Homeಕರ್ನಾಟಕಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

ಬಜರಂಗದಳದ ‘ಮೋರಲ್ ಪೊಲೀಸಿಂಗ್’ ಅನ್ನು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕಿಗೆ ಬಹಿರಂಗ ಬೆದರಿಕೆ

- Advertisement -
- Advertisement -

ಬಜರಂಗದಳದ ದುಷ್ಕರ್ಮಿಗಳು ನಡೆಸಿರುವ ‘ಮೋರಲ್ ಪೊಲೀಸಿಂಗ್’ ಅನ್ನು ತೀವ್ರವಾಗಿ ಖಂಡಿಸಿದ್ದ ಕಾಂಗ್ರೆಸ್‌ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ, ಸಂದೀಪ್‌ ಎಂಬ ವ್ಯಕ್ತಿಯೊಬ್ಬ ಬಹಿರಂಗವಾಗಿ ಬೆದರಿಕೆ ಹಾಕಿರುವ ಘಟನೆ ಗುರುವಾರ ನಡೆದಿದೆ. ಲಾವಣ್ಯ ಅವರು ಸ್ಥಳೀಯ ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳು, ಇತ್ತೀಚೆಗೆ ಮಂಗಳೂರಿನಲ್ಲಿ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ, ಅವರ ಮೇಲೆ ಹಲ್ಲೆ ನಡೆಸಿ ‘ಮೋರಲ್ ಪೊಲೀಸಿಂಗ್’ ನಡೆಸಿದ್ದರು. ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಲಾವಣ್ಯ ಅವರು, ಬಜರಂಗದಳ ಸಂಘಟನೆಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರಿಗೆ ಭಾರಿ ಬೆಂಬಲ ದೊರಕಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಇದೇ ವಿಚಾರವಾಗಿ ಮಂಗಳೂರಿನ ಸ್ಥಳೀಯ ಟಿವಿ ವಾಹಿನಿಯೊಂದು ‘ದಾದಾಗಿರಿ!?’ ಎಂಬ ಶೀರ್ಷಿಕೆಯ ಅಡಿಯಲ್ಲಿ ಪ್ರೈಮ್ ಟೈಂ ಪ್ಯಾನಲ್ ಚರ್ಚೆಯನ್ನು ಆಯೋಜಿಸಿತ್ತು. ಇದರಲ್ಲಿ ಭಾಗವಹಿಸಿದ್ದ ಲಾವಣ್ಯ ಬಲ್ಲಾಳ್ ಅವರಿಗೆ ಕರೆ ಮಾಡಿದ್ದ ಸಂದೀಪ್ ಎನ್ನುವ ವ್ಯಕ್ತಿಯೊಬ್ಬ, “ನೀವು ಏಸಿ ಕಾರಲ್ಲಿ ಕೂತು ಮಾತನಾಡುತ್ತೀರಿ ಅಲ್ಲವೆ? ನೀವು ಹೊರಗೆ ಬಂದು ಸಾರ್ವಜನಿಕವಾಗಿ ಮಾತನಾಡಿ, ನಾವು ನಿಮಗೆ ಕೂಡಾ ಹಲ್ಲೆ ನಡೆಸುತ್ತೇವೆ” ಎಂದು ಬೆದರಿಕೆ ಹಾಕಿದ್ದಾನೆ.

 

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲಾವಣ್ಯ ಬಲ್ಲಾಳ್, “ಈ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚಿಸಿ, ಚಾನೆಲ್‌ನಲ್ಲಿ ಬೆದರಿಕೆ ಹಾಕಿರುವ ವ್ಯಕ್ತಿಯ ವಿರುದ್ದ ದೂರು ದಾಖಲಿಸಲಿದ್ದೇನೆ. ಕರೆ ಮಾಡಿರುವ ವ್ಯಕ್ತಿಯ ವಿವರಗಳನ್ನು ಚಾನೆಲ್ ಇನ್ನೂ ನೀಡಿಲ್ಲ. ಚಾನೆಲ್‌ ಅನ್ನು ವೇದಿಕೆಯಾಗಿ ವ್ಯಕ್ತಿ ನನಗೆ ಬೆದರಿಕೆ ಹಾಕಿರುವುದರಿಂದ, ವಾಹಿನಿಯನ್ನೂ ದೂರಿನಲ್ಲಿ ಸೇರಿಸಲಿದ್ದೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನೀಡಿರುವ ಚಿಂತಕ ಶ್ರೀನಿವಾಸ ಕಾರ್ಕಾಳ, “ಸರಕಾರಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡದಿದ್ದಾಗ, ಕಾನೂನು ನಿಯಮ ಮತ್ತು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳದಿದ್ದಾಗ ಒಟ್ಟು ಆಡಳಿತ ವ್ಯವಸ್ಥೆ ಕುಸಿದುಬೀಳುತ್ತದೆ. ಆಗ ಇಂಥ ಅನಪೇಕ್ಷಣೀಯ ಘಟನೆಗಳು ಸಂಭವಿಸುತ್ತವೆ. ‘ನಮ್ಮದೇ ಸರಕಾರ, ನಾವು ಏನು ಮಾಡಿದರೂ ನಮಗೆ ನಮ್ಮ ಸರಕಾರದ ರಕ್ಷಣೆ ಇದೆ’ ಎಂಬ ಭರವಸೆ ಮತ್ತು ಧೈರ್ಯ ಇದ್ದಾಗ ಸಮಾಜವಿರೋಧಿ ಶಕ್ತಿಗಳು ಇನ್ನಷ್ಟು ಮತ್ತಷ್ಟು ಉಗ್ರವಾಗುತ್ತವೆ. ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಎಗ್ಗಿಲ್ಲದೆ ಮುಂದುವರಿಸುತ್ತವೆ” ಎಂದು ಹೇಳಿದ್ದಾರೆ.

ಶ್ರೀನಿವಾಸ ಕಾರ್ಕಾಳ
ಶ್ರೀನಿವಾಸ ಕಾರ್ಕಾಳ

“ಅನೇಕ ಬಾರಿ ಅಪರಾಧ ಕೃತ್ಯ ನಡೆಯುವ ಬಗ್ಗೆ ಪೊಲೀಸರಿಗೆ ಪೂರ್ವ ಸೂಚನೆ ಇರುವುದಿಲ್ಲ. ಹಾಗಾಗಿ ಅವನ್ನು ಅವರಿಗೆ ತಡೆಯುವುದು ಸುಲಭ ಸಾಧ್ಯದ ಕೆಲಸವಲ್ಲ. ಆದರೆ ಅಪರಾಧ ಕೃತ್ಯ ನಡೆದ ಬಳಿಕ ಪೊಲೀಸರು ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಮುಖ್ಯ. ಆ ಕೃತ್ಯ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಮತ್ತು ಅವರಿಗೆ exemplary punishment ಆಗುವಂತೆ ಮಾಡುವುದು ಮುಂದೆ ಅಂತಹ ಘಟನೆ ನಡೆಯದಂತೆ ನೋಡಿಕೊಳ್ಳುವ ಪರಿಣಾಮಕಾರಿ ಉಪಾಯ. ಆದರೆ ನಮ್ಮ ಪೊಲೀಸರು ಇಂತಹ ಕ್ರಮ ಜರುಗಿಸದಿರುವುದರಿಂದ, ಅಪರಾಧಿಗಳು ಸುಲಭವಾಗಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದರಿಂದ ಇವೆಲ್ಲ ಮತ್ತೆ ಮತ್ತೆ ಸಂಭವಿಸುತ್ತವೆ. ಹಾಗಾಗಿ ಇಂದಿನ ಈ ಕೆಟ್ಟ ಪರಿಸ್ಥಿತಿಯ ಹೊಣೆಯನ್ನು ಬಹುಪಾಲು ಪೊಲೀಸರು ಹೊರಬೇಕಾಗುತ್ತದೆ. ಮತ್ತು ಈಗಲೂ ಪೊಲೀಸರ ವರ್ತನೆಯಲ್ಲಿ ಹೆಚ್ಚಿನ ಬದಲಾವಣೆ ಆಗದಿರುವುದರಿಂದ ಇಂತಹ ಘಟನೆ ಮುಂದೆಯೂ ನಡೆಯುತ್ತ ಹೋಗುವುದರಲ್ಲಿ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಇತ್ತೀಚೆಗೆ ಹಲವಾರು ಮೋರಲ್ ಪೊಲೀಸಿಂಗ್ ಪ್ರಕರಣಗಳು ನಡೆಯುತ್ತಿದೆ. ಕಳೆದ ಭಾನುವಾರ ನಡೆದಿದ್ದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದರಾದರೂ, ಠಾಣೆಯಲ್ಲೇ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಿದ್ದರು. ಇದರ ವಿರುದ್ದ ಕೂಡಾ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...