Homeಕರ್ನಾಟಕಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

- Advertisement -
- Advertisement -

ಬಜರಂಗದಳದ ದುಷ್ಕರ್ಮಿಗಳು ನಡೆಸಿರುವ ‘ಮೋರಲ್ ಪೊಲೀಸಿಂಗ್’ ಅನ್ನು ತೀವ್ರವಾಗಿ ಖಂಡಿಸಿದ್ದ ಕಾಂಗ್ರೆಸ್‌ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ, ಸಂದೀಪ್‌ ಎಂಬ ವ್ಯಕ್ತಿಯೊಬ್ಬ ಬಹಿರಂಗವಾಗಿ ಬೆದರಿಕೆ ಹಾಕಿರುವ ಘಟನೆ ಗುರುವಾರ ನಡೆದಿದೆ. ಲಾವಣ್ಯ ಅವರು ಸ್ಥಳೀಯ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳು, ಇತ್ತೀಚೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ಮೇಲೆ ಹಲ್ಲೆ ನಡೆಸಿ ‘ಮೋರಲ್ ಪೊಲೀಸಿಂಗ್’ ನಡೆಸಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಲಾವಣ್ಯ ಅವರು, ಬಜರಂಗದಳ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರಿಗೆ ಭಾರಿ ಬೆಂಬಲ ದೊರಕಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಇದೇ ವಿಚಾರವಾಗಿ ಮಂಗಳೂರಿನ ಸ್ಥಳೀಯ ಟಿವಿ ವಾಹಿನಿಯೊಂದು ‘ದಾದಾಗಿರಿ!?’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರೈಮ್ ಟೈಂ ಪ್ಯಾನಲ್ ಚರ್ಚೆಯನ್ನು ಆಯೋಜಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಲಾವಣ್ಯ ಬಲ್ಲಾಳ್ ಅವರಿಗೆ ಕರೆ ಮಾಡಿದ್ದ ಸಂದೀಪ್ ಎನ್ನುವ ವ್ಯಕ್ತಿಯೊಬ್ಬ, “ನೀವು ಏಸಿ ಕಾರಲ್ಲಿ ಕೂತು ಮಾತನಾಡುತ್ತೀರಿ ಅಲ್ಲವೆ? ನೀವು ಹೊರಗೆ ಬಂದು ಸಾರ್ವಜನಿಕವಾಗಿ ಮಾತನಾಡಿ, ನಾವು ನಿಮಗೆ ಕೂಡಾ ಹಲ್ಲೆ ನಡೆಸುತ್ತೇವೆ” ಎಂದು ಬೆದರಿಕೆ ಹಾಕಿದ್ದಾನೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲಾವಣ್ಯ ಬಲ್ಲಾಳ್, “ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚಿಸಿ, ಚಾನೆಲ್‌ನಲ್ಲಿ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ದ ದೂರು ದಾಖಲಿಸಲಿದ್ದೇನೆ. ಕರೆ ಮಾಡಿರುವ ವ್ಯಕ್ತಿಯ ವಿವರಗಳನ್ನು ಚಾನೆಲ್ ಇನ್ನೂ ನೀಡಿಲ್ಲ. ಚಾನೆಲ್‌ ಅನ್ನು ವೇದಿಕೆಯಾಗಿ ವ್ಯಕ್ತಿ ನನಗೆ ಬೆದರಿಕೆ ಹಾಕಿರುವುದರಿಂದ, ವಾಹಿನಿಯನ್ನೂ ದೂರಿನಲ್ಲಿ ಸೇರಿಸಲಿದ್ದೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನೀಡಿರುವ ಚಿಂತಕ ಶ್ರೀನಿವಾಸ ಕಾರ್ಕಾಳ, “ಸರಕಾರಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡದಿದ್ದಾಗ, ಕಾನೂನು ನಿಯಮ ಮತ್ತು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದಾಗ ಒಟ್ಟು ಆಡಳಿತ ವ್ಯವಸ್ಥೆ ಕುಸಿದುಬೀಳುತ್ತದೆ. ಆಗ ಇಂಥ ಅನಪೇಕ್ಷಣೀಯ ಘಟನೆಗಳು ಸಂಭವಿಸುತ್ತವೆ. ‘ನಮ್ಮದೇ ಸರಕಾರ, ನಾವು ಏನು ಮಾಡಿದರೂ ನಮಗೆ ನಮ್ಮ ಸರಕಾರದ ರಕ್ಷಣೆ ಇದೆ’ ಎಂಬ ಭರವಸೆ ಮತ್ತು ಧೈರ್ಯ ಇದ್ದಾಗ ಸಮಾಜವಿರೋಧಿ ಶಕ್ತಿಗಳು ಇನ್ನಷ್ಟು ಮತ್ತಷ್ಟು ಉಗ್ರವಾಗುತ್ತವೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಎಗ್ಗಿಲ್ಲದೆ ಮುಂದುವರಿಸುತ್ತವೆ” ಎಂದು ಹೇಳಿದ್ದಾರೆ.

ಶ್ರೀನಿವಾಸ ಕಾರ್ಕಾಳ
ಶ್ರೀನಿವಾಸ ಕಾರ್ಕಾಳ

“ಅನೇಕ ಬಾರಿ ಅಪರಾಧ ಕೃತ್ಯ ನಡೆಯುವ ಬಗ್ಗೆ ಪೊಲೀಸರಿಗೆ ಪೂರ್ವ ಸೂಚನೆ ಇರುವುದಿಲ್ಲ. ಹಾಗಾಗಿ ಅವನ್ನು ಅವರಿಗೆ ತಡೆಯುವುದು ಸುಲಭ ಸಾಧ್ಯದ ಕೆಲಸವಲ್ಲ. ಆದರೆ ಅಪರಾಧ ಕೃತ್ಯ ನಡೆದ ಬಳಿಕ ಪೊಲೀಸರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯ. ಆ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಮತ್ತು ಅವರಿಗೆ exemplary punishment ಆಗುವಂತೆ ಮಾಡುವುದು ಮುಂದೆ ಅಂತಹ ಘಟನೆ ನಡೆಯದಂತೆ ನೋಡಿಕೊಳ್ಳುವ ಪರಿಣಾಮಕಾರಿ ಉಪಾಯ. ಆದರೆ ನಮ್ಮ ಪೊಲೀಸರು ಇಂತಹ ಕ್ರಮ ಜರುಗಿಸದಿರುವುದರಿಂದ, ಅಪರಾಧಿಗಳು ಸುಲಭವಾಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದರಿಂದ ಇವೆಲ್ಲ ಮತ್ತೆ ಮತ್ತೆ ಸಂಭವಿಸುತ್ತವೆ. ಹಾಗಾಗಿ ಇಂದಿನ ಈ ಕೆಟ್ಟ ಪರಿಸ್ಥಿತಿಯ ಹೊಣೆಯನ್ನು ಬಹುಪಾಲು ಪೊಲೀಸರು ಹೊರಬೇಕಾಗುತ್ತದೆ. ಮತ್ತು ಈಗಲೂ ಪೊಲೀಸರ ವರ್ತನೆಯಲ್ಲಿ ಹೆಚ್ಚಿನ ಬದಲಾವಣೆ ಆಗದಿರುವುದರಿಂದ ಇಂತಹ ಘಟನೆ ಮುಂದೆಯೂ ನಡೆಯುತ್ತ ಹೋಗುವುದರಲ್ಲಿ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಇತ್ತೀಚೆಗೆ ಹಲವಾರು ಮೋರಲ್ ಪೊಲೀಸಿಂಗ್ ಪ್ರಕರಣಗಳು ನಡೆಯುತ್ತಿದೆ. ಕಳೆದ ಭಾನುವಾರ ನಡೆದಿದ್ದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದರಾದರೂ, ಠಾಣೆಯಲ್ಲೇ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದರು. ಇದರ ವಿರುದ್ದ ಕೂಡಾ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...