Homeಮುಖಪುಟಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಚುನಾವಣಾ ಘೋಷವಾಕ್ಯವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

- Advertisement -
- Advertisement -

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆದ್ದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಅದಕ್ಕಾಗಿ ನಡೆಯುತ್ತಿರುವ ಹಲವಾರು ರ್‍ಯಾಲಿಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಉತ್ತರ ಪ್ರದೇಶದ ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಅವರು 40% ಮಹಿಳೆಯರಿಗೆ ಟಿಕೆಟ್‌ ನೀಡುವುದಾಗಿ, 40% ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೇರಿದಂತೆ ಹಲವು ಮಹಿಳಾ ಪರ ಭರವಸೆಗಳನ್ನು ನೀಡಿದ್ದಾರೆ. ಅಲ್ಲದೆ ‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಚುನಾವಣಾ ಘೋಷವಾಕ್ಯವನ್ನು ಬಿಡುಗಡೆ ಮಾಡಿರುವ ಅವರು ಇಡೀ ಉತ್ತರ ಪ್ರದೇಶ ಚುನಾವಣೆಯನ್ನು ಮಹಿಳಾ ಕೇಂದ್ರಿತವನ್ನಾಗಿ ಮಾಡಲು ಮುಂದಾಗಿದ್ದಾರೆ. ಇವೆಲ್ಲವೂ ಕಾಂಗ್ರೆಸ್‌ನಿಂದ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎಂಬ ಚರ್ಚೆಗೆ ಇಂಬು ಕೊಟ್ಟಿವೆ.

ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡು ವಿಪಕ್ಷದಲ್ಲಿರುವ ಕಾಂಗ್ರೆಸ್‌‌ಗೆ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಮಣಿಸಲು ಸಾಧ್ಯವಾಗಲಿದೆಯೆ ಎಂಬುದಕ್ಕೆ ಉತ್ತರ ಪ್ರದೇಶ ಚುನಾವಣೆ ಸುಳಿವು ನೀಡಲಿದೆ. 2019 ರ ಸಾರ್ವತ್ರಿಕ ಚುನಾವಣೆಯ ಸೋಲಿನ ನಂತರ ಕಾಂಗ್ರೆಸ್‌‌ ಅಷ್ಟೇನೂ ಸಾಧಿಸಿಲ್ಲ. ಹಲವು ರಾಜ್ಯಗಳಲ್ಲಿ ಅಧಿಕಾರದ ಹತ್ತಿರಕ್ಕೆ ಬಂದರೂ ಬಿಜೆಪಿಯ ಆಪರೇಷನ್‌ ಕಮಲದೊಂದಿಗೆ ಸ್ಪರ್ಧಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ಪಕ್ಷವು ಈಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿದೆ. ಪಕ್ಷ ತನ್ನ ಹಳೆಯ ಶೈಲಿಯಲ್ಲಿಯೇ ಇದೆ ಎಂಬ ಟೀಕೆ ಈಗಲೂ ಚಾಲ್ತಿಯಲ್ಲಿದ್ದು, ಪಕ್ಷ ಗಾಂಧಿ ಕುಟುಂಬವನ್ನೇ ನಂಬಿಕೊಂಡಿದೆ ಎಂಬುವುದನ್ನು ‘ಇಲ್ಲ’ ಎಂದು ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ ಮಹಿಳೆಯರಿಗೆ: ಪ್ರಿಯಾಂಕಾ ಗಾಂಧಿ

ತನ್ನ ಜಾತ್ಯತೀತ ಪರಂಪರೆಯೊಂದಿಗೆ, ಎಲ್ಲರನ್ನೂ ಒಳಗೊಳ್ಳುವ ರಾಷ್ಟ್ರೀಯ ಪಕ್ಷವೆಂದು ಕಾಂಗ್ರೆಸ್‌ ಬಿಂಬಿಸಿಕೊಳ್ಳುತ್ತಿದೆ. ಉತ್ತರ ಪ್ರದೇಶದ ಸಂದರ್ಭದಲ್ಲಿ ಹೇಳುವುದಾದರೆ, 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ನೇತೃತ್ವವು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ. ಜೊತೆಗೆ ಪ್ರಧಾನಿ ಮೋದಿಯ ಕಟ್ಟರ್‌‌ ಹಿಂದೂಗಳಿಗೆ ಪರ್ಯಾಯವಾಗಿ ಬೇರೆಯೇ ರೀತಿಯ ಕಾರ್ಯಸೂಚಿಯನ್ನು ಪ್ರಸ್ತುತ ಪಡಿಸುತ್ತದೆ.

 

ಮಹಿಳೆಯರ ವಿರುದ್ಧ ನಡೆಯುವ ಹಿಂಸಾಚಾರವು ಭಾರತದಾದ್ಯಂತ ಅದರಲ್ಲೂ ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಮತದಾರರನ್ನು ಎಚ್ಚರಿಸಲಾಗುತ್ತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಅತಿ ಹೆಚ್ಚು ಲಿಂಗ ಅಪರಾಧಗಳನ್ನು ಎದುರಿಸುತ್ತಿರುವ ರಾಜ್ಯವಾಗಿದೆ ಉತ್ತರ ಪ್ರದೇಶ. ಹೀಗಾಗಿ ಪ್ರಿಯಾಂಕಾ ಗಾಂಧಿ ಮಹಿಳೆಯರ ಪರವಾಗಿ ಬದಲಾವಣೆಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

“ನಾನು ಮಹಿಳೆಯರಿಗಾಗಿ ಹೋರಾಡುತ್ತೇನೆ, ಕಾಂಗ್ರೆಸ್ ಪಕ್ಷವು ಅವರಿಗಾಗಿ ಹೋರಾಡುತ್ತದೆ ಎಂದು ನಾನು ಮಹಿಳೆಯರಿಗೆ ಹೇಳಲು ಬಯಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಕಳೆದ ಭಾನುವಾರದಂದು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸ್ವಕ್ಷೇತ್ರದಲ್ಲಿ ಗೋರಖ್‌ಪುರದಲ್ಲಿ ಘೋಷಿಸಿದ್ದರು.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಮಹಿಳೆಯರ ವಿರುದ್ದದ ದೌರ್ಜನ್ಯ, ಕೊರೊನಾ ಸಾಂಕ್ರಮಿಕವನ್ನು ಕೆಟ್ಟದಾಗಿ ನಿರ್ವಹಣೆ ಮಾಡಿದ್ದಕ್ಕಾಗಿ ಭಾರಿ ಟೀಕೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಪಶ್ಚಿಮ ಯುಪಿಯಲ್ಲಿ ಪ್ರಧಾನಿ ಮೋದಿಯವರು ಜಾರಿಗೆ ತಂದಿರು ಕೃಷಿ ಕಾನೂನಗಳ ವಿರುದ್ಧ ರೈತರು ಸಿಡಿದಿದ್ದಿದ್ದಾರೆ. ರೈತರ ಪ್ರತಿಭಟನೆಯ ಕಾವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಭಾನುವಾರ ಗೋರಖ್‌ಪುರದಲ್ಲಿನ ರ್‍ಯಾಲಿಯಲ್ಲಿ ಸುಮಾರು 40,000 ಜನರು ಭಾಗವಹಿಸಿದ್ದರೆ ಅದರಲ್ಲಿ ಕಾಲು ಭಾಗದಷ್ಟು ಜನರು ಮಹಿಳೆಯರೇ ಭಾಗವಹಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಬೇರೆಲ್ಲಾ ರ್ಯಾಲಿಗಳಿಗಿಂತ ಹೆಚ್ಚು ಮಹಿಳೆಯರು ಭಾಗವಹಿಸಿದ ರ್ಯಾಲಿ ಎನ್ನಲಾಗುತ್ತಿದೆ. ಇದು ಯುಪಿಯ ಮಹಿಳೆಯರು ಕಾಂಗ್ರೆಸ್‌ ಪರವಾಗಿ ಒಲವು ತೋರುತ್ತಿದ್ದಾರೆ ಎಂಬ ಸೂಚನೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. “ಜನರು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಅನ್ನು ಭರವಸೆಯಿಂದ ನೋಡಲಾರಂಭಿಸಿದ್ದಾರೆ, ಪಕ್ಷವು ಮಹಿಳೆಯರೊಂದಿಗೆ ನಿಲ್ಲಲಿದ್ದು, ಅವರ ಧ್ವನಿಯಾಗುತ್ತದೆ” ಎಂದು ರ್‍ಯಾಲಿಯಲ್ಲಿ ಪಕ್ಷದ ಮತ್ತೊಬ್ಬ ನಾಯಕಿ ಸುನೀತಾ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಜನರಿಗೆ ತೊಂದರೆ ಕೊಡುವಲ್ಲಿ ಮೋದಿ ಸರ್ಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ

ರಾಜ್ಯದ 403 ವಿಧಾನಸಭಾ ಕ್ಷೇತ್ರಗಳಲ್ಲಿ 40% ರಷ್ಟು ಮಹಿಳೆಯರನ್ನು ಕಣಕ್ಕಿಳಿಸುವ ಕಾಂಗ್ರೆಸ್‌ನ ವಾಗ್ದಾನವನ್ನು ಮತದಾರರು ಸ್ವಾಗತಿಸಿದ್ದಾರೆ ಎಂದು ಹೇಳಿದ್ದಾರೆ. ಅವರೇ ಹೇಳುವಂತೆ ಕಳೆದ ಕೆಲವು ದಿನಗಳಲ್ಲಿ 50 ಮಹಿಳೆಯರನ್ನು ಪಕ್ಷದ ಕಾರ್ಯಕರ್ತರಾಗಿ ಮಾಡಿದ್ದಾರೆ.

ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಸ್ಮಾರ್ಟ್‌ಫೋನ್‌ಗಳು, ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಉಚಿತ ಅಡುಗೆ-ಗ್ಯಾಸ್ ಸಿಲಿಂಡರ್‌ಗಳು ಮತ್ತು ಲಿಂಗ ಆಧಾರಿತ ಉದ್ಯೋಗ ಮೀಸಲಾತಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್‌ ಈಗಾಗಲೆ ಭರವಸೆ ನೀಡಿದೆ.

ಪಕ್ಷದೊಳಗಿನ ಸಮಸ್ಯೆಯೇನು?

ಈ ಎಲ್ಲದರ ನಡುವೆಯು ಉತ್ತರ ಪ್ರದೇಶದ ಕಾಂಗ್ರೆಸ್ ಆಂತರಿಕ ಸಮಸ್ಯೆಗಳ ಸರಣಿಯಿಂದ ಬಳಲುತ್ತಿದೆ. ಇದರ ಛಾಯೆ ರಾಷ್ಟ್ರೀಯ ಮಟ್ಟದಲ್ಲೂ ಕಾಣುತ್ತಿದೆ. ಸ್ಥಾನಕ್ಕಾಗಿ ಪೈಪೋಟಿ, ಅಸಮಾಧಾನ, ಹಿರಿಯ ಸದಸ್ಯರ ರಾಜೀನಾಮೆಯ ನಡುವೆಯೂ ಪ್ರಿಯಾಂಕಾ ಗಾಂಧಿ ತನ್ನ ಛಾಪನ್ನು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

“ರಾಜ್ಯ ನಾಯಕತ್ವವು ಕೇವಲ ಹೊಗಳುಭಟ್ಟರ ಮಾತುಗಳನ್ನು ಕೇಳುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಪಕ್ಷದಲ್ಲಿ ಅಂತಹವರ ಸಂಖ್ಯೆ ಹೆಚ್ಚಾಗಿದೆ” ಎಂದು ಇತ್ತೀಚೆಗೆ ಪಕ್ಷವನ್ನು ತೊರೆದ ಗೋರಖ್‌ಪುರದ ಮಾಜಿ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ರಾಣಾ ರಾಹುಲ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಈ ಎಲ್ಲದರ ಮಧ್ಯೆ ಪಕ್ಷದ ಮರುಸಂಘಟನೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರರಾದ ಸುಪ್ರಿಯಾ ಹೇಳಿದ್ದಾರೆ. “ಬದಲಾವಣೆಗಳು ಕಷ್ಟಕರವೇ ಆಗಿದ್ದರೂ, ಅವು ಒಳ್ಳೆಯದೇ ಆಗಿದೆ. ಇದು ದೀರ್ಘಾವಧಿಯಲ್ಲಿ ಕೆಲಸ ಮಾಡಲಿವೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣಾ ಏಜೆನ್ಸಿ ಸಿವೋಟರ್‌ನ ಇತ್ತೀಚಿನ ಸಮೀಕ್ಷೆಯು, 403 ಕ್ಷೇತ್ರಗಳಲ್ಲಿ ಬಿಜೆಪಿಯು 240 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದರೊಂದಿಗೆ ರಾಜ್ಯದ ಚುನಾವಣೆಯನ್ನು ಸುಲಭವಾಗಿ ಗೆಲ್ಲುತ್ತದೆ ಎಂದು ಅಂದಾಜಿಸಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಕೇವಲ ಮೂರರಿಂದ ಏಳು ಕ್ಷೇತ್ರಗಳನ್ನು ಮಾತ್ರ ಪಡೆಯಲಿದ್ದು, ಪಕ್ಷ ನಾಲ್ಕನೇ ಸ್ಥಾನವನ್ನಷ್ಟೇ ಗಳಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ ಗಾಂಧಿ

ಕಳೆದ 2017 ರ ರಾಜ್ಯ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ 114 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆದ್ದುಕೊಂಡಿದ್ದರೆ, ಬಿಜೆಪಿ 312ರಲ್ಲಿ ಗೆದ್ದಿತ್ತು.

ಭಾರತದಾದ್ಯಂತ ಮಹಿಳಾ ಮತದಾರರ ಪ್ರಮಾಣವು ಸ್ಥಿರವಾಗಿ ಹೆಚ್ಚುತ್ತಿದೆ ಮತ್ತು ಕೆಲವು ರಾಜ್ಯಗಳಲ್ಲಿ ಈಗ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿ ಮತ ಚಲಾಯಿಸುತ್ತಿದ್ದಾರೆ ಎಂದು ನವದೆಹಲಿಯ ಅಭಿವೃದ್ಧಿಶೀಲ ಸಮಾಜಗಳ ಅಧ್ಯಯನ ಕೇಂದ್ರದ ಪ್ರವೀಣ್ ರಾಯ್ ಹೇಳಿದ್ದಾರೆ.

“ಮಹಿಳೆಯರ ಮತಗಳು ಕಾಂಗ್ರೆಸ್‌ಗೆ ಹೆಚ್ಚು ಗೆಲುವಿನ ಕ್ಷೇತ್ರಗಳಾಗಿ ಪರಿವರ್ತನೆಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಊಹಿಸಲು ಸ್ವಲ್ಪ ಕಷ್ಟ. ಆದರೆ ಪಕ್ಷವು ರಾಜ್ಯದಲ್ಲಿ ಎದ್ದೇಳಲು ಮತ್ತು ಕೆಲವು ರಾಜಕೀಯ ವಲಯವನ್ನು ಸೃಷ್ಟಿಸಲು ಇದು ಸರಿಯಾದ ತಂತ್ರ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಪ್ರವೀಣ್‌ ರಾಯ್ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಮಹಿಳೆಯರಿಗೆ ಮತ್ತೇ ಭರ್ಜರಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ

ಇನ್‌ಪುಟ್‌: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....