Homeಮುಖಪುಟಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

- Advertisement -
- Advertisement -

ಕಾಂಗ್ರೆಸ್ ಪಾನ್ ಇಂಡಿಯಾ ವ್ಯಾಪ್ತಿಯ ಪಕ್ಷವಾಗಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧದ ಒಕ್ಕೂಟ ರಚನೆಯಲ್ಲಿ ಕಾಂಗ್ರೆಸ್ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನುಪಸ್ಥಿತಿಯಿಂದ ಬಿಜೆಪಿ ವಿರುದ್ಧದ ಒಕ್ಕೂಟಗಳು ದುರ್ಬಲವಾಗಲಿವೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ದೇಶದಲ್ಲಿ 200 ಕ್ಕಿಂತಲೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ನೇರವಾಗಿ ಸ್ಪರ್ಧಿಸುವ ಶಕ್ತಿಯನ್ನು ಹೊಂದಿದೆ. ಇತರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸ್ಥಳೀಯ ಪಕ್ಷಗಳು ಈ ವಿಷಯವನ್ನು ಮರೆಯಬಾರದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಶರದ್ ಪವಾರ್ ನಿವಾಸದಲ್ಲಿ ನಡೆದ ಸ್ಥಳೀಯ ಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ತಮಗೆ ಮಾಹಿತಿಯಿಲ್ಲ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಸಮಾನ ಮನಸ್ಕವಾದ ಎಲ್ಲಾ ಪಕ್ಷಗಳು ಒಂದು ಸಾಮಾನ್ಯ ಪ್ರಣಾಳಿಕೆಯ ಮೂಲಕ ಒಟ್ಟಾಗಿ ಬಿಜೆಪಿಯ ವಿರುದ್ಧ ಹೋರಾಟವನ್ನು ನಡೆಸುವ ಅಗತ್ಯವಿದೆ ಎಂದು ತೇಜಸ್ವಿ ಯಾದವ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಕಾಂಗ್ರೆಸ್‌ ಭಾಗವಹಿಸದೇ ಇರುವುದರಲ್ಲಿ ಆಶ್ಚರ್ಯವೇನಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್‌ ಇತರ ಸ್ಥಳೀಯ ಪಕ್ಷಗಳ ನೇತೃತ್ವದ ಸಭೆಯಲ್ಲಿ ಭಾಗವಹಿಸಬೇಕೆಂದು ಬಯಸುವುದರಲ್ಲಿ ಅರ್ಥವಿಲ್ಲ. ವಿರೋಧ ಪಕ್ಷಗಳ ರಾಷ್ಟ್ರೀಯ ಮಟ್ಟದ ಒಕ್ಕೂಟದಲ್ಲಿ ಕಾಂಗ್ರೆಸ್‌ ಮಹತ್ವದ ಪಾತ್ರವನ್ನು ಹೊಂದಿದೆ. ಇತರ ಸ್ಥಳೀಯ ಪಕ್ಷಗಳು ರಾಷ್ಟ್ರ ರಾಜಕಾರಣದ ಸಂದರ್ಭದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕಾಂಗ್ರೆಸ್‌ ನಾಯಕತ್ವವನ್ನು ಒಪ್ಪಿಕೊಳ್ಳುವುದು ಪ್ರಸ್ತುತ ಸಂದರ್ಭಕ್ಕೆ ಸೂಕ್ತವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

2014 ರ ಲೋಕಸಭೆ ಚುನಾವಣೆ ದೇಶ ಒಗ್ಗಟ್ಟಾಗಿ ಉಳಿಯುತ್ತದೆಯೇ ಅಥವಾ ವಿಭಜನೆಯಾಗುತ್ತದೆಯೇ ಎಂದು ನಿರ್ಧರಿಸುವ ಚುನಾವಣೆ ಎಂದು ನಮ್ಮ ನಾಯಕರಾದ ಲಾಲು ಪ್ರಸಾದ್ ಯಾದವ್ 2014 ರಲ್ಲಿ ಹೆಳಿದ್ದರು. ಬಹುತೇಕರಿಗೆ ಇಂದು ಅದು ಅರ್ಥವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ಅನುಭವಗಳ ಪ್ರಕಾರ ತನ್ನ ಪ್ರಾಬಲ್ಯವಿರುವ 200 ಕ್ಷೇತ್ರಗಳ ಕಡೆಗೆ ಮಾತ್ರ ಕಾಂಗ್ರೆಸ್‌ ಗಮನ ಹರಿಸುತ್ತದೆ. ವಿಶಾಲ ಹೃದಯದಿಂದ ಉಳಿದ ಕ್ಷೇತ್ರಗಳನ್ನು ಸ್ಥಳೀಯವಾಗಿ ಪ್ರಬಲವಾಗಿರುವ ಪಕ್ಷಗಳಿಗೆ ಕಾಂಗ್ರೆಸ್‌ ಬಿಟ್ಟುಕೊಡಲು ಮುಂದಾಗಬೇಕು ಎಂದು ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಮುಂದಿನ ಲೋಕಸಭಾ ಚುನಾವಣಾ ತಂತ್ರಗಳ ಕುರಿತು ಮಾತನಾಡಿದ್ದಾರೆ.

ಶಿವಸೇನೆಯ ಸಂಸದ ಸಂಜಯ್‌ ರಾವತ್ ಕೂಡ ಕಾಂಗ್ರೆಸ್‌ ಪಕ್ಷವನ್ನು ಹೊರತುಪಡಿಸಿ ಬಿಜೆಪಿ ವಿರುದ್ಧದ ಮೈತ್ರಿಕೂಟಕ್ಕೆ ಹೆಚ್ಚಿನ ಮಹತ್ವವಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರೆ, ಕಾಂಗ್ರೆಸ್ ಹೊರತಾದ ಮೈತ್ರಿಕೂಟದ ರಚನೆಯ ಪ್ರಶ್ನೆ ತಮ್ಮ ಮುಂದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್‌ ಪವಾರ್ ಕೂಡ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಯಾದವ್ ಹೇಳಿಕೆಯಿಂದ ಕಾಂಗ್ರೆಸ್‌ ಜೊತೆಗಿನ ವಿರೋಧ ಪಕ್ಷಗಳ ಒಕ್ಕೂಟದ ರಚನೆಯ ಚರ್ಚೆಗೆ ಮತ್ತೆ ಜೀವ ಬಂದಿದ್ದು ಕಾಂಗ್ರೆಸ್ ಯಾವ ರೀತಿಯಲ್ಲಿ ಈ ಚರ್ಚೆಗಳಿಗೆ ಸ್ಪಂದಿಸುತ್ತದೆ ಎಂಬುದು ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿ ಯಾದವ್ ಅವರು ಹೇಳಿದ ಮಾತು ನಿಜಕ್ಕೂ ಶ್ಲಾಘನೀಯ ಮತ್ತು ಸತ್ಯವಾಗಿದೆ.ಉಳಿದ ಪಕ್ಷಗಳು ತಮ್ಮ ಸ್ವಾರ್ಥ ಬಿಟ್ಟು ಒಂದಾಗಿ ನಿರ್ಧಾರ ತೆಗೆದುಕೊಂಡರೆ ಒಳ್ಳೆಯದು.ಇಲ್ಲ ಅಂದ್ರೆ ಯಾವುದೇ ಚಿಂತನೆ ಫೇಲ್

  2. ತೇಜಸ್ವಿ ಯಾದವ್ ಅವರ ಅಭಿಪ್ರಾಯ ಸರಿಯಾಗಿದೆ. ಎಲ್ಲಾ ವಿರೋಧ ಪಕ್ಷಗಳೂ ಒಂದಾದಾಗ ಮಾತ್ರ ಮನುವಾದಿಗಳನ್ನು ಸೋಲಿಸಬಹುದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...