Homeಕರ್ನಾಟಕಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

- Advertisement -
- Advertisement -

ಬಜರಂಗದಳದ ದುಷ್ಕರ್ಮಿಗಳು ನಡೆಸಿರುವ ‘ಮೋರಲ್ ಪೊಲೀಸಿಂಗ್’ ಅನ್ನು ತೀವ್ರವಾಗಿ ಖಂಡಿಸಿದ್ದ ಕಾಂಗ್ರೆಸ್‌ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ, ಸಂದೀಪ್‌ ಎಂಬ ವ್ಯಕ್ತಿಯೊಬ್ಬ ಬಹಿರಂಗವಾಗಿ ಬೆದರಿಕೆ ಹಾಕಿರುವ ಘಟನೆ ಗುರುವಾರ ನಡೆದಿದೆ. ಲಾವಣ್ಯ ಅವರು ಸ್ಥಳೀಯ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳು, ಇತ್ತೀಚೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ಮೇಲೆ ಹಲ್ಲೆ ನಡೆಸಿ ‘ಮೋರಲ್ ಪೊಲೀಸಿಂಗ್’ ನಡೆಸಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಲಾವಣ್ಯ ಅವರು, ಬಜರಂಗದಳ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರಿಗೆ ಭಾರಿ ಬೆಂಬಲ ದೊರಕಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಇದೇ ವಿಚಾರವಾಗಿ ಮಂಗಳೂರಿನ ಸ್ಥಳೀಯ ಟಿವಿ ವಾಹಿನಿಯೊಂದು ‘ದಾದಾಗಿರಿ!?’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರೈಮ್ ಟೈಂ ಪ್ಯಾನಲ್ ಚರ್ಚೆಯನ್ನು ಆಯೋಜಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಲಾವಣ್ಯ ಬಲ್ಲಾಳ್ ಅವರಿಗೆ ಕರೆ ಮಾಡಿದ್ದ ಸಂದೀಪ್ ಎನ್ನುವ ವ್ಯಕ್ತಿಯೊಬ್ಬ, “ನೀವು ಏಸಿ ಕಾರಲ್ಲಿ ಕೂತು ಮಾತನಾಡುತ್ತೀರಿ ಅಲ್ಲವೆ? ನೀವು ಹೊರಗೆ ಬಂದು ಸಾರ್ವಜನಿಕವಾಗಿ ಮಾತನಾಡಿ, ನಾವು ನಿಮಗೆ ಕೂಡಾ ಹಲ್ಲೆ ನಡೆಸುತ್ತೇವೆ” ಎಂದು ಬೆದರಿಕೆ ಹಾಕಿದ್ದಾನೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲಾವಣ್ಯ ಬಲ್ಲಾಳ್, “ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚಿಸಿ, ಚಾನೆಲ್‌ನಲ್ಲಿ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ದ ದೂರು ದಾಖಲಿಸಲಿದ್ದೇನೆ. ಕರೆ ಮಾಡಿರುವ ವ್ಯಕ್ತಿಯ ವಿವರಗಳನ್ನು ಚಾನೆಲ್ ಇನ್ನೂ ನೀಡಿಲ್ಲ. ಚಾನೆಲ್‌ ಅನ್ನು ವೇದಿಕೆಯಾಗಿ ವ್ಯಕ್ತಿ ನನಗೆ ಬೆದರಿಕೆ ಹಾಕಿರುವುದರಿಂದ, ವಾಹಿನಿಯನ್ನೂ ದೂರಿನಲ್ಲಿ ಸೇರಿಸಲಿದ್ದೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನೀಡಿರುವ ಚಿಂತಕ ಶ್ರೀನಿವಾಸ ಕಾರ್ಕಾಳ, “ಸರಕಾರಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡದಿದ್ದಾಗ, ಕಾನೂನು ನಿಯಮ ಮತ್ತು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದಾಗ ಒಟ್ಟು ಆಡಳಿತ ವ್ಯವಸ್ಥೆ ಕುಸಿದುಬೀಳುತ್ತದೆ. ಆಗ ಇಂಥ ಅನಪೇಕ್ಷಣೀಯ ಘಟನೆಗಳು ಸಂಭವಿಸುತ್ತವೆ. ‘ನಮ್ಮದೇ ಸರಕಾರ, ನಾವು ಏನು ಮಾಡಿದರೂ ನಮಗೆ ನಮ್ಮ ಸರಕಾರದ ರಕ್ಷಣೆ ಇದೆ’ ಎಂಬ ಭರವಸೆ ಮತ್ತು ಧೈರ್ಯ ಇದ್ದಾಗ ಸಮಾಜವಿರೋಧಿ ಶಕ್ತಿಗಳು ಇನ್ನಷ್ಟು ಮತ್ತಷ್ಟು ಉಗ್ರವಾಗುತ್ತವೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಎಗ್ಗಿಲ್ಲದೆ ಮುಂದುವರಿಸುತ್ತವೆ” ಎಂದು ಹೇಳಿದ್ದಾರೆ.

ಶ್ರೀನಿವಾಸ ಕಾರ್ಕಾಳ
ಶ್ರೀನಿವಾಸ ಕಾರ್ಕಾಳ

“ಅನೇಕ ಬಾರಿ ಅಪರಾಧ ಕೃತ್ಯ ನಡೆಯುವ ಬಗ್ಗೆ ಪೊಲೀಸರಿಗೆ ಪೂರ್ವ ಸೂಚನೆ ಇರುವುದಿಲ್ಲ. ಹಾಗಾಗಿ ಅವನ್ನು ಅವರಿಗೆ ತಡೆಯುವುದು ಸುಲಭ ಸಾಧ್ಯದ ಕೆಲಸವಲ್ಲ. ಆದರೆ ಅಪರಾಧ ಕೃತ್ಯ ನಡೆದ ಬಳಿಕ ಪೊಲೀಸರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯ. ಆ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಮತ್ತು ಅವರಿಗೆ exemplary punishment ಆಗುವಂತೆ ಮಾಡುವುದು ಮುಂದೆ ಅಂತಹ ಘಟನೆ ನಡೆಯದಂತೆ ನೋಡಿಕೊಳ್ಳುವ ಪರಿಣಾಮಕಾರಿ ಉಪಾಯ. ಆದರೆ ನಮ್ಮ ಪೊಲೀಸರು ಇಂತಹ ಕ್ರಮ ಜರುಗಿಸದಿರುವುದರಿಂದ, ಅಪರಾಧಿಗಳು ಸುಲಭವಾಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದರಿಂದ ಇವೆಲ್ಲ ಮತ್ತೆ ಮತ್ತೆ ಸಂಭವಿಸುತ್ತವೆ. ಹಾಗಾಗಿ ಇಂದಿನ ಈ ಕೆಟ್ಟ ಪರಿಸ್ಥಿತಿಯ ಹೊಣೆಯನ್ನು ಬಹುಪಾಲು ಪೊಲೀಸರು ಹೊರಬೇಕಾಗುತ್ತದೆ. ಮತ್ತು ಈಗಲೂ ಪೊಲೀಸರ ವರ್ತನೆಯಲ್ಲಿ ಹೆಚ್ಚಿನ ಬದಲಾವಣೆ ಆಗದಿರುವುದರಿಂದ ಇಂತಹ ಘಟನೆ ಮುಂದೆಯೂ ನಡೆಯುತ್ತ ಹೋಗುವುದರಲ್ಲಿ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಇತ್ತೀಚೆಗೆ ಹಲವಾರು ಮೋರಲ್ ಪೊಲೀಸಿಂಗ್ ಪ್ರಕರಣಗಳು ನಡೆಯುತ್ತಿದೆ. ಕಳೆದ ಭಾನುವಾರ ನಡೆದಿದ್ದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದರಾದರೂ, ಠಾಣೆಯಲ್ಲೇ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದರು. ಇದರ ವಿರುದ್ದ ಕೂಡಾ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....