Homeಮುಖಪುಟಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಚುನಾವಣಾ ಘೋಷವಾಕ್ಯವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

- Advertisement -
- Advertisement -

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಶತಾಯಗತಾಯ ಗೆದ್ದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಅದಕ್ಕಾಗಿ ನಡೆಯುತ್ತಿರುವ ಹಲವಾರು ರ್‍ಯಾಲಿಗಳಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಉತ್ತರ ಪ್ರದೇಶದ ಮಹಿಳಾ ಮತದಾರರ ಮೇಲೆ ಕಣ್ಣಿಟ್ಟಿರುವ ಅವರು 40% ಮಹಿಳೆಯರಿಗೆ ಟಿಕೆಟ್‌ ನೀಡುವುದಾಗಿ, 40% ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಸೇರಿದಂತೆ ಹಲವು ಮಹಿಳಾ ಪರ ಭರವಸೆಗಳನ್ನು ನೀಡಿದ್ದಾರೆ. ಅಲ್ಲದೆ ‘ನಾನು ಮಹಿಳೆ, ನಾನು ಹೋರಾಡಬಲ್ಲೆ’ ಎಂಬ ಚುನಾವಣಾ ಘೋಷವಾಕ್ಯವನ್ನು ಬಿಡುಗಡೆ ಮಾಡಿರುವ ಅವರು ಇಡೀ ಉತ್ತರ ಪ್ರದೇಶ ಚುನಾವಣೆಯನ್ನು ಮಹಿಳಾ ಕೇಂದ್ರಿತವನ್ನಾಗಿ ಮಾಡಲು ಮುಂದಾಗಿದ್ದಾರೆ. ಇವೆಲ್ಲವೂ ಕಾಂಗ್ರೆಸ್‌ನಿಂದ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಬಹುದು ಎಂಬ ಚರ್ಚೆಗೆ ಇಂಬು ಕೊಟ್ಟಿವೆ.

ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡು ವಿಪಕ್ಷದಲ್ಲಿರುವ ಕಾಂಗ್ರೆಸ್‌‌ಗೆ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಮಣಿಸಲು ಸಾಧ್ಯವಾಗಲಿದೆಯೆ ಎಂಬುದಕ್ಕೆ ಉತ್ತರ ಪ್ರದೇಶ ಚುನಾವಣೆ ಸುಳಿವು ನೀಡಲಿದೆ. 2019 ರ ಸಾರ್ವತ್ರಿಕ ಚುನಾವಣೆಯ ಸೋಲಿನ ನಂತರ ಕಾಂಗ್ರೆಸ್‌‌ ಅಷ್ಟೇನೂ ಸಾಧಿಸಿಲ್ಲ. ಹಲವು ರಾಜ್ಯಗಳಲ್ಲಿ ಅಧಿಕಾರದ ಹತ್ತಿರಕ್ಕೆ ಬಂದರೂ ಬಿಜೆಪಿಯ ಆಪರೇಷನ್‌ ಕಮಲದೊಂದಿಗೆ ಸ್ಪರ್ಧಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ. ಪಕ್ಷವು ಈಗ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿದೆ. ಪಕ್ಷ ತನ್ನ ಹಳೆಯ ಶೈಲಿಯಲ್ಲಿಯೇ ಇದೆ ಎಂಬ ಟೀಕೆ ಈಗಲೂ ಚಾಲ್ತಿಯಲ್ಲಿದ್ದು, ಪಕ್ಷ ಗಾಂಧಿ ಕುಟುಂಬವನ್ನೇ ನಂಬಿಕೊಂಡಿದೆ ಎಂಬುವುದನ್ನು ‘ಇಲ್ಲ’ ಎಂದು ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ.

ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ ಮಹಿಳೆಯರಿಗೆ: ಪ್ರಿಯಾಂಕಾ ಗಾಂಧಿ

ತನ್ನ ಜಾತ್ಯತೀತ ಪರಂಪರೆಯೊಂದಿಗೆ, ಎಲ್ಲರನ್ನೂ ಒಳಗೊಳ್ಳುವ ರಾಷ್ಟ್ರೀಯ ಪಕ್ಷವೆಂದು ಕಾಂಗ್ರೆಸ್‌ ಬಿಂಬಿಸಿಕೊಳ್ಳುತ್ತಿದೆ. ಉತ್ತರ ಪ್ರದೇಶದ ಸಂದರ್ಭದಲ್ಲಿ ಹೇಳುವುದಾದರೆ, 2019 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ ನೇತೃತ್ವವು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ. ಜೊತೆಗೆ ಪ್ರಧಾನಿ ಮೋದಿಯ ಕಟ್ಟರ್‌‌ ಹಿಂದೂಗಳಿಗೆ ಪರ್ಯಾಯವಾಗಿ ಬೇರೆಯೇ ರೀತಿಯ ಕಾರ್ಯಸೂಚಿಯನ್ನು ಪ್ರಸ್ತುತ ಪಡಿಸುತ್ತದೆ.

 

ಮಹಿಳೆಯರ ವಿರುದ್ಧ ನಡೆಯುವ ಹಿಂಸಾಚಾರವು ಭಾರತದಾದ್ಯಂತ ಅದರಲ್ಲೂ ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಮತದಾರರನ್ನು ಎಚ್ಚರಿಸಲಾಗುತ್ತಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಅತಿ ಹೆಚ್ಚು ಲಿಂಗ ಅಪರಾಧಗಳನ್ನು ಎದುರಿಸುತ್ತಿರುವ ರಾಜ್ಯವಾಗಿದೆ ಉತ್ತರ ಪ್ರದೇಶ. ಹೀಗಾಗಿ ಪ್ರಿಯಾಂಕಾ ಗಾಂಧಿ ಮಹಿಳೆಯರ ಪರವಾಗಿ ಬದಲಾವಣೆಯ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

“ನಾನು ಮಹಿಳೆಯರಿಗಾಗಿ ಹೋರಾಡುತ್ತೇನೆ, ಕಾಂಗ್ರೆಸ್ ಪಕ್ಷವು ಅವರಿಗಾಗಿ ಹೋರಾಡುತ್ತದೆ ಎಂದು ನಾನು ಮಹಿಳೆಯರಿಗೆ ಹೇಳಲು ಬಯಸುತ್ತೇನೆ” ಎಂದು ಪ್ರಿಯಾಂಕಾ ಗಾಂಧಿ ಕಳೆದ ಭಾನುವಾರದಂದು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಸ್ವಕ್ಷೇತ್ರದಲ್ಲಿ ಗೋರಖ್‌ಪುರದಲ್ಲಿ ಘೋಷಿಸಿದ್ದರು.

ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಮಹಿಳೆಯರ ವಿರುದ್ದದ ದೌರ್ಜನ್ಯ, ಕೊರೊನಾ ಸಾಂಕ್ರಮಿಕವನ್ನು ಕೆಟ್ಟದಾಗಿ ನಿರ್ವಹಣೆ ಮಾಡಿದ್ದಕ್ಕಾಗಿ ಭಾರಿ ಟೀಕೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಪಶ್ಚಿಮ ಯುಪಿಯಲ್ಲಿ ಪ್ರಧಾನಿ ಮೋದಿಯವರು ಜಾರಿಗೆ ತಂದಿರು ಕೃಷಿ ಕಾನೂನಗಳ ವಿರುದ್ಧ ರೈತರು ಸಿಡಿದಿದ್ದಿದ್ದಾರೆ. ರೈತರ ಪ್ರತಿಭಟನೆಯ ಕಾವು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಭಾನುವಾರ ಗೋರಖ್‌ಪುರದಲ್ಲಿನ ರ್‍ಯಾಲಿಯಲ್ಲಿ ಸುಮಾರು 40,000 ಜನರು ಭಾಗವಹಿಸಿದ್ದರೆ ಅದರಲ್ಲಿ ಕಾಲು ಭಾಗದಷ್ಟು ಜನರು ಮಹಿಳೆಯರೇ ಭಾಗವಹಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಬೇರೆಲ್ಲಾ ರ್ಯಾಲಿಗಳಿಗಿಂತ ಹೆಚ್ಚು ಮಹಿಳೆಯರು ಭಾಗವಹಿಸಿದ ರ್ಯಾಲಿ ಎನ್ನಲಾಗುತ್ತಿದೆ. ಇದು ಯುಪಿಯ ಮಹಿಳೆಯರು ಕಾಂಗ್ರೆಸ್‌ ಪರವಾಗಿ ಒಲವು ತೋರುತ್ತಿದ್ದಾರೆ ಎಂಬ ಸೂಚನೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. “ಜನರು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಅನ್ನು ಭರವಸೆಯಿಂದ ನೋಡಲಾರಂಭಿಸಿದ್ದಾರೆ, ಪಕ್ಷವು ಮಹಿಳೆಯರೊಂದಿಗೆ ನಿಲ್ಲಲಿದ್ದು, ಅವರ ಧ್ವನಿಯಾಗುತ್ತದೆ” ಎಂದು ರ್‍ಯಾಲಿಯಲ್ಲಿ ಪಕ್ಷದ ಮತ್ತೊಬ್ಬ ನಾಯಕಿ ಸುನೀತಾ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಜನರಿಗೆ ತೊಂದರೆ ಕೊಡುವಲ್ಲಿ ಮೋದಿ ಸರ್ಕಾರ ದಾಖಲೆ ಸೃಷ್ಟಿಸಿದೆ: ಪ್ರಿಯಾಂಕಾ ಗಾಂಧಿ

ರಾಜ್ಯದ 403 ವಿಧಾನಸಭಾ ಕ್ಷೇತ್ರಗಳಲ್ಲಿ 40% ರಷ್ಟು ಮಹಿಳೆಯರನ್ನು ಕಣಕ್ಕಿಳಿಸುವ ಕಾಂಗ್ರೆಸ್‌ನ ವಾಗ್ದಾನವನ್ನು ಮತದಾರರು ಸ್ವಾಗತಿಸಿದ್ದಾರೆ ಎಂದು ಹೇಳಿದ್ದಾರೆ. ಅವರೇ ಹೇಳುವಂತೆ ಕಳೆದ ಕೆಲವು ದಿನಗಳಲ್ಲಿ 50 ಮಹಿಳೆಯರನ್ನು ಪಕ್ಷದ ಕಾರ್ಯಕರ್ತರಾಗಿ ಮಾಡಿದ್ದಾರೆ.

ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಸ್ಮಾರ್ಟ್‌ಫೋನ್‌ಗಳು, ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಮೂರು ಉಚಿತ ಅಡುಗೆ-ಗ್ಯಾಸ್ ಸಿಲಿಂಡರ್‌ಗಳು ಮತ್ತು ಲಿಂಗ ಆಧಾರಿತ ಉದ್ಯೋಗ ಮೀಸಲಾತಿಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್‌ ಈಗಾಗಲೆ ಭರವಸೆ ನೀಡಿದೆ.

ಪಕ್ಷದೊಳಗಿನ ಸಮಸ್ಯೆಯೇನು?

ಈ ಎಲ್ಲದರ ನಡುವೆಯು ಉತ್ತರ ಪ್ರದೇಶದ ಕಾಂಗ್ರೆಸ್ ಆಂತರಿಕ ಸಮಸ್ಯೆಗಳ ಸರಣಿಯಿಂದ ಬಳಲುತ್ತಿದೆ. ಇದರ ಛಾಯೆ ರಾಷ್ಟ್ರೀಯ ಮಟ್ಟದಲ್ಲೂ ಕಾಣುತ್ತಿದೆ. ಸ್ಥಾನಕ್ಕಾಗಿ ಪೈಪೋಟಿ, ಅಸಮಾಧಾನ, ಹಿರಿಯ ಸದಸ್ಯರ ರಾಜೀನಾಮೆಯ ನಡುವೆಯೂ ಪ್ರಿಯಾಂಕಾ ಗಾಂಧಿ ತನ್ನ ಛಾಪನ್ನು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: 10 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಘೋಷಿಸಿದ ಪ್ರಿಯಾಂಕಾ ಗಾಂಧಿ

“ರಾಜ್ಯ ನಾಯಕತ್ವವು ಕೇವಲ ಹೊಗಳುಭಟ್ಟರ ಮಾತುಗಳನ್ನು ಕೇಳುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಪಕ್ಷದಲ್ಲಿ ಅಂತಹವರ ಸಂಖ್ಯೆ ಹೆಚ್ಚಾಗಿದೆ” ಎಂದು ಇತ್ತೀಚೆಗೆ ಪಕ್ಷವನ್ನು ತೊರೆದ ಗೋರಖ್‌ಪುರದ ಮಾಜಿ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ರಾಣಾ ರಾಹುಲ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ತಳಮಟ್ಟದ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಈ ಎಲ್ಲದರ ಮಧ್ಯೆ ಪಕ್ಷದ ಮರುಸಂಘಟನೆ ನಡೆಯುತ್ತಿದೆ ಎಂದು ಕಾಂಗ್ರೆಸ್‌ ವಕ್ತಾರರಾದ ಸುಪ್ರಿಯಾ ಹೇಳಿದ್ದಾರೆ. “ಬದಲಾವಣೆಗಳು ಕಷ್ಟಕರವೇ ಆಗಿದ್ದರೂ, ಅವು ಒಳ್ಳೆಯದೇ ಆಗಿದೆ. ಇದು ದೀರ್ಘಾವಧಿಯಲ್ಲಿ ಕೆಲಸ ಮಾಡಲಿವೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣಾ ಏಜೆನ್ಸಿ ಸಿವೋಟರ್‌ನ ಇತ್ತೀಚಿನ ಸಮೀಕ್ಷೆಯು, 403 ಕ್ಷೇತ್ರಗಳಲ್ಲಿ ಬಿಜೆಪಿಯು 240 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದರೊಂದಿಗೆ ರಾಜ್ಯದ ಚುನಾವಣೆಯನ್ನು ಸುಲಭವಾಗಿ ಗೆಲ್ಲುತ್ತದೆ ಎಂದು ಅಂದಾಜಿಸಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಕೇವಲ ಮೂರರಿಂದ ಏಳು ಕ್ಷೇತ್ರಗಳನ್ನು ಮಾತ್ರ ಪಡೆಯಲಿದ್ದು, ಪಕ್ಷ ನಾಲ್ಕನೇ ಸ್ಥಾನವನ್ನಷ್ಟೇ ಗಳಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿಯಲ್ಲಿ ಪಕ್ಷ ಅಧಿಕಾರಕ್ಕೇರಿದರೆ 10 ಲಕ್ಷ ರೂ. ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ: ಪ್ರಿಯಾಂಕಾ ಗಾಂಧಿ

ಕಳೆದ 2017 ರ ರಾಜ್ಯ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಸ್ಪರ್ಧಿಸಿದ್ದ ಕಾಂಗ್ರೆಸ್ 114 ಸ್ಥಾನಗಳಲ್ಲಿ ಏಳನ್ನು ಮಾತ್ರ ಗೆದ್ದುಕೊಂಡಿದ್ದರೆ, ಬಿಜೆಪಿ 312ರಲ್ಲಿ ಗೆದ್ದಿತ್ತು.

ಭಾರತದಾದ್ಯಂತ ಮಹಿಳಾ ಮತದಾರರ ಪ್ರಮಾಣವು ಸ್ಥಿರವಾಗಿ ಹೆಚ್ಚುತ್ತಿದೆ ಮತ್ತು ಕೆಲವು ರಾಜ್ಯಗಳಲ್ಲಿ ಈಗ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿ ಮತ ಚಲಾಯಿಸುತ್ತಿದ್ದಾರೆ ಎಂದು ನವದೆಹಲಿಯ ಅಭಿವೃದ್ಧಿಶೀಲ ಸಮಾಜಗಳ ಅಧ್ಯಯನ ಕೇಂದ್ರದ ಪ್ರವೀಣ್ ರಾಯ್ ಹೇಳಿದ್ದಾರೆ.

“ಮಹಿಳೆಯರ ಮತಗಳು ಕಾಂಗ್ರೆಸ್‌ಗೆ ಹೆಚ್ಚು ಗೆಲುವಿನ ಕ್ಷೇತ್ರಗಳಾಗಿ ಪರಿವರ್ತನೆಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಊಹಿಸಲು ಸ್ವಲ್ಪ ಕಷ್ಟ. ಆದರೆ ಪಕ್ಷವು ರಾಜ್ಯದಲ್ಲಿ ಎದ್ದೇಳಲು ಮತ್ತು ಕೆಲವು ರಾಜಕೀಯ ವಲಯವನ್ನು ಸೃಷ್ಟಿಸಲು ಇದು ಸರಿಯಾದ ತಂತ್ರ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಪ್ರವೀಣ್‌ ರಾಯ್ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಮಹಿಳೆಯರಿಗೆ ಮತ್ತೇ ಭರ್ಜರಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ

ಇನ್‌ಪುಟ್‌: ಎನ್‌ಡಿಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...