Homeಮುಖಪುಟಅಯೋಧ್ಯೆಯಲ್ಲಿ ಸೋಲಿಸಿದಂತೆ ಗುಜರಾತ್‌ನಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ: ರಾಹುಲ್ ಗಾಂಧಿ

ಅಯೋಧ್ಯೆಯಲ್ಲಿ ಸೋಲಿಸಿದಂತೆ ಗುಜರಾತ್‌ನಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಸೋಲಿಸಿದಂತೆ ನಾವು ಗುಜರಾತ್‌ನಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು.

“ಅವರು (ಬಿಜೆಪಿ) ನಮಗೆ ಬೆದರಿಕೆ ಹಾಕಿ, ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲು ಹಾಕಿದ್ದಾರೆ. ನಮ್ಮ ಕಚೇರಿಗೆ ಹಾನಿ ಮಾಡಿದಂತೆ ನಾವು ಅವರ ಸರ್ಕಾರವನ್ನು ಕಿತ್ತೊಗೆಯಲಿದ್ದೇವೆ. ಬರೆದಿಟ್ಟುಕೊಳ್ಳಿ, ಅಯೋಧ್ಯೆಯಲ್ಲಿ ಸೋಲಿಸಿದಂತೆ ಗುಜರಾತ್‌ನಲ್ಲಿ ಬಿಜೆಪಿ ಹಾಗೂ ಮೋದಿಯನ್ನು ನಾವು ಸೋಲಿಸಲಿದ್ದೇವೆ. ಗುಜರಾತ್‌ನಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಹೊಸ ಆರಂಭ ಮಾಡಲಿದೆ” ಎಂದಿದ್ದಾರೆ.

ಲೋಕಸಭೆಯಲ್ಲಿ ಮಾತನಾಡುವ ವೇಳೆ ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಅಹಮದಾಬಾದ್‌ನ ಕಾಂಗ್ರೆಸ್‌ ಕಚೇರಿ ‘ರಾಜೀವ್ ಗಾಂಧಿ’ ಭವನದ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವಿಚಾರವನ್ನು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

“ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ಸ್ಥಳೀಯ ಯಾವೊಬ್ಬ ವ್ಯಕ್ತಿಯನ್ನೂ ಆಹ್ವಾನಿಸದಿರುವುದು ಅಲ್ಲಿನ ಜನರಿಗೆ ಕೋಪ ತರಿಸಿದೆ. ಅಯೋಧ್ಯೆಯಿಂದ ಸ್ಪರ್ಧೆ ಮಾಡಲು ನರೇಂದ್ರ ಮೋದಿ ಬಯಸಿದ್ದರು. ಆದರೆ, ಅಲ್ಲಿಂದ ಸ್ಪರ್ಧಿಸಿದರೆ ಸೋಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಹಾಗಾಗಿ, ಅಯೋಧ್ಯೆಯ ಸ್ಪರ್ಧೆಯಿಂದ ಮೋದಿ ಹೊಂದೆ ಸರಿದಿದ್ದರು” ಎಂದು ರಾಹುಲ್ ಹೇಳಿದ್ದಾರೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...