Homeಮುಖಪುಟಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

- Advertisement -
- Advertisement -

ಕಾಂಗ್ರೆಸ್ ಪಾನ್ ಇಂಡಿಯಾ ವ್ಯಾಪ್ತಿಯ ಪಕ್ಷವಾಗಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧದ ಒಕ್ಕೂಟ ರಚನೆಯಲ್ಲಿ ಕಾಂಗ್ರೆಸ್ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನುಪಸ್ಥಿತಿಯಿಂದ ಬಿಜೆಪಿ ವಿರುದ್ಧದ ಒಕ್ಕೂಟಗಳು ದುರ್ಬಲವಾಗಲಿವೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ದೇಶದಲ್ಲಿ 200 ಕ್ಕಿಂತಲೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ನೇರವಾಗಿ ಸ್ಪರ್ಧಿಸುವ ಶಕ್ತಿಯನ್ನು ಹೊಂದಿದೆ. ಇತರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸ್ಥಳೀಯ ಪಕ್ಷಗಳು ಈ ವಿಷಯವನ್ನು ಮರೆಯಬಾರದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಶರದ್ ಪವಾರ್ ನಿವಾಸದಲ್ಲಿ ನಡೆದ ಸ್ಥಳೀಯ ಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ತಮಗೆ ಮಾಹಿತಿಯಿಲ್ಲ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಸಮಾನ ಮನಸ್ಕವಾದ ಎಲ್ಲಾ ಪಕ್ಷಗಳು ಒಂದು ಸಾಮಾನ್ಯ ಪ್ರಣಾಳಿಕೆಯ ಮೂಲಕ ಒಟ್ಟಾಗಿ ಬಿಜೆಪಿಯ ವಿರುದ್ಧ ಹೋರಾಟವನ್ನು ನಡೆಸುವ ಅಗತ್ಯವಿದೆ ಎಂದು ತೇಜಸ್ವಿ ಯಾದವ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಕಾಂಗ್ರೆಸ್‌ ಭಾಗವಹಿಸದೇ ಇರುವುದರಲ್ಲಿ ಆಶ್ಚರ್ಯವೇನಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್‌ ಇತರ ಸ್ಥಳೀಯ ಪಕ್ಷಗಳ ನೇತೃತ್ವದ ಸಭೆಯಲ್ಲಿ ಭಾಗವಹಿಸಬೇಕೆಂದು ಬಯಸುವುದರಲ್ಲಿ ಅರ್ಥವಿಲ್ಲ. ವಿರೋಧ ಪಕ್ಷಗಳ ರಾಷ್ಟ್ರೀಯ ಮಟ್ಟದ ಒಕ್ಕೂಟದಲ್ಲಿ ಕಾಂಗ್ರೆಸ್‌ ಮಹತ್ವದ ಪಾತ್ರವನ್ನು ಹೊಂದಿದೆ. ಇತರ ಸ್ಥಳೀಯ ಪಕ್ಷಗಳು ರಾಷ್ಟ್ರ ರಾಜಕಾರಣದ ಸಂದರ್ಭದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕಾಂಗ್ರೆಸ್‌ ನಾಯಕತ್ವವನ್ನು ಒಪ್ಪಿಕೊಳ್ಳುವುದು ಪ್ರಸ್ತುತ ಸಂದರ್ಭಕ್ಕೆ ಸೂಕ್ತವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

2014 ರ ಲೋಕಸಭೆ ಚುನಾವಣೆ ದೇಶ ಒಗ್ಗಟ್ಟಾಗಿ ಉಳಿಯುತ್ತದೆಯೇ ಅಥವಾ ವಿಭಜನೆಯಾಗುತ್ತದೆಯೇ ಎಂದು ನಿರ್ಧರಿಸುವ ಚುನಾವಣೆ ಎಂದು ನಮ್ಮ ನಾಯಕರಾದ ಲಾಲು ಪ್ರಸಾದ್ ಯಾದವ್ 2014 ರಲ್ಲಿ ಹೆಳಿದ್ದರು. ಬಹುತೇಕರಿಗೆ ಇಂದು ಅದು ಅರ್ಥವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ಅನುಭವಗಳ ಪ್ರಕಾರ ತನ್ನ ಪ್ರಾಬಲ್ಯವಿರುವ 200 ಕ್ಷೇತ್ರಗಳ ಕಡೆಗೆ ಮಾತ್ರ ಕಾಂಗ್ರೆಸ್‌ ಗಮನ ಹರಿಸುತ್ತದೆ. ವಿಶಾಲ ಹೃದಯದಿಂದ ಉಳಿದ ಕ್ಷೇತ್ರಗಳನ್ನು ಸ್ಥಳೀಯವಾಗಿ ಪ್ರಬಲವಾಗಿರುವ ಪಕ್ಷಗಳಿಗೆ ಕಾಂಗ್ರೆಸ್‌ ಬಿಟ್ಟುಕೊಡಲು ಮುಂದಾಗಬೇಕು ಎಂದು ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಮುಂದಿನ ಲೋಕಸಭಾ ಚುನಾವಣಾ ತಂತ್ರಗಳ ಕುರಿತು ಮಾತನಾಡಿದ್ದಾರೆ.

ಶಿವಸೇನೆಯ ಸಂಸದ ಸಂಜಯ್‌ ರಾವತ್ ಕೂಡ ಕಾಂಗ್ರೆಸ್‌ ಪಕ್ಷವನ್ನು ಹೊರತುಪಡಿಸಿ ಬಿಜೆಪಿ ವಿರುದ್ಧದ ಮೈತ್ರಿಕೂಟಕ್ಕೆ ಹೆಚ್ಚಿನ ಮಹತ್ವವಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರೆ, ಕಾಂಗ್ರೆಸ್ ಹೊರತಾದ ಮೈತ್ರಿಕೂಟದ ರಚನೆಯ ಪ್ರಶ್ನೆ ತಮ್ಮ ಮುಂದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್‌ ಪವಾರ್ ಕೂಡ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಯಾದವ್ ಹೇಳಿಕೆಯಿಂದ ಕಾಂಗ್ರೆಸ್‌ ಜೊತೆಗಿನ ವಿರೋಧ ಪಕ್ಷಗಳ ಒಕ್ಕೂಟದ ರಚನೆಯ ಚರ್ಚೆಗೆ ಮತ್ತೆ ಜೀವ ಬಂದಿದ್ದು ಕಾಂಗ್ರೆಸ್ ಯಾವ ರೀತಿಯಲ್ಲಿ ಈ ಚರ್ಚೆಗಳಿಗೆ ಸ್ಪಂದಿಸುತ್ತದೆ ಎಂಬುದು ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿ ಯಾದವ್ ಅವರು ಹೇಳಿದ ಮಾತು ನಿಜಕ್ಕೂ ಶ್ಲಾಘನೀಯ ಮತ್ತು ಸತ್ಯವಾಗಿದೆ.ಉಳಿದ ಪಕ್ಷಗಳು ತಮ್ಮ ಸ್ವಾರ್ಥ ಬಿಟ್ಟು ಒಂದಾಗಿ ನಿರ್ಧಾರ ತೆಗೆದುಕೊಂಡರೆ ಒಳ್ಳೆಯದು.ಇಲ್ಲ ಅಂದ್ರೆ ಯಾವುದೇ ಚಿಂತನೆ ಫೇಲ್

  2. ತೇಜಸ್ವಿ ಯಾದವ್ ಅವರ ಅಭಿಪ್ರಾಯ ಸರಿಯಾಗಿದೆ. ಎಲ್ಲಾ ವಿರೋಧ ಪಕ್ಷಗಳೂ ಒಂದಾದಾಗ ಮಾತ್ರ ಮನುವಾದಿಗಳನ್ನು ಸೋಲಿಸಬಹುದು.

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...