Homeಮುಖಪುಟಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ದೇಶದಲ್ಲಿ ವಾಸಿಸುತ್ತಿರುವ ಒಬಿಸಿ (ಇತರ ಹಿಂದುಳಿದ ವರ್ಗ) ಜನರ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿಯನ್ನು ನಡೆಸಲಿದೆ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

”ನಾವು ಎಲ್ಲರ ಪಾಲ್ಗೊಳ್ಳುವಿಕೆಯತನ್ನು ಬಯಸುತ್ತೇವೆ. ಇದು ಎಲ್ಲರ ಭಾರತವೇ ಹೊರತು ಕೆಲವೇ ಕೈಗಾರಿಕೋದ್ಯಮಿಗಳದ್ದಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ, ನಾವು ಜಾತಿ ಗಣತಿಯನ್ನು ನಡೆಸುತ್ತೇವೆ ಮತ್ತು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಸಾಮಾನ್ಯರು ಎಷ್ಟು ಎಂಬುದು ಎಲ್ಲರಿಗೂ ತಿಳಿಸುತ್ತೇವೆ. ಆದರೆ ಈಗೀನ ಸರ್ಕಾರ ಗಮನವನ್ನು ಬೇರೆಡೆಗೆ ತಿರುಗಿಸಲು ದ್ವೇಷ ಮತ್ತು ಹಿಂಸೆಯನ್ನು ಹರಡುತ್ತದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶಾಜಾಪುರದಲ್ಲಿ ಕಾಂಗ್ರೆಸ್‌ನ ಜನ ಆಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ”ಜಾತಿ ಗಣತಿಯು ಭಾರತದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ… ಒಬಿಸಿ ಜನಸಂಖ್ಯೆ ಎಷ್ಟಿದೆ? ಅವರ ಭಾಗವಹಿಸುವಿಕೆ ಹೇಗಿರಬೇಕು? ನಾನು ಜಾತಿ ಗಣತಿ ಪ್ರಶ್ನೆ ಎತ್ತಿದಾಗ ಬಿಜೆಪಿಯವರಿಗೆ ನಡುಕ ಶುರುವಾಯಿತು. ನರೇಂದ್ರ ಮೋದಿ ಸಂಸತ್ತಿನಿಂದ ಓಡಿಹೋದರು. ಅಮಿತ್ ಶಾ (ಕೇಂದ್ರ ಗೃಹ ಸಚಿವರು) ಹಿಂದೂ-ಮುಸ್ಲಿಂ ಎಂದು ಇಬ್ಬಾಗ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವು ಜಾತಿ ಗಣತಿ ಮೊದಲು ಮಾಡುತ್ತೇವೆ” ಎಂದು ಹೇಳಿದರು.

ಒಬಿಸಿ ಅಧಿಕಾರಿಗಳನ್ನು ಉನ್ನತ ಅಧಿಕಾರಿಗಳಾಗಿ ನೇಮಿಸುವ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್, ”ಭಾರತದಲ್ಲಿ ಒಟ್ಟು 90 ಅಧಿಕಾರಿಗಳು (ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಭಾರತ ಸರ್ಕಾರದ ಕಾರ್ಯದರ್ಶಿ) ನಡೆಸುತ್ತಿದ್ದಾರೆ. ಹಣ ಎಲ್ಲಿಗೆ ಹೋಗಬೇಕೆಂದು ಅವರು ನಿರ್ಧರಿಸುತ್ತಾರೆ. ಆದರೆ, ಇವರಲ್ಲಿ ಒಬಿಸಿಗೆ ಸೇರಿದವರು ಕೇವಲ ಮೂವರು ಅಧಿಕಾರಿಗಳು ಮಾತ್ರ. ಭಾರತದ ₹45,00,000 ಕೋಟಿಯ ಸಂಪೂರ್ಣ ಬಜೆಟ್‌ನಲ್ಲಿ OBC ಅಧಿಕಾರಿಗಳು ಕೇವಲ 5% ಭಾಗವಹಿಸುವಿಕೆಯನ್ನು ಹೊಂದಿದ್ದಾರೆ. ಆದರೆ, ಭಾರತದಲ್ಲಿ OBC ಜನಸಂಖ್ಯೆಯು 50% ಆಗಿದೆ” ಎಂದು ವಿವರಿಸಿದರು.

ಇದೇ ವೇಳೆ ರಾಹುಲ್ ಗಾಂಧಿ ಅವರು ಅದಾನಿ ಮತ್ತು ಮಹಿಳಾ ಮೀಸಲಾತಿಯ ವಿಷಯವನ್ನು ಪ್ರಸ್ತಾಪಿಸಿದರು, ”ಸರ್ಕಾರವು ಜನರಿಗಾಗಿ ಕೆಲಸ ಮಾಡಬೇಕು, ಯಾವುದೇ ಸಂಸ್ಥೆ ಮತ್ತು ಒಂದಿಬ್ಬರು ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಲ್ಲ. ನಾನು ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದೆ. ನಾನು ಭಾಷಣ ಮಾಡಿದ ಕೂಡಲೇ, ಕೇಂದ್ರ ಬಿಜೆಪಿಯು ಅದಾನಿಯನ್ನು ರಕ್ಷಿಸಲು, ನನ್ನ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಿತು. ವಿಮಾನ ನಿಲ್ದಾಣಗಳು ಮತ್ತು ಮೂಲಸೌಕರ್ಯದಿಂದ ಭತ್ತದ ಸಿಲೋಸ್‌ಗಳವರೆಗೆ ಅದಾನಿ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ. ಅವರು ಪ್ರತಿದಿನ ರೈತರು ಮತ್ತು ಜನರ ಜೇಬಿನಿಂದ ಹಣವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಮಹಿಳಾ ಮೀಸಲಾತಿ ಕುರಿತು ಮಾತನಾಡಿದ ಅವರು, ”ಭಾರತಕ್ಕೆ ಇದು ಮುಖ್ಯವಾಗಿದೆ ಮತ್ತು ಕಾಂಗ್ರೆಸ್ ಪಕ್ಷವು ತನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತದೆ. ಆದರೆ ಅನುಷ್ಠಾನಕ್ಕೆ ಮುನ್ನ ಡಿನೋಟಿಫಿಕೇಶನ್ ಮತ್ತು ಸಮೀಕ್ಷೆ ನಡೆಸಲಾಗುವುದು ಎಂದು ಹೇಳುವ ಎರಡು ಸಾಲುಗಳನ್ನು ತೆಗೆದುಹಾಕಲು ನಾವು ಕೇಳಿದ್ದೇವೆ. ಇದು ಅನುಷ್ಠಾನವನ್ನು 10 ವರ್ಷಗಳ ಕಾಲ ವಿಳಂಬಗೊಳಿಸುತ್ತದೆ ಆದರೆ ಮೀಸಲಾತಿಯನ್ನು ವಿಳಂಬಗೊಳಿಸಲು ಅವರು ಇದನ್ನು ಮಾಡಿದ್ದಾರೆ” ಎಂದು ರಾಹುಲ್ ಹೇಳಿದರು.

ಭಾರತ್ ಜೋಡೋ ಯಾತ್ರೆಯ ಅನುಭವವನ್ನು ಹಂಚಿಕೊಂಡ ರಾಹುಲ್ ಗಾಂಧಿ, ”ಭಾರತದಲ್ಲಿ ಮಧ್ಯಪ್ರದೇಶ ಭ್ರಷ್ಟಾಚಾರದ ಕೇಂದ್ರಬಿಂದು ಎಂದು ಜನರು ನನಗೆ ಹೇಳಿದರು. ಮಧ್ಯಾಹ್ನದ ಊಟ, ವಿದ್ಯಾರ್ಥಿಗಳ ಸಮವಸ್ತ್ರ, ಮಹಾಕಾಲ್ ಕಾರಿಡಾರ್‌ನಲ್ಲೂ ಬಿಜೆಪಿ ಹಣ ದೋಚಿದೆ. 1 ಕೋಟಿ ಯುವಕರ ಮೇಲೆ ಪರಿಣಾಮ ಬೀರಿದ ವ್ಯಾಪಂ ಹಗರಣ. ಎಂಬಿಬಿಎಸ್ ಸೀಟುಗಳನ್ನು ಮಾರಾಟ ಮಾಡಲಾಗುತ್ತಿದ್ದು, ಪರೀಕ್ಷೆ ಪತ್ರಿಕೆಗಳು ಸೋರಿಕೆಯಾಗುತ್ತಿವೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ” ಎಂದು ಕಿಡಿಕಾರಿದರು.

ಛತ್ತೀಸ್‌ಗಢ, ರಾಜಸ್ಥಾನ, ಕರ್ನಾಟಕ ಮತ್ತು ಹಿಮಾಚಲ ಸರ್ಕಾರಗಳನ್ನು ಹೊಗಳಿದ ರಾಹುಲ್, ”ನಾವು ನಾಲ್ಕು ರಾಜ್ಯಗಳ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಕರ್ನಾಟಕದಲ್ಲಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಛತ್ತೀಸ್ ಗಢದಲ್ಲಿ ರೈತರು ಭತ್ತಕ್ಕೆ ಕ್ವಿಂಟಲ್ ಗೆ 2,500 ರೂ. ರಾಜಸ್ಥಾನದಲ್ಲಿ 15 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸತ್ತಿನಲ್ಲಿಯೂ ಕಾಂಗ್ರೆಸ್ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸಿದೆ ಆದರೆ ಬಿಜೆಪಿಯಿಂದ ನಿಮಗೆ ಮೋಸವಾಗಿದೆ” ಎಂದು ಹೇಳಿದರು.

”ಬಿಜೆಪಿಯ ಚುನಾಯಿತ ಪ್ರತಿನಿಧಿಗಳ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳು ದೇಶದ ಕಾನೂನುಗಳನ್ನು ರೂಪಿಸುತ್ತಿದ್ದಾರೆ” ಎಂದು ರಾಹುಲ್ ಹೇಳಿದರು.

”ಚುನಾಯಿತ ಬಿಜೆಪಿ ಸದಸ್ಯರ ಬದಲಿಗೆ ಆರ್‌ಎಸ್‌ಎಸ್ ಮತ್ತು ಅಧಿಕಾರಶಾಹಿಗಳು ಕಾನೂನುಗಳನ್ನು ರೂಪಿಸುತ್ತಿದ್ದಾರೆ… ಪ್ರಮುಖ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಆರ್‌ಎಸ್‌ಎಸ್ ಸರ್ಕಾರಕ್ಕೆ ಕೆಲಸವನ್ನು ನೀಡಿದೆ” ಎಂದು ಅವರು ಪ್ರತಿಪಾದಿಸಿದರು.

”ಇದು ಎರಡು ಸಿದ್ಧಾಂತಗಳ ನಡುವಿನ ಹೋರಾಟ, ಒಂದು ಕಡೆ ಕಾಂಗ್ರೆಸ್, ಇನ್ನೊಂದು ಕಡೆ ಆರೆಸ್ಸೆಸ್ ಮತ್ತು ಬಿಜೆಪಿ. ಒಂದು ಕಡೆ ಗಾಂಧೀಜಿ, ಇನ್ನೊಂದು ಕಡೆ ಗೋಡ್ಸೆ. ಒಂದು ಕಡೆ ದ್ವೇಷ, ಹಿಂಸೆ ಮತ್ತು ಅಹಂಕಾರವಿದೆ ಮತ್ತು ಇನ್ನೊಂದು ಬದಿಯಲ್ಲಿ ಪ್ರೀತಿ, ಗೌರವ ಮತ್ತು ಸಹೋದರತ್ವವಿದೆ” ಎಂದರು.

”ಬಿಜೆಪಿಯವರು ಎಲ್ಲಿಗೆ ಹೋದರೂ, ಅಲ್ಲಿ ಅವರು ದ್ವೇಷವನ್ನು ಹರಡುತ್ತಾರೆ. ಅದಕ್ಕಾಗಿಯೇ ಅವರ ವಿರುದ್ಧ ಜನರಲ್ಲಿ ಜನಕ್ರೋಷ್ ಇದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿಯ ‘ನಕಲಿ ರಾಷ್ಟ್ರೀಯತೆ’ ಮತ್ತೊಮ್ಮೆ ಗೋಚರಿಸುತ್ತದೆ: ಸಶಸ್ತ್ರ ಪಡೆಗಳಿಗೆ ಅಂಗವೈಕಲ್ಯ ಪಿಂಚಣಿ ನಿಯಮಗಳ ಕುರಿತು ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...