Homeಮುಖಪುಟಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

ಬಹುಜನರಿಗೆ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ : ರಾಹುಲ್ ಗಾಂಧಿ

- Advertisement -
- Advertisement -

ಬಹುಜನರಿಗೆ ಅವರ ಹಕ್ಕುಗಳನ್ನು ನೀಡುವ ಸಂವಿಧಾನವನ್ನು ಕಾಂಗ್ರೆಸ್ ರಕ್ಷಿಸುತ್ತದೆ. ಆದರೆ, ಸಮಾಜದಲ್ಲಿ ಎಲ್ಲರ ಒಳಗೊಳ್ಳುವಿಕೆ ಮತ್ತು ಸಮಾನತೆ ಸಿಗಬೇಕಾದರೆ, ಪ್ರತಿಯೊಬ್ಬ ಭಾರತೀಯರು ತಮ್ಮ ಹೃದಯದಲ್ಲಿ ಸಹೋದರತ್ವದ ಮನೋಭಾವದಿಂದ ಶ್ರಮಿಸಿದಾಗ ಮಾತ್ರ ಸಾಧ್ಯ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ದಲಿತರ ಮನೆಯೊಂದರಲ್ಲಿ ಊಟ ಮಾಡಿದ ಅವರ ಇತ್ತೀಚಿನ ಸಂವಾದದ ವೀಡಿಯೊವನ್ನು ರಾಹುಲ್ ಗಾಂಧಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಇಂದಿಗೂ ದಲಿತರ ಅಡುಗೆ ಮನೆಗಳ ಬಗ್ಗೆ ಕೆಲವೇ ಜನರಿಗೆ ತಿಳಿದಿದೆ. ಶಾಹು ಪಟೋಲೆ ಹೇಳಿದಂತೆ, ದಲಿತರು ಏನು ತಿನ್ನುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ. ಅವರು ಏನು ತಿನ್ನುತ್ತಾರೆ, ಅವರು ಹೇಗೆ ಅಡುಗೆ ಮಾಡುತ್ತಾರೆ ಎಂಬುದರ ಸಾಮಾಜಿಕ ಮತ್ತು ರಾಜಕೀಯ ಪ್ರಾಮುಖ್ಯತೆಯ ಬಗ್ಗೆ ಆಸಕ್ತಿ ಹೊಂದಿದ್ದೇನೆ. ನಾನು ಅಜಯ್ ತುಕಾರಾಂ ಸನಡೆ ಮತ್ತು ಅಂಜನಾ ತುಕಾರಾಂ ಸನದೆ ಅವರೊಂದಿಗೆ ಮಧ್ಯಾಹ್ನವನ್ನು ಕಳೆದಿದ್ದೇನೆ” ಎಂದು ರಾಹುಲ್ ಗಾಂಧಿ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಅವರು ನನ್ನನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ತಮ್ಮ ಮನೆಗೆ ಅಡುಗೆಮನೆಯಲ್ಲಿ ಸಹಾಯ ಮಾಡಲು ಆಹ್ವಾನಿಸುವ ಮೂಲಕ ನನ್ನನ್ನು ಗೌರವಿಸಿದರು. ನಾವು ಒಟ್ಟಿಗೆ ‘ಚಾನೆ ಕೆ ಸಾಗ್ ಕಿ ಸಬ್ಜಿ’, ‘ಹರಭಾರಿಯಾಚಿ ಭಾಜಿ’ ಮತ್ತು ಬದನೆಯೊಂದಿಗೆ ದಾಲ್’ ಅಡುಗೆ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಜಾತಿ ಮತ್ತು ತಾರತಮ್ಯದೊಂದಿಗೆ ಪಟೋಲೆ ಮತ್ತು ಸಾನಡೆ ಕುಟುಂಬದ ವೈಯಕ್ತಿಕ ಅನುಭವಗಳನ್ನು ಚಿತ್ರಿಸುತ್ತಾ, “ದಲಿತರ ತಿನಿಸುಗಳ ಬಗ್ಗೆ ಅರಿವಿನ ಕೊರತೆ ಮತ್ತು ಈ ಸಂಸ್ಕೃತಿಯನ್ನು ದಾಖಲಿಸುವ ಮಹತ್ವವನ್ನು ನಾವು ಚರ್ಚಿಸಿದ್ದೇವೆ” ಎಂದು ಅವರು ಹೇಳಿದರು.

“ಸಂವಿಧಾನವು ಬಹುಜನರಿಗೆ ಪಾಲು ಮತ್ತು ಹಕ್ಕುಗಳನ್ನು ನೀಡಿದೆ. ನಾವು ಆ ಸಂವಿಧಾನವನ್ನು ರಕ್ಷಿಸುತ್ತೇವೆ” ಎಂದು ಅವರು ಪ್ರತಿಪಾದಿಸಿದರು. “ಆದರೆ, ಪ್ರತಿಯೊಬ್ಬ ಭಾರತೀಯರು ತಮ್ಮ ಹೃದಯದಲ್ಲಿ ಸಹೋದರತ್ವದ ಮನೋಭಾವದಿಂದ ಶ್ರಮಿಸಿದಾಗ ಮಾತ್ರ ಸಮಾಜದಲ್ಲಿ ಎಲ್ಲರಿಗೂ ನಿಜವಾದ ಒಳಗೊಳ್ಳುವಿಕೆ ಮತ್ತು ಸಮಾನತೆ ಸಾಧ್ಯ” ಎಂದು ಅವರು ಹೇಳಿದರು.

ವೀಡಿಯೊದಲ್ಲಿ, ರಾಹುಲ್ ಗಾಂಧಿ ಅಡುಗೆಮನೆಯಲ್ಲಿ ಸಹಾಯ ಮಾಡಿದ್ದು, ನಂತರ ಅವರ ಮನೆಯಲ್ಲಿ ಕುಟುಂಬದೊಂದಿಗೆ ಊಟ ಮಾಡುವುದನ್ನು ಕಾಣಬಹುದು.

ಇದನ್ನೂ ಓದಿ; ಉತ್ತರ ಪ್ರದೇಶ: ಕೋಮುವಾದಿ ಹೇಳಿಕೆ ನೀಡಿದ 47 ಜನ ಹಿಂದುತ್ವ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...