Homeಮುಖಪುಟಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ವಾಸಿಸುತ್ತಿರುವ ಒಬಿಸಿ (ಇತರ ಹಿಂದುಳಿದ ವರ್ಗ) ಜನರ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿಯನ್ನು ನಡೆಸಲಿದೆ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

”ನಾವು ಎಲ್ಲರ ಪಾಲ್ಗೊಳ್ಳುವಿಕೆಯತನ್ನು ಬಯಸುತ್ತೇವೆ. ಇದು ಎಲ್ಲರ ಭಾರತವೇ ಹೊರತು ಕೆಲವೇ ಕೈಗಾರಿಕೋದ್ಯಮಿಗಳದ್ದಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ, ನಾವು ಜಾತಿ ಗಣತಿಯನ್ನು ನಡೆಸುತ್ತೇವೆ ಮತ್ತು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಸಾಮಾನ್ಯರು ಎಷ್ಟು ಎಂಬುದು ಎಲ್ಲರಿಗೂ ತಿಳಿಸುತ್ತೇವೆ. ಆದರೆ ಈಗೀನ ಸರ್ಕಾರ ಗಮನವನ್ನು ಬೇರೆಡೆಗೆ ತಿರುಗಿಸಲು ದ್ವೇಷ ಮತ್ತು ಹಿಂಸೆಯನ್ನು ಹರಡುತ್ತದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶಾಜಾಪುರದಲ್ಲಿ ಕಾಂಗ್ರೆಸ್‌ನ ಜನ ಆಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ”ಜಾತಿ ಗಣತಿಯು ಭಾರತದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ… ಒಬಿಸಿ ಜನಸಂಖ್ಯೆ ಎಷ್ಟಿದೆ? ಅವರ ಭಾಗವಹಿಸುವಿಕೆ ಹೇಗಿರಬೇಕು? ನಾನು ಜಾತಿ ಗಣತಿ ಪ್ರಶ್ನೆ ಎತ್ತಿದಾಗ ಬಿಜೆಪಿಯವರಿಗೆ ನಡುಕ ಶುರುವಾಯಿತು. ನರೇಂದ್ರ ಮೋದಿ ಸಂಸತ್ತಿನಿಂದ ಓಡಿಹೋದರು. ಅಮಿತ್ ಶಾ (ಕೇಂದ್ರ ಗೃಹ ಸಚಿವರು) ಹಿಂದೂ-ಮುಸ್ಲಿಂ ಎಂದು ಇಬ್ಬಾಗ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವು ಜಾತಿ ಗಣತಿ ಮೊದಲು ಮಾಡುತ್ತೇವೆ” ಎಂದು ಹೇಳಿದರು.

ಒಬಿಸಿ ಅಧಿಕಾರಿಗಳನ್ನು ಉನ್ನತ ಅಧಿಕಾರಿಗಳಾಗಿ ನೇಮಿಸುವ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್, ”ಭಾರತದಲ್ಲಿ ಒಟ್ಟು 90 ಅಧಿಕಾರಿಗಳು (ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿ) ನಡೆಸುತ್ತಿದ್ದಾರೆ. ಹಣ ಎಲ್ಲಿಗೆ ಹೋಗಬೇಕೆಂದು ಅವರು ನಿರ್ಧರಿಸುತ್ತಾರೆ. ಆದರೆ, ಇವರಲ್ಲಿ ಒಬಿಸಿಗೆ ಸೇರಿದವರು ಕೇವಲ ಮೂವರು ಅಧಿಕಾರಿಗಳು ಮಾತ್ರ. ಭಾರತದ ₹45,00,000 ಕೋಟಿಯ ಸಂಪೂರ್ಣ ಬಜೆಟ್‌ನಲ್ಲಿ OBC ಅಧಿಕಾರಿಗಳು ಕೇವಲ 5% ಭಾಗವಹಿಸುವಿಕೆಯನ್ನು ಹೊಂದಿದ್ದಾರೆ. ಆದರೆ, ಭಾರತದಲ್ಲಿ OBC ಜನಸಂಖ್ಯೆಯು 50% ಆಗಿದೆ” ಎಂದು ವಿವರಿಸಿದರು.

ಇದೇ ವೇಳೆ ರಾಹುಲ್ ಗಾಂಧಿ ಅವರು ಅದಾನಿ ಮತ್ತು ಮಹಿಳಾ ಮೀಸಲಾತಿಯ ವಿಷಯವನ್ನು ಪ್ರಸ್ತಾಪಿಸಿದರು, ”ಸರ್ಕಾರವು ಜನರಿಗಾಗಿ ಕೆಲಸ ಮಾಡಬೇಕು, ಯಾವುದೇ ಸಂಸ್ಥೆ ಮತ್ತು ಒಂದಿಬ್ಬರು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಲ್ಲ. ನಾನು ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದೆ. ನಾನು ಭಾಷಣ ಮಾಡಿದ ಕೂಡಲೇ, ಕೇಂದ್ರ ಬಿಜೆಪಿಯು ಅದಾನಿಯನ್ನು ರಕ್ಷಿಸಲು, ನನ್ನ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿತು. ವಿಮಾನ ನಿಲ್ದಾಣಗಳು ಮತ್ತು ಮೂಲಸೌಕರ್ಯದಿಂದ ಭತ್ತದ ಸಿಲೋಸ್‌ಗಳವರೆಗೆ ಅದಾನಿ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ. ಅವರು ಪ್ರತಿದಿನ ರೈತರು ಮತ್ತು ಜನರ ಜೇಬಿನಿಂದ ಹಣವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಮಹಿಳಾ ಮೀಸಲಾತಿ ಕುರಿತು ಮಾತನಾಡಿದ ಅವರು, ”ಭಾರತಕ್ಕೆ ಇದು ಮುಖ್ಯವಾಗಿದೆ ಮತ್ತು ಕಾಂಗ್ರೆಸ್ ಪಕ್ಷವು ತನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತದೆ. ಆದರೆ ಅನುಷ್ಠಾನಕ್ಕೆ ಮುನ್ನ ಡಿನೋಟಿಫಿಕೇಶನ್ ಮತ್ತು ಸಮೀಕ್ಷೆ ನಡೆಸಲಾಗುವುದು ಎಂದು ಹೇಳುವ ಎರಡು ಸಾಲುಗಳನ್ನು ತೆಗೆದುಹಾಕಲು ನಾವು ಕೇಳಿದ್ದೇವೆ. ಇದು ಅನುಷ್ಠಾನವನ್ನು 10 ವರ್ಷಗಳ ಕಾಲ ವಿಳಂಬಗೊಳಿಸುತ್ತದೆ ಆದರೆ ಮೀಸಲಾತಿಯನ್ನು ವಿಳಂಬಗೊಳಿಸಲು ಅವರು ಇದನ್ನು ಮಾಡಿದ್ದಾರೆ” ಎಂದು ರಾಹುಲ್ ಹೇಳಿದರು.

ಭಾರತ್ ಜೋಡೋ ಯಾತ್ರೆಯ ಅನುಭವವನ್ನು ಹಂಚಿಕೊಂಡ ರಾಹುಲ್ ಗಾಂಧಿ, ”ಭಾರತದಲ್ಲಿ ಮಧ್ಯಪ್ರದೇಶ ಭ್ರಷ್ಟಾಚಾರದ ಕೇಂದ್ರಬಿಂದು ಎಂದು ಜನರು ನನಗೆ ಹೇಳಿದರು. ಮಧ್ಯಾಹ್ನದ ಊಟ, ವಿದ್ಯಾರ್ಥಿಗಳ ಸಮವಸ್ತ್ರ, ಮಹಾಕಾಲ್ ಕಾರಿಡಾರ್‌ನಲ್ಲೂ ಬಿಜೆಪಿ ಹಣ ದೋಚಿದೆ. 1 ಕೋಟಿ ಯುವಕರ ಮೇಲೆ ಪರಿಣಾಮ ಬೀರಿದ ವ್ಯಾಪಂ ಹಗರಣ. ಎಂಬಿಬಿಎಸ್ ಸೀಟುಗಳನ್ನು ಮಾರಾಟ ಮಾಡಲಾಗುತ್ತಿದ್ದು, ಪರೀಕ್ಷೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ” ಎಂದು ಕಿಡಿಕಾರಿದರು.

ಛತ್ತೀಸ್‌ಗಢ, ರಾಜಸ್ಥಾನ, ಕರ್ನಾಟಕ ಮತ್ತು ಹಿಮಾಚಲ ಸರ್ಕಾರಗಳನ್ನು ಹೊಗಳಿದ ರಾಹುಲ್, ”ನಾವು ನಾಲ್ಕು ರಾಜ್ಯಗಳ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಕರ್ನಾಟಕದಲ್ಲಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಛತ್ತೀಸ್ ಗಢದಲ್ಲಿ ರೈತರು ಭತ್ತಕ್ಕೆ ಕ್ವಿಂಟಲ್ ಗೆ 2,500 ರೂ. ರಾಜಸ್ಥಾನದಲ್ಲಿ 15 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸತ್ತಿನಲ್ಲಿಯೂ ಕಾಂಗ್ರೆಸ್ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸಿದೆ ಆದರೆ ಬಿಜೆಪಿಯಿಂದ ನಿಮಗೆ ಮೋಸವಾಗಿದೆ” ಎಂದು ಹೇಳಿದರು.

”ಬಿಜೆಪಿಯ ಚುನಾಯಿತ ಪ್ರತಿನಿಧಿಗಳ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳು ದೇಶದ ಕಾನೂನುಗಳನ್ನು ರೂಪಿಸುತ್ತಿದ್ದಾರೆ” ಎಂದು ರಾಹುಲ್ ಹೇಳಿದರು.

”ಚುನಾಯಿತ ಬಿಜೆಪಿ ಸದಸ್ಯರ ಬದಲಿಗೆ ಆರ್‌ಎಸ್‌ಎಸ್ ಮತ್ತು ಅಧಿಕಾರಶಾಹಿಗಳು ಕಾನೂನುಗಳನ್ನು ರೂಪಿಸುತ್ತಿದ್ದಾರೆ… ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಆರ್‌ಎಸ್‌ಎಸ್ ಸರ್ಕಾರಕ್ಕೆ ಕೆಲಸವನ್ನು ನೀಡಿದೆ” ಎಂದು ಅವರು ಪ್ರತಿಪಾದಿಸಿದರು.

”ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟ, ಒಂದು ಕಡೆ ಕಾಂಗ್ರೆಸ್, ಇನ್ನೊಂದು ಕಡೆ ಆರೆಸ್ಸೆಸ್ ಮತ್ತು ಬಿಜೆಪಿ. ಒಂದು ಕಡೆ ಗಾಂಧೀಜಿ, ಇನ್ನೊಂದು ಕಡೆ ಗೋಡ್ಸೆ. ಒಂದು ಕಡೆ ದ್ವೇಷ, ಹಿಂಸೆ ಮತ್ತು ಅಹಂಕಾರವಿದೆ ಮತ್ತು ಇನ್ನೊಂದು ಬದಿಯಲ್ಲಿ ಪ್ರೀತಿ, ಗೌರವ ಮತ್ತು ಸಹೋದರತ್ವವಿದೆ” ಎಂದರು.

”ಬಿಜೆಪಿಯವರು ಎಲ್ಲಿಗೆ ಹೋದರೂ, ಅಲ್ಲಿ ಅವರು ದ್ವೇಷವನ್ನು ಹರಡುತ್ತಾರೆ. ಅದಕ್ಕಾಗಿಯೇ ಅವರ ವಿರುದ್ಧ ಜನರಲ್ಲಿ ಜನಕ್ರೋಷ್ ಇದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ‘ನಕಲಿ ರಾಷ್ಟ್ರೀಯತೆ’ ಮತ್ತೊಮ್ಮೆ ಗೋಚರಿಸುತ್ತದೆ: ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮಗಳ ಕುರಿತು ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...