚಿವೆ ಎಂದು ರಾಹುಲ್‌ ಗಾಂಧಿ ಈ ವೇಳೆ ಹೇಳಿದ್ದಾರೆ.

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ  ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಈ ಮೊದಲು ನಾವು ರೈತ ನ್ಯಾಯ ಮತ್ತು ಯುವ ನ್ಯಾಯವನ್ನು  ಘೋಷಿಸಿದ್ದೇವೆ ಮತ್ತು ನಮ್ಮ ಭರವಸೆಗಳು ಖಾಲಿ ಭರವಸೆಗಳು ಮತ್ತು ಹೇಳಿಕೆಗಳಲ್ಲ. ನಾವು ಏನು ಹೇಳುತ್ತೇವೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ, ನಾವು ಪ್ರಣಾಳಿಕೆಗಳನ್ನು ತಯಾರಿಸುತ್ತಿದ್ದೇವೆ ಮತ್ತು ಆ ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಖರ್ಗೆಈ ವೇಳೆ ಹೇಳಿದ್ದಾರೆ.

ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿಯನ್ನು ನಡೆಸುವ ಬಗ್ಗೆ ಈ ಮೊದಲು ಭರವಸೆಯನ್ನು ನೀಡಿತ್ತು. ದೇಶದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಅರಣ್ಯ ಹಕ್ಕು ಅಧಿನಿಯಮದ ಪರಿಣಾಮಕಾರಿ ಅನುಷ್ಠಾನ, ಮೋದಿ ಸರಕಾರ ಅರಣ್ಯ ಸಂರಕ್ಷಣೆ ಮತ್ತು ಭೂಮಿ ಅಧಿಗ್ರಹಣ ಅಧಿನಿಯಮಗಳಲ್ಲಿ ಮಾಡಿರುವ ಎಲ್ಲಾ ತಿದ್ದುಪಡಿಗಳ ವಾಪಸ್, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯಾವ ಬಸ್ತಿಗಳಲ್ಲಿ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚು ಇದೆಯೋ ಆ ಬಸ್ತಿಗಳನ್ನು ಪರಿಶಿಷ್ಟ ಪ್ರದೇಶ ಎಂದು ಘೋಷಣೆ, PESA  ಪ್ರಕಾರ ರಾಜ್ಯಗಳಲ್ಲಿ ಕಾನೂನು, ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಸೇರಿ ಹಲವು ಭರವಸೆಗಳನ್ನು ಈ ಮೊದಲು ಕಾಂಗ್ರೆಸ್‌ ನೀಡಿತ್ತು.

ಇದನ್ನು ಓದಿ:  ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...