Homeರಾಷ್ಟ್ರೀಯರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರಿಂನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಕಾಂಗ್ರೆಸ್!

ರಾಜೀವ್‌ ಗಾಂಧಿ ಹತ್ಯೆ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರಿಂನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಲಿರುವ ಕಾಂಗ್ರೆಸ್!

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.

ಈ ವಾರ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. “ಆದೇಶದಲ್ಲಿ ನಿಗದಿಪಡಿಸಿದ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೊಸ ಮರುಪರಿಶೀಲನಾ ಅರ್ಜಿಯನ್ನು ಮುಂದಿನ ಕೆಲವು ದಿನಗಳಲ್ಲಿ ಪಕ್ಷದ ಪರವಾಗಿ ಸಲ್ಲಿಸಲಾಗುವುದು” ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್‌ನಿಂದ ಟೀಕೆಗಳನ್ನು ಎದುರಿಸುತ್ತಿರುವ ಒಕ್ಕೂಟ ಸರ್ಕಾರವು ಕಳೆದ ವಾರ ಪ್ರಕರಣದಲ್ಲಿ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ನವೆಂಬರ್ 11 ರಂದು ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಸೇರಿ ಆರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಆದೇಶ

1991ರಲ್ಲಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್‌ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಕೊಲ್ಲಲ್ಪಟ್ಟರು.

ಈ ಪ್ರಕರಣದಲ್ಲಿ ಮುರುಗನ್ ಅಲಿಯಾಸ್ ಶ್ರೀಹರನ್, ನಳಿನಿ, ಎಜಿ ಪೆರಾರಿವಾಲನ್, ಸಂತನ್, ಜಯಕುಮಾರ್, ರಾಬರ್ಟ್ ಪಾಯಸ್ ಮತ್ತು ಪಿ. ರವಿಚಂದ್ರನ್ ಅವರನ್ನು ಪ್ರಕರಣ ನಡೆದ ವರ್ಷದಲ್ಲೆ ವಿಚಾರಣೆ ನಡೆಸಿ ದೋಷಿಗಳೆಂದು ಘೋಷಿಸಿ, ಅವರಿಗೆ ಮರಣದಂಡನೆ ವಿಧಿಸಲಾಯಿತು. ನಂತರದ ವರ್ಷಗಳಲ್ಲಿ ಇದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಯಿತ್ತು.

ಅಪರಾಧಿಗಳಲ್ಲಿ ಒಬ್ಬರಾದ ಎ.ಜಿ. ಪೆರಾರಿವಾಲನ್ ಅವರನ್ನು 2022ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದಾಗಿ ಆರು ತಿಂಗಳ ನಂತರ, ಉಳಿದ ಆರು ಜನರನ್ನು ಕೂಡಾ ಬಿಡುಗಡೆ ಮಾಡಲಾಗಿದೆ. ಪೆರಿಯರಿವಾಲನ್ ಬಿಡುಗಡೆಯಾದಾಗ ಅಪರಾಧಿಗಳನ್ನು ಬಿಡುಗಡೆ ಮಾಡುವ ಕಾನೂನು ತರ್ಕವನ್ನು ಈಗಾಗಲೇ ಸ್ಥಾಪಿಸಲಾಗಿದೆ, ಅದೇ ವಾದಗಳು ಇತರರಿಗೂ ಅನ್ವಯಿಸುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಅಪರಾಧಿಗಳೆಲ್ಲರೂ ಜೈಲಿನಲ್ಲಿ ಉತ್ತಮ ನಡವಳಿಕೆಯನ್ನು ಪ್ರದರ್ಶಿಸಿದ್ದಾರೆ ಮತ್ತು ಜೈಲಿನಲ್ಲಿದ್ದಾಗ ಅವರು ಶೈಕ್ಷಣಿಕ ಅರ್ಹತೆಗಳನ್ನು ಸಹ ಪಡೆದಿದ್ದಾರೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...