Homeಮುಖಪುಟಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

ಸೂಟ್‌ ಕೇಸ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಶವ ಪತ್ತೆ ಪ್ರಕರಣ : ಫೇಸ್‌ಬುಕ್‌ ಗೆಳೆಯನ ಬಂಧನ

- Advertisement -
- Advertisement -

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಸೋಮವಾರ (ಮಾ.3) ಬಂಧಿಸಿದ್ದಾರೆ.

ಮೃತ ಹಿಮಾನಿ ಅವರ ಫೇಸ್‌ಬುಕ್ ಗೆಳೆಯ, ಹರಿಯಾಣದ ಜಜ್ಜರ್ ಜಿಲ್ಲೆಯ ಕೈಪುರ್ ಗ್ರಾಮದ ಸಚಿನ್ ಅಲಿಯಾಸ್ ಧಿಲ್ಲು (30) ಬಂಧಿತ ವ್ಯಕ್ತಿ.

ಈತ ಕಳೆದ ಒಂದೂವರೆ ವರ್ಷದಿಂದ ಫೇಸ್‌ಬುಕ್ ಮೂಲಕ ಹಿಮಾನಿ ಅವರಿಗೆ ಪರಿಚಯವಿದ್ದ. ಕಳೆದ ಏಳು ತಿಂಗಳಿನಿಂದ ಹರಿಯಾಣದ ರೋಹ್ತಕ್‌ ಜಿಲ್ಲೆಯ ವಿಜಯನಗರದ ಹಿಮಾನಿಯವರ ಮನೆಗೆ ಆಗಾಗ ಭೇಟಿ ನೀಡುತ್ತಿದ್ದ. ಹಿಮಾನಿ ಅವರ ಸಹೋದರ ಮತ್ತು ತಾಯಿ ದೀರ್ಘ ಸಮಯದಿಂದ ದೆಹಲಿಯಲ್ಲಿ ವಾಸಿಸುತ್ತಿದ್ದರು.

ಆರೋಪಿ ಸಚಿನ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆತನನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಹಿಮಾನಿಯವರಿಗೆ ಸಂಬಂಧಿಸಿದ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣವನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆರೋಪಿಯ ಮೊಬೈಲ್ ಅಂಗಡಿಯಿಂದ ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಮಾರ್ಚ್ 1ರಂದು ರೋಹ್ತಕ್-ದೆಹಲಿ ಹೆದ್ದಾರಿಯ ಸಂಪ್ಲಾ ಬಸ್ ನಿಲ್ದಾಣದ ಬಳಿ ಸೂಟ್‌ಕೇಸ್‌ನಲ್ಲಿ ಹಿಮಾನಿಯವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿರುವ ರೋಹ್ತಕ್ ರೇಂಜ್‌ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಕ್ರಿಶನ್ ಕುಮಾರ್ ರಾವ್, “ಫೆಬ್ರವರಿ 28ರಂದು ಮನೆಯಲ್ಲಿ ನಡೆದ ಜಗಳದಲ್ಲಿ ಸಚಿನ್ ಮೊಬೈಲ್ ಫೋನ್ ಚಾರ್ಜರ್ ಸಹಾಯದಿಂದ ಹಿಮಾನಿ ಅವರನ್ನು ಕೊಂದಿದ್ದಾನೆ” ಎಂದು ಹೇಳಿದ್ದಾರೆ.

“ಆರೋಪಿ ಸಾಮಾಜಿಕ ಜಾಲತಾಣದ ಮೂಲಕ ಕಳೆದ ಒಂದೂವರೆ ವರ್ಷದಿಂದ ಹಿಮಾನಿ ಅವರ ಜೊತೆ ಸಂಪರ್ಕದಲ್ಲಿದ್ದ. ವಿಜಯನಗರದ ಅವರ ಮನೆಗೆ ಕಳೆದ ಅರೇಳು ತಿಂಗಳಿನಿಂದ ಆತ ಆಗಾಗ ಭೇಟಿ ಕೊಡುತ್ತಿದ್ದ. ಫೆಬ್ರವರಿ 27ರಂದು ಹಿಮಾನಿ ಮನೆಗೆ ಹೋಗಿದ್ದ ಆರೋಪಿ ಇಡೀ ರಾತ್ರಿ ಆಕೆಯೊಂದಿಗೆ ಕಳೆದಿದ್ದ. ಮರುದಿನ ಹಣಕಾಸಿನ ವಿಷಯಕ್ಕೆ ಅವರಿಬ್ಬರ ನಡುವೆ ಜಗಳ ಶುರುವಾಗಿದೆ. ಅದು ತಾರಕಕ್ಕೇರಿ ಸಚಿನ್ ಹಿಮಾನಿಯ ಕೈಗಳನ್ನು ಆಕೆಯ ದುಪಟ್ಟದಿಂದ ಕಟ್ಟಿದ್ದು, ಬಳಿಕ ಮೊಬೈಲ್ ಚಾರ್ಜರ್‌ನಿಂದ ಆಕೆಯ ಕತ್ತು ಬಿಗಿದಿದ್ದಾನೆ. ನಂತರ ಆಕೆಯ ದೇಹವನ್ನು ರಕ್ತದ ಕಲೆಗಳಿದ್ದ ಹೊದಿಕೆಯೊಂದಿಗೆ ಸೂಟ್‌ಕೇಸ್‌ನಲ್ಲಿ ತುಂಬಿದ್ದಾನೆ” ಎಂದು ಎಡಿಜಿಪಿ ತಿಳಿಸಿದ್ದಾರೆ.

“ಕೊಲೆ ಬಳಿಕ ಹಿಮಾನಿಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಮತ್ತು ಆಭರಣಗಳನ್ನು ತೆಗೆದುಕೊಂಡ ಸಚಿನ್, ಅದನ್ನು ಜಜ್ಜರ್‌ನ ಕನೋಡ ಗ್ರಾಮದಲ್ಲಿರುವ ಆತನ ಮೊಬೈಲ್‌ ಅಂಗಡಿಗೆ ಕೊಂಡೊಯ್ದಿದ್ದ”.

“ಆರೋಪಿ ಸಚಿನ್ ಕಳವುಗೈದ ವಸ್ತುಗಳನ್ನು ಸಾಗಿಸಲು ಹಿಮಾನಿಯ ಸ್ಕೂಟರ್ ಬಳಸಿದ್ದ. ಬಳಿಕ ಹಿಮಾನಿಯ ಮನೆಗೆ ವಾಪಸ್ ಬಂದ ಆತ, ಹಿಮಾನಿಯ ಶವ ತುಂಬಿದ್ದ ಸೂಟ್‌ಕೇಸ್‌ ಜೊತೆ ರೋಹ್ತಕ್‌ನ ವಿಜಯ್ ನಗರದಿಂದ ದೆಹಲಿ ಬೈಪಾಸ್‌ವರೆಗೆ ಆಟೋದಲ್ಲಿ ತೆರಳಿದ್ದ. ಅಲ್ಲಿಂದ ಸಂಪ್ಲಾಗೆ (ಸುಮಾರು 26 ಕಿ.ಮೀ) ಬಸ್‌ನಲ್ಲಿ ಪ್ರಯಾಣಿಸಿದ್ದ. ನಂತರ, ಸುಮಾರು 80 ಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ಹೋಗಿ ಸೂಟ್‌ಕೇಸ್ ಅನ್ನು ಪೊದೆಗೆ ಎಸೆದಿದ್ದ” ಎಂದು ಎಡಿಜಿಪಿ ಹೇಳಿದ್ದಾರೆ.

“ಹಿಮಾನಿ ಯುವ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದರು. ಆರೋಪಿಗೆ ಯಾವುದೇ ರಾಜಕೀಯ ಸಂಪರ್ಕವಿಲ್ಲ. ಆಕೆ ಆತನಿಂದ ಹಣ ಪಡೆಯುತ್ತಿದ್ದರೋ ಅಥವಾ ಆತ ಆಕೆಯಿಂದ ಹಣ ಪಡೆಯುತ್ತಿದ್ದರೋ ಎಂಬ ಬಗ್ಗೆ ಇದುವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಈಗಾಗಲೇ ವಿವಾಹಿತನಾಗಿರುವುದರಿಂದ ಮತ್ತು ಆಕೆ ಒಂಟಿಯಾಗಿರುವುದರಿಂದ ಮದುವೆಯಾಗಲು ಎರಡೂ ಕಡೆಯಿಂದ ಒತ್ತಡವಿತ್ತು ಎನ್ನಲಾಗಿದೆ. ಈ ಬಗ್ಗೆಯೂ ಇಲ್ಲಿಯವರೆಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ರೋಹ್ತಕ್‌ನ ವೈಶ್ ಕಾನೂನು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಹಿಮಾನಿ, ಮಾರ್ಚ್ 1ರಂದು ಶವ ಪತ್ತೆಯಾಗುವ ಮೊದಲೇ ನಾಪತ್ತೆಯಾಗಿದ್ದರು. ಇವರು ಭಾರತ್ ಜೋಡೋ ಯಾತ್ರೆಯ ಹರಿಯಾಣದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದಿದ್ದರು.

ಸಿಸಿಟಿವಿ ವಿಡಿಯೋ ವೈರಲ್ : ಆರೋಪಿ ಸಚಿನ್ ರೋಹ್ತಕ್‌ನ ವಿಜಯನಗರದ ಮನೆಯಿಂದ ಹಿಮಾನಿಯವರ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿಕೊಂಡು ಹೋಗಿದ್ದಾರೆ ಎನ್ನಲಾದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.

ಚಂಡೀಗಢ| ರೈತ ನಾಯಕರನ್ನು ಮಧ್ಯರಾತ್ರಿ ಬಂಧಿಸಿದ ಪಂಜಾಬ್ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...