Homeಮುಖಪುಟಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ 'ಮಹಾಲಕ್ಷ್ಮಿ' ಯೋಜನೆ ಸೇರಿ...

ಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ ‘ಮಹಾಲಕ್ಷ್ಮಿ’ ಯೋಜನೆ ಸೇರಿ ಹಲವು ಗ್ಯಾರೆಂಟಿಗಳ ಘೋಷಣೆ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ಪಕ್ಷವು ಬುಧವಾರ ಮಹಿಳೆಯರಿಗೆ ಭರ್ಜರಿ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ್ದು, ಬಡ ಕುಟುಂಬದ ಮಹಿಳಾ ಸದಸ್ಯರಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಆರ್ಥಿಕ ಸಹಾಯ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50 ಪ್ರತಿಶತ ಮೀಸಲಾತಿ ಗ್ಯಾರೆಂಟಿಗಳಲ್ಲಿ ಸೇರಿದೆ.

ಮಹಾರಾಷ್ಟ್ರದ ಧುಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ನವದೆಹಲಿಯಿಂದಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗ್ಯಾರೆಂಟಿಯನ್ನು ಘೋಷಣೆ ಮಾಡಿದ್ದಾರೆ. ‘ನಾರಿ ನ್ಯಾಯ್ ಗ್ಯಾರಂಟಿ’ ಅಡಿಯಲ್ಲಿ-ಮಹಾಲಕ್ಷ್ಮಿ, ಆದಿ ಅಬಾದಿ-ಪುರ ಹಕ್, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಮತ್ತು ಸಾವತ್ರಿಬಾಯಿ ಫುಲೆ ಹಾಸ್ಟೆಲ್‌ ನಿರ್ಮಾಣ ಗ್ಯಾರೆಂಟಿಗಳಲ್ಲಿ ಸೇರಿದೆ.

ಕಳೆದ 10 ವರ್ಷಗಳ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಏನೂ ಸಿಕ್ಕಿಲ್ಲ, ಬೆಲೆ ಏರಿಕೆ, ನಿರುದ್ಯೋಗ, ಭದ್ರತೆ ಮತ್ತು ಸುರಕ್ಷತೆಯಿಂದಾಗಿ ಅವರ ತೊಂದರೆಗಳು ಹೆಚ್ಚಿವೆ ಎಂದು ರಾಹುಲ್‌ ಗಾಂಧಿ ಈ ವೇಳೆ ಹೇಳಿದ್ದಾರೆ.

-‘ಮಹಾಲಕ್ಷ್ಮಿ’ ಯೋಜನೆಯು ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಸಹಾಯವನ್ನು ಒಳಗೊಂಡಿರುತ್ತದೆ.

-ಆದಿ ಆಬಾದಿ-ಪುರ ಹಕ್‌ ಕೇಂದ್ರ ಸರ್ಕಾರದ ಹೊಸ ನೇಮಕಾತಿಗಳಲ್ಲಿ ಮಹಿಳೆಯರು 50 ಪ್ರತಿಶತದಷ್ಟು ಮೀಸಲಾತಿಯನ್ನು ನೀಡಲಾಗುತ್ತದೆ.

-‘ಶಕ್ತಿ ಕಾ ಸಮ್ಮಾನ್’ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ವೇತನ ದ್ವಿಗುಣ

-‘ಅಧಿಕಾರ ಮೈತ್ರಿ’ ಅಡಿಯಲ್ಲಿ, ಮಹಿಳೆಯರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅಗತ್ಯ ಸಹಾಯವನ್ನು ಒದಗಿಸಲು ಪ್ರತಿ ಪಂಚಾಯತ್‌ನಲ್ಲಿ ಒಬ್ಬ ಕಾನೂನು ಸಹಾಯಕರನ್ನು ಅಧಿಕಾರ ಮೈತ್ರಿ ರೂಪದಲ್ಲಿ ನೇಮಿಸುವುದು

-ಕೇಂದ್ರವು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ  ಕನಿಷ್ಠ ಒಂದು  ಮಹಿಳಾ ಹಾಸ್ಟೆಲ್‌ನ್ನು ನಿರ್ಮಿಸಲಿದ್ದು ಮತ್ತು ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದೇಶಾದ್ಯಂತ ದ್ವಿಗುಣಗೊಳಿಸಲಿದೆ.

ಈ ಮೊದಲು ನಾವು ರೈತ ನ್ಯಾಯ ಮತ್ತು ಯುವ ನ್ಯಾಯವನ್ನು  ಘೋಷಿಸಿದ್ದೇವೆ ಮತ್ತು ನಮ್ಮ ಭರವಸೆಗಳು ಖಾಲಿ ಭರವಸೆಗಳು ಮತ್ತು ಹೇಳಿಕೆಗಳಲ್ಲ. ನಾವು ಏನು ಹೇಳುತ್ತೇವೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ, ನಾವು ಪ್ರಣಾಳಿಕೆಗಳನ್ನು ತಯಾರಿಸುತ್ತಿದ್ದೇವೆ ಮತ್ತು ಆ ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದು ಖರ್ಗೆಈ ವೇಳೆ ಹೇಳಿದ್ದಾರೆ.

ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ದೇಶದಾದ್ಯಂತ ಜಾತಿಗಣತಿಯನ್ನು ನಡೆಸುವ ಬಗ್ಗೆ ಈ ಮೊದಲು ಭರವಸೆಯನ್ನು ನೀಡಿತ್ತು. ದೇಶದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಅರಣ್ಯ ಹಕ್ಕು ಅಧಿನಿಯಮದ ಪರಿಣಾಮಕಾರಿ ಅನುಷ್ಠಾನ, ಮೋದಿ ಸರಕಾರ ಅರಣ್ಯ ಸಂರಕ್ಷಣೆ ಮತ್ತು ಭೂಮಿ ಅಧಿಗ್ರಹಣ ಅಧಿನಿಯಮಗಳಲ್ಲಿ ಮಾಡಿರುವ ಎಲ್ಲಾ ತಿದ್ದುಪಡಿಗಳ ವಾಪಸ್, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯಾವ ಬಸ್ತಿಗಳಲ್ಲಿ ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚು ಇದೆಯೋ ಆ ಬಸ್ತಿಗಳನ್ನು ಪರಿಶಿಷ್ಟ ಪ್ರದೇಶ ಎಂದು ಘೋಷಣೆ, PESA  ಪ್ರಕಾರ ರಾಜ್ಯಗಳಲ್ಲಿ ಕಾನೂನು, ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಸೇರಿ ಹಲವು ಭರವಸೆಗಳನ್ನು ಈ ಮೊದಲು ಕಾಂಗ್ರೆಸ್‌ ನೀಡಿತ್ತು.

ಇದನ್ನು ಓದಿ:  ಸಿಎಎ ಮತ್ತು ಭಾರತೀಯ ಮುಸ್ಲಿಮರ ಕುರಿತ ಧನಾತ್ಮಕ ನಿರೂಪಣೆ PIB ವೆಬ್‌ಪೇಜ್‌ನಿಂದ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...