Homeಮುಖಪುಟಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ...

ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷನಾದ ಬಗೆ ಇಲ್ಲಿದೆ…

ತಮಕುಹಿ ರಾಜ್ ಕ್ಷೇತ್ರದಿಂದ 2 ಬಾರಿ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಸಜ್ಜಾಗಿದ್ದಾರೆ.

- Advertisement -
- Advertisement -

ಸುಮಾರು ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷವು ಸುಮಾರು ಆರು ನಾಯಕರ ಸಣ್ಣ ಗುಂಪನ್ನು ಉತ್ತರಪ್ರದೇಶದಲ್ಲಿ ಸಂಘಟನೆಯನ್ನು ಪುನರುಜ್ಜೀವನಗೊಳಿಸಲು ಮತ್ತು ತನ್ನ ಚುನಾವಣಾ ಭವಿಷ್ಯವನ್ನು ಸುಧಾರಿಸಲು ಅವಲಂಬಿಸಿತ್ತು. ಆದರೆ ಹಿರಿಯ ನಾಯಕರಾದ ಜಿತೇನ್ ಪ್ರಸಾದ್, ಸಂಜಯ್ ಸಿಂಗ್, ಶ್ರೀಪ್ರಕಾಶ್ ಜೈಸ್ವಾಲ್, ನಿರ್ಮಲ್ ಖತ್ರಿ, ಸಲ್ಮಾನ್ ಖುರ್ಷಿದ್ ಮತ್ತು ರಾಜ್ ಬಬ್ಬರ್ ಅದರಲ್ಲಿ ವಿಫಲರಾಗಿದ್ದಾರೆ. ಏಪ್ರಿಲ್‌ ಮೇ ನಲ್ಲಿ ನಡೆದ  ಲೋಕಸಭಾ ಚುನಾವಣೆಯಲ್ಲಿ, ಪಕ್ಷವು ರಾಜ್ಯದಲ್ಲಿ ಸಂಪೂರ್ಣ ಸೋಲನ್ನು ಅನುಭವಿಸಿತು. ಅಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ತಮ್ಮ ಈ ವಿನಾಶಕಾರಿ ಪ್ರದರ್ಶನದ ನಂತರ ಈಗ ಕಾಂಗ್ರೆಸ್ ಪಕ್ಷವು ಈ ‘ಗಣ್ಯ’ ಗುಂಪನ್ನು ಮೀರಿ ಹೆಚ್ಚು ಬೇರೂರಿರುವ, ಬಡವರ ಪರವಾದ ನಾಯಕನನ್ನು ಹುಡುಕುತ್ತಿತ್ತು. ತಮಕುಹಿ ರಾಜ್ ಕ್ಷೇತ್ರದ ಶಾಸಕರಾದ ’ಅಜಯ್ ಕುಮಾರ್ ಲಲ್ಲು’ ಅವರನ್ನು ಈಗ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತನ್ನ ಹುಡುಕಾಟಕ್ಕೆ ತೆರೆಎಳೆದಿದೆ.

ಪ್ರಧಾನ ಕಾರ್ಯದರ್ಶಿ (ಉತ್ತರಪ್ರದೇಶದ ಪೂರ್ವ ಉಸ್ತುವಾರಿ) ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸಹಯೋಗದೊಂದಿಗೆ ಲಲ್ಲು ಈಗ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಹೊಸ ಸಾಂಸ್ಥಿಕ ನೆಲೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಲಲ್ಲು ಅವರ ನೇಮಕದಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ತನ್ನ ಪಾಠಗಳನ್ನು ಕಲಿತುಕೊಂಡಿದೆ ಮತ್ತು ಸಂಘಟನೆಯನ್ನು ಪುನರ್ನಿರ್ಮಾಣ ಮಾಡುವ ಜವಾಬ್ದಾರಿಯನ್ನು ತಳಮಟ್ಟದ ಹಿಡಿತ ಹೊಂದಿರುವ ನಾಯಕನಿಗೆ ನೀಡಿದೆ ಎಂದು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರು ಸಂತೋಷಪಟ್ಟಿದ್ದಾರೆ. ಈ ನಿರ್ಧಾರವು ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಲು ಅಪಾರ ಸಹಾಯ ಮಾಡುತ್ತದೆ ಎಂದು ಹಲವಾರು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಲಲ್ಲು ಅವರ ಆರಂಭಿಕ ಹೋರಾಟ
ಕುಶಿನಗರ ಜಿಲ್ಲೆಯ ತಮ್ಕುಹಿ ರಾಜ್‌ನ 40 ವರ್ಷದ ಶಾಸಕ ಲಲ್ಲು ಅವರು 2001 ರಲ್ಲಿ ಕುಶಿನಗರದ ಕಿಶನ್ ಪಿಜಿ ಕಾಲೇಜಿನಿಂದ ಪೊಲಿಟಿಕಲ್‌ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಕ್ರಿಯ ರಾಜಕೀಯದಲ್ಲಿದ್ದಾರೆ.

ಕಾಲೇಜು ಸಮಯದಲ್ಲಿ, ಅವರು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಆದರೆ ಎರಡನೇ ಪ್ರಯತ್ನದಲ್ಲಿ ಮಾತ್ರ ಯಶಸ್ವಿಯಾದರು. ಇದನ್ನು ಅನುಸರಿಸಿ, ಅವರು ಸಾಮಾಜಿಕ ಚಳವಳಿಗಳೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಆಂದೋಲನಗಳು ಮತ್ತು ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು.

2007 ರಲ್ಲಿ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ ಅವರು ಯಾವುದೇ ಪಕ್ಷವು ಟಿಕೆಟ್ ನೀಡಲು ಸಿದ್ಧರಿಲ್ಲದ ಕಾರಣ, ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಗ ಅವರು ಠೇವಣಿಯನ್ನು ಸಹ ಕಳೆದುಕೊಂಡಿದ್ದರು.

ಕೃಷಿ ಕುಟುಂಬಕ್ಕೆ ಸೇರಿದ ಲಲ್ಲು, ಆ ಸಮಯದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳು ಉತ್ತಮವಾಗಿರದ ಕಾರಣ ದೆಹಲಿಗೆ ತೆರಳಿ ನೋಯ್ಡಾದಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು. ತನ್ನ ಕೆಲಸದ ಭಾಗವಾಗಿ, ಕಬ್ಬಿಣದ ಸರಳುಗಳಂತಹ ಭಾರವಾದ ವಸ್ತುಗಳನ್ನು ಎತ್ತುವಲ್ಲಿ ಅವನು ಆಗಾಗ್ಗೆ ಕಾರ್ಮಿಕರಿಗೆ ಸಹಾಯ ಮಾಡಬೇಕಾಗಿತ್ತು ಎಂದು ತಮ್ಮ ಹಿಂದಿನ ಜೀವನವನ್ನು ಅವರು ನೆನಪಿಸಿಕೊಳ್ಳುತ್ತಾರೆ.

ಎಂಟು ತಿಂಗಳು ಕೆಲಸದಲ್ಲಿ ಕಳೆದ ನಂತರ ಲಲ್ಲು ಮನೆಗೆ ಮರಳಿದರು. ಆದರೆ, ಈ ಬಾರಿ ಅವರ ತಮ್ಕುಹಿ ರಾಜ್ ಕ್ಷೇತ್ರದ ಗ್ರಾಮಸ್ಥರು ಅವರನ್ನು ಮತ್ತೆ ನೋಯ್ಡಾಕ್ಕೆ ಹೋಗದಂತೆ ತಡೆದು ಮತ್ತೆ ರಾಜಕೀಯ ಪ್ರವೇಶಿಸಲು ಒತ್ತಾಯಿಸಿದ್ದರಂತೆ.

ಆಗ ಲಲ್ಲು ಮತ್ತೆ ತಮಕುಹಿ ರಾಜ್‌ನ ಸಾಮಾನ್ಯ ಜನರಿಗೆ ಸಂಬಂಧಿಸಿದ ವಿಷಯಗಳನ್ನು ಮೇಲೆತ್ತಲು ಪ್ರಾರಂಭಿಸಿದರು. ಅವರು ಹಲವಾರು ಆಂದೋಲನಗಳು ಮತ್ತು ಪ್ರತಿಭಟನೆಗಳನ್ನು ನಡೆಸಿದರು ಮತ್ತು ಅದಕ್ಕಾಗಿ ಜೈಲುವಾಸ ಕೂಡ ಅನುಭವಿಸಿದ್ದಾರೆ.

2012 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿತು. ಅಂತಿಮವಾಗಿ ಅವರು ಬಿಜೆಪಿ ಅಭ್ಯರ್ಥಿಯನ್ನು 5,000 ಮತಗಳ ಅಂತರದಿಂದ ಸೋಲಿಸುವಲ್ಲಿ ಯಶಸ್ವಿಯಾದರು. ನಂತರ ಅವರು 2017 ರಲ್ಲಿ ಮತ್ತೆ ಚುನಾಯಿತರಾದರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷವನ್ನು ಮುನ್ನಡೆಸಲು ಆಯ್ಕೆಯಾದರು.

ಗುಜರಾತ್ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಸಮಿತಿಗಳಿಗೆ ನೇಮಕಾತಿಯೊಂದಿಗೆ ಅವರ ಪ್ರಾಮುಖ್ಯತೆ ಮುಂದುವರೆಯಿತು.

ಈ ವರ್ಷದ ಜೂನ್‌ನಲ್ಲಿ, ಸಾರ್ವತ್ರಿಕ ಚುನಾವಣೆಯ ಒಂದು ತಿಂಗಳ ನಂತರ, ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಅವರ ಖಾತೆಯನ್ನು ‘ಅನುಸರಿಸಿದಾಗ’ ಪಕ್ಷದಲ್ಲಿ ತಮ್ಮ ಪ್ರಾಮುಖ್ಯತೆಯನ್ನು ಅವರು ಗಮನಿಸಿದ್ದರು. ಮರುದಿನವೇ ಅವರಿಗೆ ಪಕ್ಷದ ಉತ್ತರ ಪ್ರದೇಶ ಪೂರ್ವ ಘಟಕದ ಉಸ್ತುವಾರಿ ವಹಿಸಲಾಯಿತು. ಈಗ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಕಲಹಗಳು ಇನ್ನೂ ಪಕ್ಷವನ್ನು ಪೀಡಿಸುತ್ತಿರುವುದರಿಂದ, ಹೊಸ ಜವಾಬ್ದಾರಿಗೆ ತಾನು ಸಂಪೂರ್ಣವಾಗಿ ಸಿದ್ಧನಾಗಿದ್ದೇನೆ ಮತ್ತು ಹೈಕಮಾಂಡ್ ತನ್ನಲ್ಲಿ ವ್ಯಕ್ತಪಡಿಸಿದ ನಂಬಿಕೆಯನ್ನು ಉಳಿಸಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಲಲ್ಲು ಹೇಳಿದ್ದಾರೆ.

ಮಾಹಿತಿ ಕೃಪೆ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...