Homeಮುಖಪುಟಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ...

ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ…

ತಮಕುಹಿ ರಾಜ್ ಕ್ಷೇತ್ರದಿಂದ 2 ಬಾರಿ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಸಜ್ಜಾಗಿದ್ದಾರೆ.

- Advertisement -
- Advertisement -

ಸುಮಾರು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷವು ಸುಮಾರು ಆರು ನಾಯಕರ ಸಣ್ಣ ಗುಂಪನ್ನು ಉತ್ತರಪ್ರದೇಶದಲ್ಲಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ತನ್ನ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಅವಲಂಬಿಸಿತ್ತು. ಆದರೆ ಹಿರಿಯ ನಾಯಕರಾದ ಜಿತೇನ್ ಪ್ರಸಾದ್, ಸಂಜಯ್ ಸಿಂಗ್, ಶ್ರೀಪ್ರಕಾಶ್ ಜೈಸ್ವಾಲ್, ನಿರ್ಮಲ್ ಖತ್ರಿ, ಸಲ್ಮಾನ್ ಖುರ್ಷಿದ್ ಮತ್ತು ರಾಜ್ ಬಬ್ಬರ್ ಅದರಲ್ಲಿ ವಿಫಲರಾಗಿದ್ದಾರೆ. ಏಪ್ರಿಲ್‌ ಮೇ ನಲ್ಲಿ ನಡೆದ  ಲೋಕಸಭಾ ಚುನಾವಣೆಯಲ್ಲಿ, ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಸೋಲನ್ನು ಅನುಭವಿಸಿತು. ಅಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ತಮ್ಮ ಈ ವಿನಾಶಕಾರಿ ಪ್ರದರ್ಶನದ ನಂತರ ಈಗ ಕಾಂಗ್ರೆಸ್ ಪಕ್ಷವು ಈ ‘ಗಣ್ಯ’ ಗುಂಪನ್ನು ಮೀರಿ ಹೆಚ್ಚು ಬೇರೂರಿರುವ, ಬಡವರ ಪರವಾದ ನಾಯಕನನ್ನು ಹುಡುಕುತ್ತಿತ್ತು. ತಮಕುಹಿ ರಾಜ್ ಕ್ಷೇತ್ರದ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಹುಡುಕಾಟಕ್ಕೆ ತೆರೆಎಳೆದಿದೆ.

ಪ್ರಧಾನ ಕಾರ್ಯದರ್ಶಿ (ಉತ್ತರಪ್ರದೇಶದ ಪೂರ್ವ ಉಸ್ತುವಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಯೋಗದೊಂದಿಗೆ ಲಲ್ಲು ಈಗ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಲ್ಲು ಅವರ ನೇಮಕದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ತನ್ನ ಪಾಠಗಳನ್ನು ಕಲಿತುಕೊಂಡಿದೆ ಮತ್ತು ಸಂಘಟನೆಯನ್ನು ಪುನರ್ನಿರ್ಮಾಣ ಮಾಡುವ ಜವಾಬ್ದಾರಿಯನ್ನು ತಳಮಟ್ಟದ ಹಿಡಿತ ಹೊಂದಿರುವ ನಾಯಕನಿಗೆ ನೀಡಿದೆ ಎಂದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಈ ನಿರ್ಧಾರವು ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಲಲ್ಲು ಅವರ ಆರಂಭಿಕ ಹೋರಾಟ
ಕುಶಿನಗರ ಜಿಲ್ಲೆಯ ತಮ್ಕುಹಿ ರಾಜ್‌ನ 40 ವರ್ಷದ ಶಾಸಕ ಲಲ್ಲು ಅವರು 2001 ರಲ್ಲಿ ಕುಶಿನಗರದ ಕಿಶನ್ ಪಿಜಿ ಕಾಲೇಜಿನಿಂದ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಕ್ರಿಯ ರಾಜಕೀಯದಲ್ಲಿದ್ದಾರೆ.

ಕಾಲೇಜು ಸಮಯದಲ್ಲಿ, ಅವರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆದರೆ ಎರಡನೇ ಪ್ರಯತ್ನದಲ್ಲಿ ಮಾತ್ರ ಯಶಸ್ವಿಯಾದರು. ಇದನ್ನು ಅನುಸರಿಸಿ, ಅವರು ಸಾಮಾಜಿಕ ಚಳವಳಿಗಳೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಆಂದೋಲನಗಳು ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.

2007 ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ಅವರು ಯಾವುದೇ ಪಕ್ಷವು ಟಿಕೆಟ್ ನೀಡಲು ಸಿದ್ಧರಿಲ್ಲದ ಕಾರಣ, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಗ ಅವರು ಠೇವಣಿಯನ್ನು ಸಹ ಕಳೆದುಕೊಂಡಿದ್ದರು.

ಕೃಷಿ ಕುಟುಂಬಕ್ಕೆ ಸೇರಿದ ಲಲ್ಲು, ಆ ಸಮಯದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರದ ಕಾರಣ ದೆಹಲಿಗೆ ತೆರಳಿ ನೋಯ್ಡಾದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ತನ್ನ ಕೆಲಸದ ಭಾಗವಾಗಿ, ಕಬ್ಬಿಣದ ಸರಳುಗಳಂತಹ ಭಾರವಾದ ವಸ್ತುಗಳನ್ನು ಎತ್ತುವಲ್ಲಿ ಅವನು ಆಗಾಗ್ಗೆ ಕಾರ್ಮಿಕರಿಗೆ ಸಹಾಯ ಮಾಡಬೇಕಾಗಿತ್ತು ಎಂದು ತಮ್ಮ ಹಿಂದಿನ ಜೀವನವನ್ನು ಅವರು ನೆನಪಿಸಿಕೊಳ್ಳುತ್ತಾರೆ.

ಎಂಟು ತಿಂಗಳು ಕೆಲಸದಲ್ಲಿ ಕಳೆದ ನಂತರ ಲಲ್ಲು ಮನೆಗೆ ಮರಳಿದರು. ಆದರೆ, ಈ ಬಾರಿ ಅವರ ತಮ್ಕುಹಿ ರಾಜ್ ಕ್ಷೇತ್ರದ ಗ್ರಾಮಸ್ಥರು ಅವರನ್ನು ಮತ್ತೆ ನೋಯ್ಡಾಕ್ಕೆ ಹೋಗದಂತೆ ತಡೆದು ಮತ್ತೆ ರಾಜಕೀಯ ಪ್ರವೇಶಿಸಲು ಒತ್ತಾಯಿಸಿದ್ದರಂತೆ.

ಆಗ ಲಲ್ಲು ಮತ್ತೆ ತಮಕುಹಿ ರಾಜ್‌ನ ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳನ್ನು ಮೇಲೆತ್ತಲು ಪ್ರಾರಂಭಿಸಿದರು. ಅವರು ಹಲವಾರು ಆಂದೋಲನಗಳು ಮತ್ತು ಪ್ರತಿಭಟನೆಗಳನ್ನು ನಡೆಸಿದರು ಮತ್ತು ಅದಕ್ಕಾಗಿ ಜೈಲುವಾಸ ಕೂಡ ಅನುಭವಿಸಿದ್ದಾರೆ.

2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತು. ಅಂತಿಮವಾಗಿ ಅವರು ಬಿಜೆಪಿ ಅಭ್ಯರ್ಥಿಯನ್ನು 5,000 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾದರು. ನಂತರ ಅವರು 2017 ರಲ್ಲಿ ಮತ್ತೆ ಚುನಾಯಿತರಾದರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಮುನ್ನಡೆಸಲು ಆಯ್ಕೆಯಾದರು.

ಗುಜರಾತ್ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಮಿತಿಗಳಿಗೆ ನೇಮಕಾತಿಯೊಂದಿಗೆ ಅವರ ಪ್ರಾಮುಖ್ಯತೆ ಮುಂದುವರೆಯಿತು.

ಈ ವರ್ಷದ ಜೂನ್‌ನಲ್ಲಿ, ಸಾರ್ವತ್ರಿಕ ಚುನಾವಣೆಯ ಒಂದು ತಿಂಗಳ ನಂತರ, ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಅವರ ಖಾತೆಯನ್ನು ‘ಅನುಸರಿಸಿದಾಗ’ ಪಕ್ಷದಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅವರು ಗಮನಿಸಿದ್ದರು. ಮರುದಿನವೇ ಅವರಿಗೆ ಪಕ್ಷದ ಉತ್ತರ ಪ್ರದೇಶ ಪೂರ್ವ ಘಟಕದ ಉಸ್ತುವಾರಿ ವಹಿಸಲಾಯಿತು. ಈಗ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಕಲಹಗಳು ಇನ್ನೂ ಪಕ್ಷವನ್ನು ಪೀಡಿಸುತ್ತಿರುವುದರಿಂದ, ಹೊಸ ಜವಾಬ್ದಾರಿಗೆ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಹೈಕಮಾಂಡ್ ತನ್ನಲ್ಲಿ ವ್ಯಕ್ತಪಡಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಲಲ್ಲು ಹೇಳಿದ್ದಾರೆ.

ಮಾಹಿತಿ ಕೃಪೆ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...