Homeಮುಖಪುಟಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ...

ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ…

ತಮಕುಹಿ ರಾಜ್ ಕ್ಷೇತ್ರದಿಂದ 2 ಬಾರಿ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಸಜ್ಜಾಗಿದ್ದಾರೆ.

- Advertisement -
- Advertisement -

ಸುಮಾರು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷವು ಸುಮಾರು ಆರು ನಾಯಕರ ಸಣ್ಣ ಗುಂಪನ್ನು ಉತ್ತರಪ್ರದೇಶದಲ್ಲಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ತನ್ನ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಅವಲಂಬಿಸಿತ್ತು. ಆದರೆ ಹಿರಿಯ ನಾಯಕರಾದ ಜಿತೇನ್ ಪ್ರಸಾದ್, ಸಂಜಯ್ ಸಿಂಗ್, ಶ್ರೀಪ್ರಕಾಶ್ ಜೈಸ್ವಾಲ್, ನಿರ್ಮಲ್ ಖತ್ರಿ, ಸಲ್ಮಾನ್ ಖುರ್ಷಿದ್ ಮತ್ತು ರಾಜ್ ಬಬ್ಬರ್ ಅದರಲ್ಲಿ ವಿಫಲರಾಗಿದ್ದಾರೆ. ಏಪ್ರಿಲ್‌ ಮೇ ನಲ್ಲಿ ನಡೆದ  ಲೋಕಸಭಾ ಚುನಾವಣೆಯಲ್ಲಿ, ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಸೋಲನ್ನು ಅನುಭವಿಸಿತು. ಅಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ತಮ್ಮ ಈ ವಿನಾಶಕಾರಿ ಪ್ರದರ್ಶನದ ನಂತರ ಈಗ ಕಾಂಗ್ರೆಸ್ ಪಕ್ಷವು ಈ ‘ಗಣ್ಯ’ ಗುಂಪನ್ನು ಮೀರಿ ಹೆಚ್ಚು ಬೇರೂರಿರುವ, ಬಡವರ ಪರವಾದ ನಾಯಕನನ್ನು ಹುಡುಕುತ್ತಿತ್ತು. ತಮಕುಹಿ ರಾಜ್ ಕ್ಷೇತ್ರದ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಹುಡುಕಾಟಕ್ಕೆ ತೆರೆಎಳೆದಿದೆ.

ಪ್ರಧಾನ ಕಾರ್ಯದರ್ಶಿ (ಉತ್ತರಪ್ರದೇಶದ ಪೂರ್ವ ಉಸ್ತುವಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಯೋಗದೊಂದಿಗೆ ಲಲ್ಲು ಈಗ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಲ್ಲು ಅವರ ನೇಮಕದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ತನ್ನ ಪಾಠಗಳನ್ನು ಕಲಿತುಕೊಂಡಿದೆ ಮತ್ತು ಸಂಘಟನೆಯನ್ನು ಪುನರ್ನಿರ್ಮಾಣ ಮಾಡುವ ಜವಾಬ್ದಾರಿಯನ್ನು ತಳಮಟ್ಟದ ಹಿಡಿತ ಹೊಂದಿರುವ ನಾಯಕನಿಗೆ ನೀಡಿದೆ ಎಂದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಈ ನಿರ್ಧಾರವು ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಲಲ್ಲು ಅವರ ಆರಂಭಿಕ ಹೋರಾಟ
ಕುಶಿನಗರ ಜಿಲ್ಲೆಯ ತಮ್ಕುಹಿ ರಾಜ್‌ನ 40 ವರ್ಷದ ಶಾಸಕ ಲಲ್ಲು ಅವರು 2001 ರಲ್ಲಿ ಕುಶಿನಗರದ ಕಿಶನ್ ಪಿಜಿ ಕಾಲೇಜಿನಿಂದ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಕ್ರಿಯ ರಾಜಕೀಯದಲ್ಲಿದ್ದಾರೆ.

ಕಾಲೇಜು ಸಮಯದಲ್ಲಿ, ಅವರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆದರೆ ಎರಡನೇ ಪ್ರಯತ್ನದಲ್ಲಿ ಮಾತ್ರ ಯಶಸ್ವಿಯಾದರು. ಇದನ್ನು ಅನುಸರಿಸಿ, ಅವರು ಸಾಮಾಜಿಕ ಚಳವಳಿಗಳೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಆಂದೋಲನಗಳು ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.

2007 ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ಅವರು ಯಾವುದೇ ಪಕ್ಷವು ಟಿಕೆಟ್ ನೀಡಲು ಸಿದ್ಧರಿಲ್ಲದ ಕಾರಣ, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಗ ಅವರು ಠೇವಣಿಯನ್ನು ಸಹ ಕಳೆದುಕೊಂಡಿದ್ದರು.

ಕೃಷಿ ಕುಟುಂಬಕ್ಕೆ ಸೇರಿದ ಲಲ್ಲು, ಆ ಸಮಯದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರದ ಕಾರಣ ದೆಹಲಿಗೆ ತೆರಳಿ ನೋಯ್ಡಾದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ತನ್ನ ಕೆಲಸದ ಭಾಗವಾಗಿ, ಕಬ್ಬಿಣದ ಸರಳುಗಳಂತಹ ಭಾರವಾದ ವಸ್ತುಗಳನ್ನು ಎತ್ತುವಲ್ಲಿ ಅವನು ಆಗಾಗ್ಗೆ ಕಾರ್ಮಿಕರಿಗೆ ಸಹಾಯ ಮಾಡಬೇಕಾಗಿತ್ತು ಎಂದು ತಮ್ಮ ಹಿಂದಿನ ಜೀವನವನ್ನು ಅವರು ನೆನಪಿಸಿಕೊಳ್ಳುತ್ತಾರೆ.

ಎಂಟು ತಿಂಗಳು ಕೆಲಸದಲ್ಲಿ ಕಳೆದ ನಂತರ ಲಲ್ಲು ಮನೆಗೆ ಮರಳಿದರು. ಆದರೆ, ಈ ಬಾರಿ ಅವರ ತಮ್ಕುಹಿ ರಾಜ್ ಕ್ಷೇತ್ರದ ಗ್ರಾಮಸ್ಥರು ಅವರನ್ನು ಮತ್ತೆ ನೋಯ್ಡಾಕ್ಕೆ ಹೋಗದಂತೆ ತಡೆದು ಮತ್ತೆ ರಾಜಕೀಯ ಪ್ರವೇಶಿಸಲು ಒತ್ತಾಯಿಸಿದ್ದರಂತೆ.

ಆಗ ಲಲ್ಲು ಮತ್ತೆ ತಮಕುಹಿ ರಾಜ್‌ನ ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳನ್ನು ಮೇಲೆತ್ತಲು ಪ್ರಾರಂಭಿಸಿದರು. ಅವರು ಹಲವಾರು ಆಂದೋಲನಗಳು ಮತ್ತು ಪ್ರತಿಭಟನೆಗಳನ್ನು ನಡೆಸಿದರು ಮತ್ತು ಅದಕ್ಕಾಗಿ ಜೈಲುವಾಸ ಕೂಡ ಅನುಭವಿಸಿದ್ದಾರೆ.

2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತು. ಅಂತಿಮವಾಗಿ ಅವರು ಬಿಜೆಪಿ ಅಭ್ಯರ್ಥಿಯನ್ನು 5,000 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾದರು. ನಂತರ ಅವರು 2017 ರಲ್ಲಿ ಮತ್ತೆ ಚುನಾಯಿತರಾದರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಮುನ್ನಡೆಸಲು ಆಯ್ಕೆಯಾದರು.

ಗುಜರಾತ್ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಮಿತಿಗಳಿಗೆ ನೇಮಕಾತಿಯೊಂದಿಗೆ ಅವರ ಪ್ರಾಮುಖ್ಯತೆ ಮುಂದುವರೆಯಿತು.

ಈ ವರ್ಷದ ಜೂನ್‌ನಲ್ಲಿ, ಸಾರ್ವತ್ರಿಕ ಚುನಾವಣೆಯ ಒಂದು ತಿಂಗಳ ನಂತರ, ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಅವರ ಖಾತೆಯನ್ನು ‘ಅನುಸರಿಸಿದಾಗ’ ಪಕ್ಷದಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅವರು ಗಮನಿಸಿದ್ದರು. ಮರುದಿನವೇ ಅವರಿಗೆ ಪಕ್ಷದ ಉತ್ತರ ಪ್ರದೇಶ ಪೂರ್ವ ಘಟಕದ ಉಸ್ತುವಾರಿ ವಹಿಸಲಾಯಿತು. ಈಗ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಕಲಹಗಳು ಇನ್ನೂ ಪಕ್ಷವನ್ನು ಪೀಡಿಸುತ್ತಿರುವುದರಿಂದ, ಹೊಸ ಜವಾಬ್ದಾರಿಗೆ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಹೈಕಮಾಂಡ್ ತನ್ನಲ್ಲಿ ವ್ಯಕ್ತಪಡಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಲಲ್ಲು ಹೇಳಿದ್ದಾರೆ.

ಮಾಹಿತಿ ಕೃಪೆ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...