Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...