Homeಕರ್ನಾಟಕಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

- Advertisement -
- Advertisement -

ಬಜರಂಗದಳದ ದುಷ್ಕರ್ಮಿಗಳು ನಡೆಸಿರುವ ‘ಮೋರಲ್ ಪೊಲೀಸಿಂಗ್’ ಅನ್ನು ತೀವ್ರವಾಗಿ ಖಂಡಿಸಿದ್ದ ಕಾಂಗ್ರೆಸ್‌ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ, ಸಂದೀಪ್‌ ಎಂಬ ವ್ಯಕ್ತಿಯೊಬ್ಬ ಬಹಿರಂಗವಾಗಿ ಬೆದರಿಕೆ ಹಾಕಿರುವ ಘಟನೆ ಗುರುವಾರ ನಡೆದಿದೆ. ಲಾವಣ್ಯ ಅವರು ಸ್ಥಳೀಯ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳು, ಇತ್ತೀಚೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ಮೇಲೆ ಹಲ್ಲೆ ನಡೆಸಿ ‘ಮೋರಲ್ ಪೊಲೀಸಿಂಗ್’ ನಡೆಸಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಲಾವಣ್ಯ ಅವರು, ಬಜರಂಗದಳ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರಿಗೆ ಭಾರಿ ಬೆಂಬಲ ದೊರಕಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಇದೇ ವಿಚಾರವಾಗಿ ಮಂಗಳೂರಿನ ಸ್ಥಳೀಯ ಟಿವಿ ವಾಹಿನಿಯೊಂದು ‘ದಾದಾಗಿರಿ!?’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರೈಮ್ ಟೈಂ ಪ್ಯಾನಲ್ ಚರ್ಚೆಯನ್ನು ಆಯೋಜಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಲಾವಣ್ಯ ಬಲ್ಲಾಳ್ ಅವರಿಗೆ ಕರೆ ಮಾಡಿದ್ದ ಸಂದೀಪ್ ಎನ್ನುವ ವ್ಯಕ್ತಿಯೊಬ್ಬ, “ನೀವು ಏಸಿ ಕಾರಲ್ಲಿ ಕೂತು ಮಾತನಾಡುತ್ತೀರಿ ಅಲ್ಲವೆ? ನೀವು ಹೊರಗೆ ಬಂದು ಸಾರ್ವಜನಿಕವಾಗಿ ಮಾತನಾಡಿ, ನಾವು ನಿಮಗೆ ಕೂಡಾ ಹಲ್ಲೆ ನಡೆಸುತ್ತೇವೆ” ಎಂದು ಬೆದರಿಕೆ ಹಾಕಿದ್ದಾನೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲಾವಣ್ಯ ಬಲ್ಲಾಳ್, “ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚಿಸಿ, ಚಾನೆಲ್‌ನಲ್ಲಿ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ದ ದೂರು ದಾಖಲಿಸಲಿದ್ದೇನೆ. ಕರೆ ಮಾಡಿರುವ ವ್ಯಕ್ತಿಯ ವಿವರಗಳನ್ನು ಚಾನೆಲ್ ಇನ್ನೂ ನೀಡಿಲ್ಲ. ಚಾನೆಲ್‌ ಅನ್ನು ವೇದಿಕೆಯಾಗಿ ವ್ಯಕ್ತಿ ನನಗೆ ಬೆದರಿಕೆ ಹಾಕಿರುವುದರಿಂದ, ವಾಹಿನಿಯನ್ನೂ ದೂರಿನಲ್ಲಿ ಸೇರಿಸಲಿದ್ದೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನೀಡಿರುವ ಚಿಂತಕ ಶ್ರೀನಿವಾಸ ಕಾರ್ಕಾಳ, “ಸರಕಾರಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡದಿದ್ದಾಗ, ಕಾನೂನು ನಿಯಮ ಮತ್ತು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದಾಗ ಒಟ್ಟು ಆಡಳಿತ ವ್ಯವಸ್ಥೆ ಕುಸಿದುಬೀಳುತ್ತದೆ. ಆಗ ಇಂಥ ಅನಪೇಕ್ಷಣೀಯ ಘಟನೆಗಳು ಸಂಭವಿಸುತ್ತವೆ. ‘ನಮ್ಮದೇ ಸರಕಾರ, ನಾವು ಏನು ಮಾಡಿದರೂ ನಮಗೆ ನಮ್ಮ ಸರಕಾರದ ರಕ್ಷಣೆ ಇದೆ’ ಎಂಬ ಭರವಸೆ ಮತ್ತು ಧೈರ್ಯ ಇದ್ದಾಗ ಸಮಾಜವಿರೋಧಿ ಶಕ್ತಿಗಳು ಇನ್ನಷ್ಟು ಮತ್ತಷ್ಟು ಉಗ್ರವಾಗುತ್ತವೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಎಗ್ಗಿಲ್ಲದೆ ಮುಂದುವರಿಸುತ್ತವೆ” ಎಂದು ಹೇಳಿದ್ದಾರೆ.

ಶ್ರೀನಿವಾಸ ಕಾರ್ಕಾಳ
ಶ್ರೀನಿವಾಸ ಕಾರ್ಕಾಳ

“ಅನೇಕ ಬಾರಿ ಅಪರಾಧ ಕೃತ್ಯ ನಡೆಯುವ ಬಗ್ಗೆ ಪೊಲೀಸರಿಗೆ ಪೂರ್ವ ಸೂಚನೆ ಇರುವುದಿಲ್ಲ. ಹಾಗಾಗಿ ಅವನ್ನು ಅವರಿಗೆ ತಡೆಯುವುದು ಸುಲಭ ಸಾಧ್ಯದ ಕೆಲಸವಲ್ಲ. ಆದರೆ ಅಪರಾಧ ಕೃತ್ಯ ನಡೆದ ಬಳಿಕ ಪೊಲೀಸರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯ. ಆ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಮತ್ತು ಅವರಿಗೆ exemplary punishment ಆಗುವಂತೆ ಮಾಡುವುದು ಮುಂದೆ ಅಂತಹ ಘಟನೆ ನಡೆಯದಂತೆ ನೋಡಿಕೊಳ್ಳುವ ಪರಿಣಾಮಕಾರಿ ಉಪಾಯ. ಆದರೆ ನಮ್ಮ ಪೊಲೀಸರು ಇಂತಹ ಕ್ರಮ ಜರುಗಿಸದಿರುವುದರಿಂದ, ಅಪರಾಧಿಗಳು ಸುಲಭವಾಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದರಿಂದ ಇವೆಲ್ಲ ಮತ್ತೆ ಮತ್ತೆ ಸಂಭವಿಸುತ್ತವೆ. ಹಾಗಾಗಿ ಇಂದಿನ ಈ ಕೆಟ್ಟ ಪರಿಸ್ಥಿತಿಯ ಹೊಣೆಯನ್ನು ಬಹುಪಾಲು ಪೊಲೀಸರು ಹೊರಬೇಕಾಗುತ್ತದೆ. ಮತ್ತು ಈಗಲೂ ಪೊಲೀಸರ ವರ್ತನೆಯಲ್ಲಿ ಹೆಚ್ಚಿನ ಬದಲಾವಣೆ ಆಗದಿರುವುದರಿಂದ ಇಂತಹ ಘಟನೆ ಮುಂದೆಯೂ ನಡೆಯುತ್ತ ಹೋಗುವುದರಲ್ಲಿ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಇತ್ತೀಚೆಗೆ ಹಲವಾರು ಮೋರಲ್ ಪೊಲೀಸಿಂಗ್ ಪ್ರಕರಣಗಳು ನಡೆಯುತ್ತಿದೆ. ಕಳೆದ ಭಾನುವಾರ ನಡೆದಿದ್ದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದರಾದರೂ, ಠಾಣೆಯಲ್ಲೇ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದರು. ಇದರ ವಿರುದ್ದ ಕೂಡಾ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...