Homeಕರ್ನಾಟಕಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

- Advertisement -
- Advertisement -

ಉಡುಪಿಯ ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್‌ ಎಂಬುವವರ ಮೇಲೆ ಕಾರ್ಕಾಳ ನಗರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಮಧು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ.

ವರ್ಷಗಳ ಹಿಂದೆ ರಾಧಾಕೃಷ್ಟ ಹಿರ್ಗಾನ ಎಂಬ ಹೆಸರಿನ ಫೇಸ್‌‌ಬುಕ್ ಖಾತೆಯಿಂದ ಸೈನಿಕರನ್ನು ಅವಮಾನಿಸುವ ಪೋಸ್ಟ್‌ ಒಂದು ಮಾಡಲಾಗಿತ್ತು. ಹೀಗಾಗಿ ರಾಧಾಕೃಷ್ಣ ನಾಯಕ್ ಅವರ ವಿರುದ್ದ ಬೆಂಗಳೂರು ಮತ್ತು ಕಾರ್ಕಾಳದಲ್ಲಿ ಪ್ರಕರಣದ ದಾಖಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕಾರ್ಕಾಳ ಪೊಲೀಸರು ಅವರನ್ನು ಗುರುವಾರ ಠಾಣೆಗೆ ಕರೆಸಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಧು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ರಾಧಾಕೃಷ್ಣ, ಪ್ರಕರಣ ದಾಖಲಾಗಿದ್ದ ಬೆಂಗಳೂರಿನ ಠಾಣೆಗೆ ತೆರಳಿ ವಿವಾದಿತ ಖಾತೆಯು ತನ್ನದಲ್ಲ ಎಂದು ಸಮಜಾಯಿಷಿ ನೀಡಿದ್ದರು ಹಾಗೂ ಅವರಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರು ಎಂದು ಕಾಂಗ್ರೆಸ್ ಕಾರ್ಯಕರ್ತ ಜ್ಞಾನಿ ತಾವರೆಕೆರೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

“ರಾಧಾಕೃಷ್ಣ ಅವರಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು, ಇತ್ತೀಚೆಗಷ್ಟೆ ಸ್ಟಂಟ್ ಹಾಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಈ ಹಿಂದೆಯೆ ಬೆಂಗಳೂರಿನ ಠಾಣೆಗೆ ತೆರಳಿ ಪೊಲೀಸರಿಂದ ಕ್ಲೀನ್ ಚಿಟ್ ಪಡೆದಿದ್ದರು. ಆದರೆ ಗುರುವಾರ ಪ್ರಕರಣ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಿದ್ದ ಕಾರ್ಕಳ ಇನ್ಸ್‌ಪೆಕ್ಟರ್‌ ಮಧು ಅವರು ಬಿಜೆಪಿ ನಾಯಕರ ಸಮ್ಮುಖದಲ್ಲಿ ರಾಧಾಕೃಷ್ಣ ಅವರ ಎದೆ ಮತ್ತು ಹೊಟ್ಟೆಗೆ ಹಲ್ಲೆ ನಡೆಸಿದ್ದಾರೆ” ಎಂದು ಜ್ಞಾನಿ ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಯುವ ನಾಯಕ ರಕ್ಷಾ ರಾಮಯ್ಯ, ಮಿಥುನ್ ರೈ ಸೇರಿದಂತೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು ಕಾರ್ಕಾಳ ಇನ್ಸ್‌ಪೆಕ್ಟರ್‌ ಮಧುವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ‌ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು” ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಕೂಡಾ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು,“ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಪೊಲೀಸರು ಬಿಜೆಪಿ ನಾಯಕರ ಅಣತಿಯಂತೆ ಕೆಲಸ ಮಾಡುತ್ತಿರುವುದು ಸ್ಪಷ್ಟ. ಬಿಜೆಪಿ ಕುಮ್ಮಕ್ಕಿನಿಂದ ಕಾರ್ಕಳದ ನಮ್ಮ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಅನಾರೋಗ್ಯವನ್ನೂ ಲೆಕ್ಕಿಸದೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪೊಲೀಸರನ್ನು ಕೊಡಲೇ ಅಮಾನತುಗೊಳಿಸಬೇಕೆಂದು ಆಗ್ರಹಿಸುತ್ತೇವೆ” ಎಂದು ಹೇಳಿದೆ.

ಇದನ್ನೂ ಓದಿ: ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ

ತಮ್ಮ ಮೇಲಿನ ಆರೋಪವನ್ನು ಕಾರ್ಕಾಳ ನಗರ ಠಾಣೆಯ ಇನ್ಸ್‌ಪೆಕ್ಟರ್‌ ಮಧು ನಿರಾಕರಿಸಿದ್ದು, ಠಾಣೆಗೆ ಕರೆದು ವಿಚಾರಣೆ ನಡೆಸಿದ್ದೇವೆ ಅಷ್ಟೇ ಹಲ್ಲೆ ನಡೆಸಿಲ್ಲ ಎಂದಿದ್ದಾರೆ. ಅದೇ ಕಾರಣಕ್ಕೆ, ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

“ಭಾರತೀಯ ಸೈನಿಕರನ್ನು ಅವಹೇಳನ ಮಾಡಿದ್ದರ ಕುರಿತು ಅವರ ವಿರುದ್ದ ಎಂಟು ತಿಂಗಳ ಹಿಂದೆ ಕಾರ್ಕಾಳದ ಸಂದೀಪ್ ಎಂಬವರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಕುರಿತು ತನಿಖೆಗಾಗಿ ಠಾಣೆಗೆ ಕರೆಸಿದ್ದು ಹೌದು. ಅವರ ಮೇಲೆ ಯಾವುದೆ ಹಲ್ಲೆಯಾಗಿಲ್ಲ, ಅವರನ್ನು ನಾವು ವೈದ್ಯಕೀಯ ತಪಾಸಣೆ ಮಾಡಿಯೆ ಕಳುಹಿಸಿದ್ದೇವೆ. ವೈದ್ಯಕೀಯ ತಪಾಸಣೆಯ ಸಮಯದಲ್ಲಿ ತನ್ನ ಮೇಲೆ ಯಾವುದೆ ಹಲ್ಲೆ ಆಗಿಲ್ಲ ಎಂದು ಸ್ವತಃ ಅವರೆ ಹೇಳಿಕೆ ನೀಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಮಧು ನಾನುಗೌರಿ.ಕಾಂ ಗೆ ಹೇಳಿದ್ದಾರೆ.

ಠಾಣೆಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲೇ ಹಲ್ಲೆ ನಡೆಸಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ಇದು ಸತ್ಯಕ್ಕೆ ದೂರವಾದ ಮಾತು. ಠಾಣೆಗೆ ತುಂಬಾ ಜನರು ಬರುತ್ತಾರೆ, ಅವರೆಲ್ಲಾ ಬಿಜೆಪಿಯೊ, ಕಾಂಗ್ರೆಸ್ಸೋ ಎಂದು ನಮಗೆ ತಿಳಿದಿಲ್ಲ. ನಾವು ಈ ಯಾರ ಮುಂದೆಯು ಅವರನ್ನು ವಿಚಾರಣೆ ನಡೆಸಲಿಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹಲ್ಲೆ ಕಂಡನಾರ್ಹ. ಹಲ್ಲೆ ಮಾಡಿರುವ ಪಿ.ಎಸ್.ಐ.ಗೆ ಸೂಕ್ತ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...