Homeಮುಖಪುಟಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

ಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

- Advertisement -
- Advertisement -

ಬಹುಜನರಿಗೆ ಅವರ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ. ಆದರೆ, ಸಮಾಜದಲ್ಲಿ ಎಲ್ಲರ ಒಳಗೊಳ್ಳುವಿಕೆ ಮತ್ತು ಸಮಾನತೆ ಸಿಗಬೇಕಾದರೆ, ಪ್ರತಿಯೊಬ್ಬ ಭಾರತೀಯರು ತಮ್ಮ ಹೃದಯದಲ್ಲಿ ಸಹೋದರತ್ವದ ಮನೋಭಾವದಿಂದ ಶ್ರಮಿಸಿದಾಗ ಮಾತ್ರ ಸಾಧ್ಯ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ದಲಿತರ ಮನೆಯೊಂದರಲ್ಲಿ ಊಟ ಮಾಡಿದ ಅವರ ಇತ್ತೀಚಿನ ಸಂವಾದದ ವೀಡಿಯೊವನ್ನು ರಾಹುಲ್ ಗಾಂಧಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಇಂದಿಗೂ ದಲಿತರ ಅಡುಗೆ ಮನೆಗಳ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ. ಶಾಹು ಪಟೋಲೆ ಹೇಳಿದಂತೆ, ದಲಿತರು ಏನು ತಿನ್ನುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ. ಅವರು ಏನು ತಿನ್ನುತ್ತಾರೆ, ಅವರು ಹೇಗೆ ಅಡುಗೆ ಮಾಡುತ್ತಾರೆ ಎಂಬುದರ ಸಾಮಾಜಿಕ ಮತ್ತು ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಆಸಕ್ತಿ ಹೊಂದಿದ್ದೇನೆ. ನಾನು ಅಜಯ್ ತುಕಾರಾಂ ಸನಡೆ ಮತ್ತು ಅಂಜನಾ ತುಕಾರಾಂ ಸನದೆ ಅವರೊಂದಿಗೆ ಮಧ್ಯಾಹ್ನವನ್ನು ಕಳೆದಿದ್ದೇನೆ” ಎಂದು ರಾಹುಲ್ ಗಾಂಧಿ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಅವರು ನನ್ನನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ತಮ್ಮ ಮನೆಗೆ ಅಡುಗೆಮನೆಯಲ್ಲಿ ಸಹಾಯ ಮಾಡಲು ಆಹ್ವಾನಿಸುವ ಮೂಲಕ ನನ್ನನ್ನು ಗೌರವಿಸಿದರು. ನಾವು ಒಟ್ಟಿಗೆ ‘ಚಾನೆ ಕೆ ಸಾಗ್ ಕಿ ಸಬ್ಜಿ’, ‘ಹರಭಾರಿಯಾಚಿ ಭಾಜಿ’ ಮತ್ತು ಬದನೆಯೊಂದಿಗೆ ದಾಲ್’ ಅಡುಗೆ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಜಾತಿ ಮತ್ತು ತಾರತಮ್ಯದೊಂದಿಗೆ ಪಟೋಲೆ ಮತ್ತು ಸಾನಡೆ ಕುಟುಂಬದ ವೈಯಕ್ತಿಕ ಅನುಭವಗಳನ್ನು ಚಿತ್ರಿಸುತ್ತಾ, “ದಲಿತರ ತಿನಿಸುಗಳ ಬಗ್ಗೆ ಅರಿವಿನ ಕೊರತೆ ಮತ್ತು ಈ ಸಂಸ್ಕೃತಿಯನ್ನು ದಾಖಲಿಸುವ ಮಹತ್ವವನ್ನು ನಾವು ಚರ್ಚಿಸಿದ್ದೇವೆ” ಎಂದು ಅವರು ಹೇಳಿದರು.

“ಸಂವಿಧಾನವು ಬಹುಜನರಿಗೆ ಪಾಲು ಮತ್ತು ಹಕ್ಕುಗಳನ್ನು ನೀಡಿದೆ. ನಾವು ಆ ಸಂವಿಧಾನವನ್ನು ರಕ್ಷಿಸುತ್ತೇವೆ” ಎಂದು ಅವರು ಪ್ರತಿಪಾದಿಸಿದರು. “ಆದರೆ, ಪ್ರತಿಯೊಬ್ಬ ಭಾರತೀಯರು ತಮ್ಮ ಹೃದಯದಲ್ಲಿ ಸಹೋದರತ್ವದ ಮನೋಭಾವದಿಂದ ಶ್ರಮಿಸಿದಾಗ ಮಾತ್ರ ಸಮಾಜದಲ್ಲಿ ಎಲ್ಲರಿಗೂ ನಿಜವಾದ ಒಳಗೊಳ್ಳುವಿಕೆ ಮತ್ತು ಸಮಾನತೆ ಸಾಧ್ಯ” ಎಂದು ಅವರು ಹೇಳಿದರು.

ವೀಡಿಯೊದಲ್ಲಿ, ರಾಹುಲ್ ಗಾಂಧಿ ಅಡುಗೆಮನೆಯಲ್ಲಿ ಸಹಾಯ ಮಾಡಿದ್ದು, ನಂತರ ಅವರ ಮನೆಯಲ್ಲಿ ಕುಟುಂಬದೊಂದಿಗೆ ಊಟ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ; ಉತ್ತರ ಪ್ರದೇಶ: ಕೋಮುವಾದಿ ಹೇಳಿಕೆ ನೀಡಿದ 47 ಜನ ಹಿಂದುತ್ವ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...