Homeಮುಖಪುಟಟಿಕೆಟ್ ವಿಚಾರ: ಕಾಂಗ್ರೆಸ್ ನಾಯಕಿ ಮೇಲೆ ಪಕ್ಷದ ಕಾರ್ಯಕರ್ತರಿಂದಲೇ ಹಲ್ಲೆ

ಟಿಕೆಟ್ ವಿಚಾರ: ಕಾಂಗ್ರೆಸ್ ನಾಯಕಿ ಮೇಲೆ ಪಕ್ಷದ ಕಾರ್ಯಕರ್ತರಿಂದಲೇ ಹಲ್ಲೆ

ಒಂದು ಕಡೆ, ನಮ್ಮ ಪಕ್ಷದ ನಾಯಕರು ಹತ್ರಾಸ್‌ ಕೇಸ್ ಸಂತ್ರಸ್ತರಿಗೆ ನ್ಯಾಯ ದೊರಕಲು ಹೋರಾಡುತ್ತಿದ್ದಾರೆ. ಮತ್ತೊಂದೆಡೆ, ಅತ್ಯಾಚಾರಿಗಳಿಗೆ ಪಕ್ಷದ ಟಿಕೆಟ್ ನೀಡಲಾಗುತ್ತಿದೆ. ಇದು ತಪ್ಪು ನಿರ್ಧಾರ. ಇದು ನಮ್ಮ ಪಕ್ಷದ ಘನತೆಗೆ ಧಕ್ಕೆ ಉಂಟು ಮಾಡಲಿದೆ’ ಎಂದು ತಾರಾ ಯಾದವ್ ಹೇಳಿದ್ದಾರೆ.

- Advertisement -
- Advertisement -

ಉತ್ತರಪ್ರದೇಶ ಉಪಚುನಾವಣೆಗಳಿಗಾಗಿ ಡಿಯೋರಿಯಾ ಕ್ಷೇತ್ರದಿಂದ ಮುಕಂದ್ ಭಾಸ್ಕರ್ ಮಣಿ ತ್ರಿಪಾಠಿಗೆ ಟಿಕೆಟ್ ನೀಡುವ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳಾ ನಾಯಕಿ ತಾರಾ ಯಾದವ್ ಮೇಲೆ ಪಕ್ಷದ ಇತರೆ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ.

’ಒಂದು ಕಡೆ, ನಮ್ಮ ಪಕ್ಷದ ನಾಯಕರು ಹತ್ರಾಸ್‌ ಕೇಸ್ ಸಂತ್ರಸ್ತರಿಗೆ ನ್ಯಾಯ ದೊರಕಲು ಹೋರಾಡುತ್ತಿದ್ದಾರೆ. ಮತ್ತೊಂದೆಡೆ, ಅತ್ಯಾಚಾರಿಗಳಿಗೆ ಪಕ್ಷದ ಟಿಕೆಟ್ ನೀಡಲಾಗುತ್ತಿದೆ. ಇದು ತಪ್ಪು ನಿರ್ಧಾರ. ಇದು ನಮ್ಮ ಪಕ್ಷದ ಘನತೆಗೆ ಧಕ್ಕೆ ಉಂಟು ಮಾಡಲಿದೆ’ ಎಂದು ತಾರಾ ಯಾದವ್ ಹೇಳಿದ್ದಾರೆ.

’ಮುಂಬರುವ ಉಪಚುನಾವಣೆಯಲ್ಲಿ ಅತ್ಯಾಚಾರಿ ಮುಕುಂದ್ ಭಾಸ್ಕರ್ ಅವರಿಗೆ ಟಿಕೆಟ್ ನೀಡುವ ಪಕ್ಷದ ನಿರ್ಧಾರವನ್ನು ನಾನು ಪ್ರಶ್ನಿಸಿದಾಗ ಪಕ್ಷದ ಕಾರ್ಯಕರ್ತರು ನನ್ನನ್ನು ಥಳಿಸಿದರು. ಈಗ, ಪ್ರಿಯಾಂಕಾ ಗಾಂಧಿ ಜಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿ ಎಂದು ನಾನು ಕಾಯುತ್ತಿದ್ದೇನೆ’ ಎಂದಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಡಿಯೋರಿಯಾದಲ್ಲಿ ಉಪಚುನಾವಣೆ ಸಂಬಂಧ ನಡೆದ ಸಭೆಯಲ್ಲಿ ಟಿಕೆಟ್​ ಹಂಚಿಕೆ ವಿಚಾರವಾಗಿ ಕಾಂಗ್ರೆಸ್​ ನಾಯಕಿ ತಾರಾ ಯಾದವ್​ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಚಿನ್​ ನಾಯಕ್​ ನಡುವೆ ವಾಗ್ವಾದ ನಡೆದಿದೆ. ಮುಕಂದ್ ಭಾಸ್ಕರ್ ಮಣಿ ತ್ರಿಪಾಠಿ ಅವರನ್ನ ಅಭ್ಯರ್ಥಿಯನ್ನಾಗಿ ಮಾಡುವ ಪಕ್ಷದ ನಿರ್ಧಾರಕ್ಕೆ ತಾರಾ ವಿರೋಧ ವ್ಯಕ್ತಪಡಿಸಿದ್ದರು.

ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮುಕುಂದ್​ ಭಾಸ್ಕರ್​ ಹಾಗೂ ಸಚಿನ್​ ನಾಯಕ್ ಅವರ ಬೆಂಬಲಿಗರು ತಾರಾ ಮೇಲೆ ಹಲ್ಲೆಗೆ ಮುಂದಾಗಿದ್ದರು. ಕಾರ್ಯಕರ್ತರ ನಡುವೆ ನಡೆದ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಘಟನೆ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರಕರಣ​ ದಾಖಲಿಸಿಕೊಂಡಿದೆ.

ಉತ್ತರ ಪ್ರದೇಶದ ಏಳು ವಿಧಾನಸಭಾ ಸ್ಥಾನಗಳಲ್ಲಿ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ, ಕಾಂಗ್ರೆಸ್ ಐದು ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು. ಮುಕುಂದ್ ಭಾಸ್ಕರ್ ಮಣಿ ತ್ರಿಪಾಠಿ ಅವರು ಡಿಯೋರಿಯಾ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸುತ್ತಿದ್ದಾರೆ. ಮತದಾನ ನವೆಂಬರ್ 3 ರಂದು ಮತ್ತು ನವೆಂಬರ್ 10 ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕೂಡ ಘಟನೆಯ ವಿಡಿಯೋವನ್ನ ಟ್ವಿಟ್ಟರ್‌ ಖಾತೆಯಲ್ಲಿ ಫೋಸ್ಟ್ ಮಾಡಿದ್ದು, ಸೋನಿಯಾ ಗಾಂಧಿ ಅವರ ಪಕ್ಷದಲ್ಲಿ ಮಹಿಳೆಯರನ್ನ ನಡೆಸಿಕೊಳ್ಳುವ ರೀತಿಯಿದು’ ಎಂದಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಕರಾಳ ಕಾಯ್ದೆಗಳನ್ನು ತೆಗೆದುಹಾಕುತ್ತದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...