Homeಮುಖಪುಟಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ವಾಸಿಸುತ್ತಿರುವ ಒಬಿಸಿ (ಇತರ ಹಿಂದುಳಿದ ವರ್ಗ) ಜನರ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿಯನ್ನು ನಡೆಸಲಿದೆ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

”ನಾವು ಎಲ್ಲರ ಪಾಲ್ಗೊಳ್ಳುವಿಕೆಯತನ್ನು ಬಯಸುತ್ತೇವೆ. ಇದು ಎಲ್ಲರ ಭಾರತವೇ ಹೊರತು ಕೆಲವೇ ಕೈಗಾರಿಕೋದ್ಯಮಿಗಳದ್ದಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ, ನಾವು ಜಾತಿ ಗಣತಿಯನ್ನು ನಡೆಸುತ್ತೇವೆ ಮತ್ತು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಸಾಮಾನ್ಯರು ಎಷ್ಟು ಎಂಬುದು ಎಲ್ಲರಿಗೂ ತಿಳಿಸುತ್ತೇವೆ. ಆದರೆ ಈಗೀನ ಸರ್ಕಾರ ಗಮನವನ್ನು ಬೇರೆಡೆಗೆ ತಿರುಗಿಸಲು ದ್ವೇಷ ಮತ್ತು ಹಿಂಸೆಯನ್ನು ಹರಡುತ್ತದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶಾಜಾಪುರದಲ್ಲಿ ಕಾಂಗ್ರೆಸ್‌ನ ಜನ ಆಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ”ಜಾತಿ ಗಣತಿಯು ಭಾರತದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ… ಒಬಿಸಿ ಜನಸಂಖ್ಯೆ ಎಷ್ಟಿದೆ? ಅವರ ಭಾಗವಹಿಸುವಿಕೆ ಹೇಗಿರಬೇಕು? ನಾನು ಜಾತಿ ಗಣತಿ ಪ್ರಶ್ನೆ ಎತ್ತಿದಾಗ ಬಿಜೆಪಿಯವರಿಗೆ ನಡುಕ ಶುರುವಾಯಿತು. ನರೇಂದ್ರ ಮೋದಿ ಸಂಸತ್ತಿನಿಂದ ಓಡಿಹೋದರು. ಅಮಿತ್ ಶಾ (ಕೇಂದ್ರ ಗೃಹ ಸಚಿವರು) ಹಿಂದೂ-ಮುಸ್ಲಿಂ ಎಂದು ಇಬ್ಬಾಗ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವು ಜಾತಿ ಗಣತಿ ಮೊದಲು ಮಾಡುತ್ತೇವೆ” ಎಂದು ಹೇಳಿದರು.

ಒಬಿಸಿ ಅಧಿಕಾರಿಗಳನ್ನು ಉನ್ನತ ಅಧಿಕಾರಿಗಳಾಗಿ ನೇಮಿಸುವ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್, ”ಭಾರತದಲ್ಲಿ ಒಟ್ಟು 90 ಅಧಿಕಾರಿಗಳು (ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿ) ನಡೆಸುತ್ತಿದ್ದಾರೆ. ಹಣ ಎಲ್ಲಿಗೆ ಹೋಗಬೇಕೆಂದು ಅವರು ನಿರ್ಧರಿಸುತ್ತಾರೆ. ಆದರೆ, ಇವರಲ್ಲಿ ಒಬಿಸಿಗೆ ಸೇರಿದವರು ಕೇವಲ ಮೂವರು ಅಧಿಕಾರಿಗಳು ಮಾತ್ರ. ಭಾರತದ ₹45,00,000 ಕೋಟಿಯ ಸಂಪೂರ್ಣ ಬಜೆಟ್‌ನಲ್ಲಿ OBC ಅಧಿಕಾರಿಗಳು ಕೇವಲ 5% ಭಾಗವಹಿಸುವಿಕೆಯನ್ನು ಹೊಂದಿದ್ದಾರೆ. ಆದರೆ, ಭಾರತದಲ್ಲಿ OBC ಜನಸಂಖ್ಯೆಯು 50% ಆಗಿದೆ” ಎಂದು ವಿವರಿಸಿದರು.

ಇದೇ ವೇಳೆ ರಾಹುಲ್ ಗಾಂಧಿ ಅವರು ಅದಾನಿ ಮತ್ತು ಮಹಿಳಾ ಮೀಸಲಾತಿಯ ವಿಷಯವನ್ನು ಪ್ರಸ್ತಾಪಿಸಿದರು, ”ಸರ್ಕಾರವು ಜನರಿಗಾಗಿ ಕೆಲಸ ಮಾಡಬೇಕು, ಯಾವುದೇ ಸಂಸ್ಥೆ ಮತ್ತು ಒಂದಿಬ್ಬರು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಲ್ಲ. ನಾನು ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದೆ. ನಾನು ಭಾಷಣ ಮಾಡಿದ ಕೂಡಲೇ, ಕೇಂದ್ರ ಬಿಜೆಪಿಯು ಅದಾನಿಯನ್ನು ರಕ್ಷಿಸಲು, ನನ್ನ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿತು. ವಿಮಾನ ನಿಲ್ದಾಣಗಳು ಮತ್ತು ಮೂಲಸೌಕರ್ಯದಿಂದ ಭತ್ತದ ಸಿಲೋಸ್‌ಗಳವರೆಗೆ ಅದಾನಿ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ. ಅವರು ಪ್ರತಿದಿನ ರೈತರು ಮತ್ತು ಜನರ ಜೇಬಿನಿಂದ ಹಣವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಮಹಿಳಾ ಮೀಸಲಾತಿ ಕುರಿತು ಮಾತನಾಡಿದ ಅವರು, ”ಭಾರತಕ್ಕೆ ಇದು ಮುಖ್ಯವಾಗಿದೆ ಮತ್ತು ಕಾಂಗ್ರೆಸ್ ಪಕ್ಷವು ತನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತದೆ. ಆದರೆ ಅನುಷ್ಠಾನಕ್ಕೆ ಮುನ್ನ ಡಿನೋಟಿಫಿಕೇಶನ್ ಮತ್ತು ಸಮೀಕ್ಷೆ ನಡೆಸಲಾಗುವುದು ಎಂದು ಹೇಳುವ ಎರಡು ಸಾಲುಗಳನ್ನು ತೆಗೆದುಹಾಕಲು ನಾವು ಕೇಳಿದ್ದೇವೆ. ಇದು ಅನುಷ್ಠಾನವನ್ನು 10 ವರ್ಷಗಳ ಕಾಲ ವಿಳಂಬಗೊಳಿಸುತ್ತದೆ ಆದರೆ ಮೀಸಲಾತಿಯನ್ನು ವಿಳಂಬಗೊಳಿಸಲು ಅವರು ಇದನ್ನು ಮಾಡಿದ್ದಾರೆ” ಎಂದು ರಾಹುಲ್ ಹೇಳಿದರು.

ಭಾರತ್ ಜೋಡೋ ಯಾತ್ರೆಯ ಅನುಭವವನ್ನು ಹಂಚಿಕೊಂಡ ರಾಹುಲ್ ಗಾಂಧಿ, ”ಭಾರತದಲ್ಲಿ ಮಧ್ಯಪ್ರದೇಶ ಭ್ರಷ್ಟಾಚಾರದ ಕೇಂದ್ರಬಿಂದು ಎಂದು ಜನರು ನನಗೆ ಹೇಳಿದರು. ಮಧ್ಯಾಹ್ನದ ಊಟ, ವಿದ್ಯಾರ್ಥಿಗಳ ಸಮವಸ್ತ್ರ, ಮಹಾಕಾಲ್ ಕಾರಿಡಾರ್‌ನಲ್ಲೂ ಬಿಜೆಪಿ ಹಣ ದೋಚಿದೆ. 1 ಕೋಟಿ ಯುವಕರ ಮೇಲೆ ಪರಿಣಾಮ ಬೀರಿದ ವ್ಯಾಪಂ ಹಗರಣ. ಎಂಬಿಬಿಎಸ್ ಸೀಟುಗಳನ್ನು ಮಾರಾಟ ಮಾಡಲಾಗುತ್ತಿದ್ದು, ಪರೀಕ್ಷೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ” ಎಂದು ಕಿಡಿಕಾರಿದರು.

ಛತ್ತೀಸ್‌ಗಢ, ರಾಜಸ್ಥಾನ, ಕರ್ನಾಟಕ ಮತ್ತು ಹಿಮಾಚಲ ಸರ್ಕಾರಗಳನ್ನು ಹೊಗಳಿದ ರಾಹುಲ್, ”ನಾವು ನಾಲ್ಕು ರಾಜ್ಯಗಳ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಕರ್ನಾಟಕದಲ್ಲಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಛತ್ತೀಸ್ ಗಢದಲ್ಲಿ ರೈತರು ಭತ್ತಕ್ಕೆ ಕ್ವಿಂಟಲ್ ಗೆ 2,500 ರೂ. ರಾಜಸ್ಥಾನದಲ್ಲಿ 15 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸತ್ತಿನಲ್ಲಿಯೂ ಕಾಂಗ್ರೆಸ್ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸಿದೆ ಆದರೆ ಬಿಜೆಪಿಯಿಂದ ನಿಮಗೆ ಮೋಸವಾಗಿದೆ” ಎಂದು ಹೇಳಿದರು.

”ಬಿಜೆಪಿಯ ಚುನಾಯಿತ ಪ್ರತಿನಿಧಿಗಳ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳು ದೇಶದ ಕಾನೂನುಗಳನ್ನು ರೂಪಿಸುತ್ತಿದ್ದಾರೆ” ಎಂದು ರಾಹುಲ್ ಹೇಳಿದರು.

”ಚುನಾಯಿತ ಬಿಜೆಪಿ ಸದಸ್ಯರ ಬದಲಿಗೆ ಆರ್‌ಎಸ್‌ಎಸ್ ಮತ್ತು ಅಧಿಕಾರಶಾಹಿಗಳು ಕಾನೂನುಗಳನ್ನು ರೂಪಿಸುತ್ತಿದ್ದಾರೆ… ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಆರ್‌ಎಸ್‌ಎಸ್ ಸರ್ಕಾರಕ್ಕೆ ಕೆಲಸವನ್ನು ನೀಡಿದೆ” ಎಂದು ಅವರು ಪ್ರತಿಪಾದಿಸಿದರು.

”ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟ, ಒಂದು ಕಡೆ ಕಾಂಗ್ರೆಸ್, ಇನ್ನೊಂದು ಕಡೆ ಆರೆಸ್ಸೆಸ್ ಮತ್ತು ಬಿಜೆಪಿ. ಒಂದು ಕಡೆ ಗಾಂಧೀಜಿ, ಇನ್ನೊಂದು ಕಡೆ ಗೋಡ್ಸೆ. ಒಂದು ಕಡೆ ದ್ವೇಷ, ಹಿಂಸೆ ಮತ್ತು ಅಹಂಕಾರವಿದೆ ಮತ್ತು ಇನ್ನೊಂದು ಬದಿಯಲ್ಲಿ ಪ್ರೀತಿ, ಗೌರವ ಮತ್ತು ಸಹೋದರತ್ವವಿದೆ” ಎಂದರು.

”ಬಿಜೆಪಿಯವರು ಎಲ್ಲಿಗೆ ಹೋದರೂ, ಅಲ್ಲಿ ಅವರು ದ್ವೇಷವನ್ನು ಹರಡುತ್ತಾರೆ. ಅದಕ್ಕಾಗಿಯೇ ಅವರ ವಿರುದ್ಧ ಜನರಲ್ಲಿ ಜನಕ್ರೋಷ್ ಇದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ‘ನಕಲಿ ರಾಷ್ಟ್ರೀಯತೆ’ ಮತ್ತೊಮ್ಮೆ ಗೋಚರಿಸುತ್ತದೆ: ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮಗಳ ಕುರಿತು ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...