Homeಮುಖಪುಟಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

- Advertisement -
- Advertisement -

ಕಾಂಗ್ರೆಸ್ ಪಾನ್ ಇಂಡಿಯಾ ವ್ಯಾಪ್ತಿಯ ಪಕ್ಷವಾಗಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧದ ಒಕ್ಕೂಟ ರಚನೆಯಲ್ಲಿ ಕಾಂಗ್ರೆಸ್ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನುಪಸ್ಥಿತಿಯಿಂದ ಬಿಜೆಪಿ ವಿರುದ್ಧದ ಒಕ್ಕೂಟಗಳು ದುರ್ಬಲವಾಗಲಿವೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ದೇಶದಲ್ಲಿ 200 ಕ್ಕಿಂತಲೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ನೇರವಾಗಿ ಸ್ಪರ್ಧಿಸುವ ಶಕ್ತಿಯನ್ನು ಹೊಂದಿದೆ. ಇತರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸ್ಥಳೀಯ ಪಕ್ಷಗಳು ಈ ವಿಷಯವನ್ನು ಮರೆಯಬಾರದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಶರದ್ ಪವಾರ್ ನಿವಾಸದಲ್ಲಿ ನಡೆದ ಸ್ಥಳೀಯ ಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ತಮಗೆ ಮಾಹಿತಿಯಿಲ್ಲ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಸಮಾನ ಮನಸ್ಕವಾದ ಎಲ್ಲಾ ಪಕ್ಷಗಳು ಒಂದು ಸಾಮಾನ್ಯ ಪ್ರಣಾಳಿಕೆಯ ಮೂಲಕ ಒಟ್ಟಾಗಿ ಬಿಜೆಪಿಯ ವಿರುದ್ಧ ಹೋರಾಟವನ್ನು ನಡೆಸುವ ಅಗತ್ಯವಿದೆ ಎಂದು ತೇಜಸ್ವಿ ಯಾದವ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಕಾಂಗ್ರೆಸ್‌ ಭಾಗವಹಿಸದೇ ಇರುವುದರಲ್ಲಿ ಆಶ್ಚರ್ಯವೇನಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್‌ ಇತರ ಸ್ಥಳೀಯ ಪಕ್ಷಗಳ ನೇತೃತ್ವದ ಸಭೆಯಲ್ಲಿ ಭಾಗವಹಿಸಬೇಕೆಂದು ಬಯಸುವುದರಲ್ಲಿ ಅರ್ಥವಿಲ್ಲ. ವಿರೋಧ ಪಕ್ಷಗಳ ರಾಷ್ಟ್ರೀಯ ಮಟ್ಟದ ಒಕ್ಕೂಟದಲ್ಲಿ ಕಾಂಗ್ರೆಸ್‌ ಮಹತ್ವದ ಪಾತ್ರವನ್ನು ಹೊಂದಿದೆ. ಇತರ ಸ್ಥಳೀಯ ಪಕ್ಷಗಳು ರಾಷ್ಟ್ರ ರಾಜಕಾರಣದ ಸಂದರ್ಭದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕಾಂಗ್ರೆಸ್‌ ನಾಯಕತ್ವವನ್ನು ಒಪ್ಪಿಕೊಳ್ಳುವುದು ಪ್ರಸ್ತುತ ಸಂದರ್ಭಕ್ಕೆ ಸೂಕ್ತವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

2014 ರ ಲೋಕಸಭೆ ಚುನಾವಣೆ ದೇಶ ಒಗ್ಗಟ್ಟಾಗಿ ಉಳಿಯುತ್ತದೆಯೇ ಅಥವಾ ವಿಭಜನೆಯಾಗುತ್ತದೆಯೇ ಎಂದು ನಿರ್ಧರಿಸುವ ಚುನಾವಣೆ ಎಂದು ನಮ್ಮ ನಾಯಕರಾದ ಲಾಲು ಪ್ರಸಾದ್ ಯಾದವ್ 2014 ರಲ್ಲಿ ಹೆಳಿದ್ದರು. ಬಹುತೇಕರಿಗೆ ಇಂದು ಅದು ಅರ್ಥವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ಅನುಭವಗಳ ಪ್ರಕಾರ ತನ್ನ ಪ್ರಾಬಲ್ಯವಿರುವ 200 ಕ್ಷೇತ್ರಗಳ ಕಡೆಗೆ ಮಾತ್ರ ಕಾಂಗ್ರೆಸ್‌ ಗಮನ ಹರಿಸುತ್ತದೆ. ವಿಶಾಲ ಹೃದಯದಿಂದ ಉಳಿದ ಕ್ಷೇತ್ರಗಳನ್ನು ಸ್ಥಳೀಯವಾಗಿ ಪ್ರಬಲವಾಗಿರುವ ಪಕ್ಷಗಳಿಗೆ ಕಾಂಗ್ರೆಸ್‌ ಬಿಟ್ಟುಕೊಡಲು ಮುಂದಾಗಬೇಕು ಎಂದು ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಮುಂದಿನ ಲೋಕಸಭಾ ಚುನಾವಣಾ ತಂತ್ರಗಳ ಕುರಿತು ಮಾತನಾಡಿದ್ದಾರೆ.

ಶಿವಸೇನೆಯ ಸಂಸದ ಸಂಜಯ್‌ ರಾವತ್ ಕೂಡ ಕಾಂಗ್ರೆಸ್‌ ಪಕ್ಷವನ್ನು ಹೊರತುಪಡಿಸಿ ಬಿಜೆಪಿ ವಿರುದ್ಧದ ಮೈತ್ರಿಕೂಟಕ್ಕೆ ಹೆಚ್ಚಿನ ಮಹತ್ವವಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರೆ, ಕಾಂಗ್ರೆಸ್ ಹೊರತಾದ ಮೈತ್ರಿಕೂಟದ ರಚನೆಯ ಪ್ರಶ್ನೆ ತಮ್ಮ ಮುಂದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್‌ ಪವಾರ್ ಕೂಡ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಯಾದವ್ ಹೇಳಿಕೆಯಿಂದ ಕಾಂಗ್ರೆಸ್‌ ಜೊತೆಗಿನ ವಿರೋಧ ಪಕ್ಷಗಳ ಒಕ್ಕೂಟದ ರಚನೆಯ ಚರ್ಚೆಗೆ ಮತ್ತೆ ಜೀವ ಬಂದಿದ್ದು ಕಾಂಗ್ರೆಸ್ ಯಾವ ರೀತಿಯಲ್ಲಿ ಈ ಚರ್ಚೆಗಳಿಗೆ ಸ್ಪಂದಿಸುತ್ತದೆ ಎಂಬುದು ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿ ಯಾದವ್ ಅವರು ಹೇಳಿದ ಮಾತು ನಿಜಕ್ಕೂ ಶ್ಲಾಘನೀಯ ಮತ್ತು ಸತ್ಯವಾಗಿದೆ.ಉಳಿದ ಪಕ್ಷಗಳು ತಮ್ಮ ಸ್ವಾರ್ಥ ಬಿಟ್ಟು ಒಂದಾಗಿ ನಿರ್ಧಾರ ತೆಗೆದುಕೊಂಡರೆ ಒಳ್ಳೆಯದು.ಇಲ್ಲ ಅಂದ್ರೆ ಯಾವುದೇ ಚಿಂತನೆ ಫೇಲ್

  2. ತೇಜಸ್ವಿ ಯಾದವ್ ಅವರ ಅಭಿಪ್ರಾಯ ಸರಿಯಾಗಿದೆ. ಎಲ್ಲಾ ವಿರೋಧ ಪಕ್ಷಗಳೂ ಒಂದಾದಾಗ ಮಾತ್ರ ಮನುವಾದಿಗಳನ್ನು ಸೋಲಿಸಬಹುದು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...