Homeಕರ್ನಾಟಕಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

- Advertisement -
- Advertisement -

ಬಜರಂಗದಳದ ದುಷ್ಕರ್ಮಿಗಳು ನಡೆಸಿರುವ ‘ಮೋರಲ್ ಪೊಲೀಸಿಂಗ್’ ಅನ್ನು ತೀವ್ರವಾಗಿ ಖಂಡಿಸಿದ್ದ ಕಾಂಗ್ರೆಸ್‌ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ, ಸಂದೀಪ್‌ ಎಂಬ ವ್ಯಕ್ತಿಯೊಬ್ಬ ಬಹಿರಂಗವಾಗಿ ಬೆದರಿಕೆ ಹಾಕಿರುವ ಘಟನೆ ಗುರುವಾರ ನಡೆದಿದೆ. ಲಾವಣ್ಯ ಅವರು ಸ್ಥಳೀಯ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳು, ಇತ್ತೀಚೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ಮೇಲೆ ಹಲ್ಲೆ ನಡೆಸಿ ‘ಮೋರಲ್ ಪೊಲೀಸಿಂಗ್’ ನಡೆಸಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಲಾವಣ್ಯ ಅವರು, ಬಜರಂಗದಳ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರಿಗೆ ಭಾರಿ ಬೆಂಬಲ ದೊರಕಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಇದೇ ವಿಚಾರವಾಗಿ ಮಂಗಳೂರಿನ ಸ್ಥಳೀಯ ಟಿವಿ ವಾಹಿನಿಯೊಂದು ‘ದಾದಾಗಿರಿ!?’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರೈಮ್ ಟೈಂ ಪ್ಯಾನಲ್ ಚರ್ಚೆಯನ್ನು ಆಯೋಜಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಲಾವಣ್ಯ ಬಲ್ಲಾಳ್ ಅವರಿಗೆ ಕರೆ ಮಾಡಿದ್ದ ಸಂದೀಪ್ ಎನ್ನುವ ವ್ಯಕ್ತಿಯೊಬ್ಬ, “ನೀವು ಏಸಿ ಕಾರಲ್ಲಿ ಕೂತು ಮಾತನಾಡುತ್ತೀರಿ ಅಲ್ಲವೆ? ನೀವು ಹೊರಗೆ ಬಂದು ಸಾರ್ವಜನಿಕವಾಗಿ ಮಾತನಾಡಿ, ನಾವು ನಿಮಗೆ ಕೂಡಾ ಹಲ್ಲೆ ನಡೆಸುತ್ತೇವೆ” ಎಂದು ಬೆದರಿಕೆ ಹಾಕಿದ್ದಾನೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲಾವಣ್ಯ ಬಲ್ಲಾಳ್, “ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚಿಸಿ, ಚಾನೆಲ್‌ನಲ್ಲಿ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ದ ದೂರು ದಾಖಲಿಸಲಿದ್ದೇನೆ. ಕರೆ ಮಾಡಿರುವ ವ್ಯಕ್ತಿಯ ವಿವರಗಳನ್ನು ಚಾನೆಲ್ ಇನ್ನೂ ನೀಡಿಲ್ಲ. ಚಾನೆಲ್‌ ಅನ್ನು ವೇದಿಕೆಯಾಗಿ ವ್ಯಕ್ತಿ ನನಗೆ ಬೆದರಿಕೆ ಹಾಕಿರುವುದರಿಂದ, ವಾಹಿನಿಯನ್ನೂ ದೂರಿನಲ್ಲಿ ಸೇರಿಸಲಿದ್ದೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನೀಡಿರುವ ಚಿಂತಕ ಶ್ರೀನಿವಾಸ ಕಾರ್ಕಾಳ, “ಸರಕಾರಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡದಿದ್ದಾಗ, ಕಾನೂನು ನಿಯಮ ಮತ್ತು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದಾಗ ಒಟ್ಟು ಆಡಳಿತ ವ್ಯವಸ್ಥೆ ಕುಸಿದುಬೀಳುತ್ತದೆ. ಆಗ ಇಂಥ ಅನಪೇಕ್ಷಣೀಯ ಘಟನೆಗಳು ಸಂಭವಿಸುತ್ತವೆ. ‘ನಮ್ಮದೇ ಸರಕಾರ, ನಾವು ಏನು ಮಾಡಿದರೂ ನಮಗೆ ನಮ್ಮ ಸರಕಾರದ ರಕ್ಷಣೆ ಇದೆ’ ಎಂಬ ಭರವಸೆ ಮತ್ತು ಧೈರ್ಯ ಇದ್ದಾಗ ಸಮಾಜವಿರೋಧಿ ಶಕ್ತಿಗಳು ಇನ್ನಷ್ಟು ಮತ್ತಷ್ಟು ಉಗ್ರವಾಗುತ್ತವೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಎಗ್ಗಿಲ್ಲದೆ ಮುಂದುವರಿಸುತ್ತವೆ” ಎಂದು ಹೇಳಿದ್ದಾರೆ.

ಶ್ರೀನಿವಾಸ ಕಾರ್ಕಾಳ
ಶ್ರೀನಿವಾಸ ಕಾರ್ಕಾಳ

“ಅನೇಕ ಬಾರಿ ಅಪರಾಧ ಕೃತ್ಯ ನಡೆಯುವ ಬಗ್ಗೆ ಪೊಲೀಸರಿಗೆ ಪೂರ್ವ ಸೂಚನೆ ಇರುವುದಿಲ್ಲ. ಹಾಗಾಗಿ ಅವನ್ನು ಅವರಿಗೆ ತಡೆಯುವುದು ಸುಲಭ ಸಾಧ್ಯದ ಕೆಲಸವಲ್ಲ. ಆದರೆ ಅಪರಾಧ ಕೃತ್ಯ ನಡೆದ ಬಳಿಕ ಪೊಲೀಸರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯ. ಆ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಮತ್ತು ಅವರಿಗೆ exemplary punishment ಆಗುವಂತೆ ಮಾಡುವುದು ಮುಂದೆ ಅಂತಹ ಘಟನೆ ನಡೆಯದಂತೆ ನೋಡಿಕೊಳ್ಳುವ ಪರಿಣಾಮಕಾರಿ ಉಪಾಯ. ಆದರೆ ನಮ್ಮ ಪೊಲೀಸರು ಇಂತಹ ಕ್ರಮ ಜರುಗಿಸದಿರುವುದರಿಂದ, ಅಪರಾಧಿಗಳು ಸುಲಭವಾಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದರಿಂದ ಇವೆಲ್ಲ ಮತ್ತೆ ಮತ್ತೆ ಸಂಭವಿಸುತ್ತವೆ. ಹಾಗಾಗಿ ಇಂದಿನ ಈ ಕೆಟ್ಟ ಪರಿಸ್ಥಿತಿಯ ಹೊಣೆಯನ್ನು ಬಹುಪಾಲು ಪೊಲೀಸರು ಹೊರಬೇಕಾಗುತ್ತದೆ. ಮತ್ತು ಈಗಲೂ ಪೊಲೀಸರ ವರ್ತನೆಯಲ್ಲಿ ಹೆಚ್ಚಿನ ಬದಲಾವಣೆ ಆಗದಿರುವುದರಿಂದ ಇಂತಹ ಘಟನೆ ಮುಂದೆಯೂ ನಡೆಯುತ್ತ ಹೋಗುವುದರಲ್ಲಿ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಇತ್ತೀಚೆಗೆ ಹಲವಾರು ಮೋರಲ್ ಪೊಲೀಸಿಂಗ್ ಪ್ರಕರಣಗಳು ನಡೆಯುತ್ತಿದೆ. ಕಳೆದ ಭಾನುವಾರ ನಡೆದಿದ್ದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದರಾದರೂ, ಠಾಣೆಯಲ್ಲೇ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದರು. ಇದರ ವಿರುದ್ದ ಕೂಡಾ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...