Homeಮುಖಪುಟಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ...

ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ…

ತಮಕುಹಿ ರಾಜ್ ಕ್ಷೇತ್ರದಿಂದ 2 ಬಾರಿ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಸಜ್ಜಾಗಿದ್ದಾರೆ.

- Advertisement -
- Advertisement -

ಸುಮಾರು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷವು ಸುಮಾರು ಆರು ನಾಯಕರ ಸಣ್ಣ ಗುಂಪನ್ನು ಉತ್ತರಪ್ರದೇಶದಲ್ಲಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ತನ್ನ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಅವಲಂಬಿಸಿತ್ತು. ಆದರೆ ಹಿರಿಯ ನಾಯಕರಾದ ಜಿತೇನ್ ಪ್ರಸಾದ್, ಸಂಜಯ್ ಸಿಂಗ್, ಶ್ರೀಪ್ರಕಾಶ್ ಜೈಸ್ವಾಲ್, ನಿರ್ಮಲ್ ಖತ್ರಿ, ಸಲ್ಮಾನ್ ಖುರ್ಷಿದ್ ಮತ್ತು ರಾಜ್ ಬಬ್ಬರ್ ಅದರಲ್ಲಿ ವಿಫಲರಾಗಿದ್ದಾರೆ. ಏಪ್ರಿಲ್‌ ಮೇ ನಲ್ಲಿ ನಡೆದ  ಲೋಕಸಭಾ ಚುನಾವಣೆಯಲ್ಲಿ, ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಸೋಲನ್ನು ಅನುಭವಿಸಿತು. ಅಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ತಮ್ಮ ಈ ವಿನಾಶಕಾರಿ ಪ್ರದರ್ಶನದ ನಂತರ ಈಗ ಕಾಂಗ್ರೆಸ್ ಪಕ್ಷವು ಈ ‘ಗಣ್ಯ’ ಗುಂಪನ್ನು ಮೀರಿ ಹೆಚ್ಚು ಬೇರೂರಿರುವ, ಬಡವರ ಪರವಾದ ನಾಯಕನನ್ನು ಹುಡುಕುತ್ತಿತ್ತು. ತಮಕುಹಿ ರಾಜ್ ಕ್ಷೇತ್ರದ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಹುಡುಕಾಟಕ್ಕೆ ತೆರೆಎಳೆದಿದೆ.

ಪ್ರಧಾನ ಕಾರ್ಯದರ್ಶಿ (ಉತ್ತರಪ್ರದೇಶದ ಪೂರ್ವ ಉಸ್ತುವಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಯೋಗದೊಂದಿಗೆ ಲಲ್ಲು ಈಗ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಲ್ಲು ಅವರ ನೇಮಕದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ತನ್ನ ಪಾಠಗಳನ್ನು ಕಲಿತುಕೊಂಡಿದೆ ಮತ್ತು ಸಂಘಟನೆಯನ್ನು ಪುನರ್ನಿರ್ಮಾಣ ಮಾಡುವ ಜವಾಬ್ದಾರಿಯನ್ನು ತಳಮಟ್ಟದ ಹಿಡಿತ ಹೊಂದಿರುವ ನಾಯಕನಿಗೆ ನೀಡಿದೆ ಎಂದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಈ ನಿರ್ಧಾರವು ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಲಲ್ಲು ಅವರ ಆರಂಭಿಕ ಹೋರಾಟ
ಕುಶಿನಗರ ಜಿಲ್ಲೆಯ ತಮ್ಕುಹಿ ರಾಜ್‌ನ 40 ವರ್ಷದ ಶಾಸಕ ಲಲ್ಲು ಅವರು 2001 ರಲ್ಲಿ ಕುಶಿನಗರದ ಕಿಶನ್ ಪಿಜಿ ಕಾಲೇಜಿನಿಂದ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಕ್ರಿಯ ರಾಜಕೀಯದಲ್ಲಿದ್ದಾರೆ.

ಕಾಲೇಜು ಸಮಯದಲ್ಲಿ, ಅವರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆದರೆ ಎರಡನೇ ಪ್ರಯತ್ನದಲ್ಲಿ ಮಾತ್ರ ಯಶಸ್ವಿಯಾದರು. ಇದನ್ನು ಅನುಸರಿಸಿ, ಅವರು ಸಾಮಾಜಿಕ ಚಳವಳಿಗಳೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಆಂದೋಲನಗಳು ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.

2007 ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ಅವರು ಯಾವುದೇ ಪಕ್ಷವು ಟಿಕೆಟ್ ನೀಡಲು ಸಿದ್ಧರಿಲ್ಲದ ಕಾರಣ, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಗ ಅವರು ಠೇವಣಿಯನ್ನು ಸಹ ಕಳೆದುಕೊಂಡಿದ್ದರು.

ಕೃಷಿ ಕುಟುಂಬಕ್ಕೆ ಸೇರಿದ ಲಲ್ಲು, ಆ ಸಮಯದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರದ ಕಾರಣ ದೆಹಲಿಗೆ ತೆರಳಿ ನೋಯ್ಡಾದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ತನ್ನ ಕೆಲಸದ ಭಾಗವಾಗಿ, ಕಬ್ಬಿಣದ ಸರಳುಗಳಂತಹ ಭಾರವಾದ ವಸ್ತುಗಳನ್ನು ಎತ್ತುವಲ್ಲಿ ಅವನು ಆಗಾಗ್ಗೆ ಕಾರ್ಮಿಕರಿಗೆ ಸಹಾಯ ಮಾಡಬೇಕಾಗಿತ್ತು ಎಂದು ತಮ್ಮ ಹಿಂದಿನ ಜೀವನವನ್ನು ಅವರು ನೆನಪಿಸಿಕೊಳ್ಳುತ್ತಾರೆ.

ಎಂಟು ತಿಂಗಳು ಕೆಲಸದಲ್ಲಿ ಕಳೆದ ನಂತರ ಲಲ್ಲು ಮನೆಗೆ ಮರಳಿದರು. ಆದರೆ, ಈ ಬಾರಿ ಅವರ ತಮ್ಕುಹಿ ರಾಜ್ ಕ್ಷೇತ್ರದ ಗ್ರಾಮಸ್ಥರು ಅವರನ್ನು ಮತ್ತೆ ನೋಯ್ಡಾಕ್ಕೆ ಹೋಗದಂತೆ ತಡೆದು ಮತ್ತೆ ರಾಜಕೀಯ ಪ್ರವೇಶಿಸಲು ಒತ್ತಾಯಿಸಿದ್ದರಂತೆ.

ಆಗ ಲಲ್ಲು ಮತ್ತೆ ತಮಕುಹಿ ರಾಜ್‌ನ ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳನ್ನು ಮೇಲೆತ್ತಲು ಪ್ರಾರಂಭಿಸಿದರು. ಅವರು ಹಲವಾರು ಆಂದೋಲನಗಳು ಮತ್ತು ಪ್ರತಿಭಟನೆಗಳನ್ನು ನಡೆಸಿದರು ಮತ್ತು ಅದಕ್ಕಾಗಿ ಜೈಲುವಾಸ ಕೂಡ ಅನುಭವಿಸಿದ್ದಾರೆ.

2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತು. ಅಂತಿಮವಾಗಿ ಅವರು ಬಿಜೆಪಿ ಅಭ್ಯರ್ಥಿಯನ್ನು 5,000 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾದರು. ನಂತರ ಅವರು 2017 ರಲ್ಲಿ ಮತ್ತೆ ಚುನಾಯಿತರಾದರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಮುನ್ನಡೆಸಲು ಆಯ್ಕೆಯಾದರು.

ಗುಜರಾತ್ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಮಿತಿಗಳಿಗೆ ನೇಮಕಾತಿಯೊಂದಿಗೆ ಅವರ ಪ್ರಾಮುಖ್ಯತೆ ಮುಂದುವರೆಯಿತು.

ಈ ವರ್ಷದ ಜೂನ್‌ನಲ್ಲಿ, ಸಾರ್ವತ್ರಿಕ ಚುನಾವಣೆಯ ಒಂದು ತಿಂಗಳ ನಂತರ, ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಅವರ ಖಾತೆಯನ್ನು ‘ಅನುಸರಿಸಿದಾಗ’ ಪಕ್ಷದಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅವರು ಗಮನಿಸಿದ್ದರು. ಮರುದಿನವೇ ಅವರಿಗೆ ಪಕ್ಷದ ಉತ್ತರ ಪ್ರದೇಶ ಪೂರ್ವ ಘಟಕದ ಉಸ್ತುವಾರಿ ವಹಿಸಲಾಯಿತು. ಈಗ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಕಲಹಗಳು ಇನ್ನೂ ಪಕ್ಷವನ್ನು ಪೀಡಿಸುತ್ತಿರುವುದರಿಂದ, ಹೊಸ ಜವಾಬ್ದಾರಿಗೆ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಹೈಕಮಾಂಡ್ ತನ್ನಲ್ಲಿ ವ್ಯಕ್ತಪಡಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಲಲ್ಲು ಹೇಳಿದ್ದಾರೆ.

ಮಾಹಿತಿ ಕೃಪೆ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...