Homeಕರ್ನಾಟಕಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್

ಬಿಜೆಪಿ ಸರ್ಕಾರದ ವಿರುದ್ಧ ಬೆಂಗಳೂರಿನ 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿರುವ ಕಾಂಗ್ರೆಸ್

- Advertisement -
- Advertisement -

ರಾಜ್ಯ ಕಾಂಗ್ರೆಸ್‌‌ ಸೋಮವಾರದಂದು ಬೆಂಗಳೂರಿನಾದ್ಯಂತ 300 ಸ್ಥಳಗಳಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ನಿರೀಕ್ಷೆಯಿದೆ. ಜನವರಿ 22ರ ಭಾನುವಾರ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಶಾಸಕ ಎನ್.ಎ. ಹಾರೀಸ್, “ಪಕ್ಷದ ಹಿರಿಯ ಮುಖಂಡರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಸೋಮವಾರ ಟ್ರಿನಿಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ” ಎಂದು ಹೇಳಿದ್ದಾರೆ.

ರಾಜ್ಯದ ಬೊಮ್ಮಾಯಿ ಸರ್ಕಾರದ ವಿರುದ್ಧ ಹೊರಿಸಲಾಗಿರುವ ಭ್ರಷ್ಟಾಚಾರ ಆರೋಪದ ವಿರುದ್ಧ ಈ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್‌ ಹೇಳಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಎನ್‌.ಎ. ಹಾರಿಸ್, “ಭ್ರಷ್ಟಾಚಾರ ಆರೋಪದ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಿದ್ಧವಾಗಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವು ತಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ 200 ಸಿಗ್ನಲ್‌ಗಳು, 26 ಫ್ಲೈಓವರ್‌ಗಳು ಮತ್ತು 25 ಮೆಟ್ರೋ ನಿಲ್ದಾಣಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಯುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳ ವರದಿ ಹೇಳಿದೆ. ಸರ್ಕಾರಿ ಯೋಜನೆಗಳಲ್ಲಿ ಭಾಗಿಯಾಗಿರುವ ಗುತ್ತಿಗೆದಾರರಿಂದ ಬಿಜೆಪಿ ಸರ್ಕಾರ 40%ದಷ್ಟು ಕಮಿಷನ್ ಪಡೆಯುತ್ತದೆ ಎಂಬ ಆರೋಪ ಸೇರಿದಂತೆ ಕಾಂಗ್ರೆಸ್‌ ಸೇರಿದಂತೆ ಹಲವು ಆರೋಪಗಳನ್ನು ಮಾಡಿದೆ.

ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಸಂಘದ ಉಪಾಧ್ಯಕ್ಷ ಆರ್.ಮಂಜುನಾಥ್ ಅವರಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋವನ್ನು ಕರ್ನಾಟಕ ಗುತ್ತಿಗೆದಾರರ ಸಂಘವು ಜನವರಿ 16 ರಂದು ಬಿಡುಗಡೆ ಮಾಡಿತ್ತು. ವಿವಿಧ ಕಟ್ಟಡ ಕಾಮಗಾರಿ ನಡೆಸಲು ಬಿಜೆಪಿ ಶಾಸಕರು ಕೇಳಿದ ಲಂಚದಲ್ಲಿ 25%ದಷ್ಟು ತಾನು ನೀಡಿದ್ದಾಗಿ ಮಂಜುನಾಥ್ ಹೇಳಿಕೊಂಡಿದ್ದಾರೆ.

ಹಲವು ಸಚಿವರು ತಮ್ಮೊಂದಿಗೆ ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೊ ಸೇರಿದಂತೆ ದಾಖಲೆಗಳು ತಮ್ಮ ಬಳಿ ಇವೆ ಎಂದು ಅಸೋಸಿಯೇಷನ್ ಮುಖಂಡರು ಹೇಳಿದ್ದು, ಸರ್ಕಾರವು ತಮ್ಮ ಬಿಲ್‌ಗಳನ್ನು ಪಾವತಿ ಮಾಡದಿದ್ದರೆ ಅವುಗಳನ್ನು ಬಿಡುಗಡೆ ಮಾಡುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಜೆಡಿಎಸ್‌‌ ಜೊತೆಗೆ ವಿಲೀನವಾದ ಎಲ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...